AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್

ಕೆಅರ್ ಪುರಂ - ಟಿಸಿ ಪಾಳ್ಯ ಜಂಕ್ಷನ್​ ಸಿಗ್ನಲ್​ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. 750 ಮೀಟರ್ ನಿಂದ 1 km ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಫ್ರೀ ಲೆಫ್ಟ್ ಟರ್ನ್ ಅನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದರು. ಇದೀಗ ಈ ಯೋಜನೆ ಯಶಸ್ವಿಯಾಗಿದ್ದು, ಯಾವುದೇ ಟ್ರಾಫಿಕ್ ಜಾಮ್ ಇಲ್ಲದೆ ವಾಹನಗಳು ಸಂಚಾರ ಮಾಡುತ್ತಿವೆ.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್
ಫ್ರೀ ಲೆಫ್ಟ್ ಟರ್ನ್ ಪ್ರಾಯೋಗಿಕ ಯೋಜನೆಯಿಂದಾಗಿ ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತವಾಗಿದೆ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on:Jan 04, 2024 | 12:23 PM

Share

ಬೆಂಗಳೂರು, ಜ.4: ಕೆಅರ್ ಪುರಂ – ಟಿಸಿ ಪಾಳ್ಯ ಜಂಕ್ಷನ್ (TC Palya Junction)​ ಸಿಗ್ನಲ್​ನಲ್ಲಿ ಟ್ರಾಫಿಕ್ (Traffic) ನಿಯಂತ್ರಣಕ್ಕೆ ಪೊಲೀಸರು ಪ್ರಾಯೋಗಿಕವಾಗಿ ಆರಂಭಿಸಿದ್ದ ಫ್ರೀ ಲೆಫ್ಟ್ ಟರ್ನ್ ಯಶಸ್ವಿಯಾಗಿದೆ. ಈ ಯೋಜನೆ ಜಾರಿ ನಂತರ ಜಂಕ್ಷನ್​ನಲ್ಲಿ ಯಾವುದೇ ಟ್ರಾಫಿಕ್ ಇಲ್ಲದೆ ವಾಹನಗಳು ಸುಗಮವಾಗಿ ಸಂಚರಿಸುತ್ತಿವೆ. ಜಂಕ್ಷನ್​ನಲ್ಲಿ ಸಿಗ್ನಲ್ ಅಳವಡಿಸಿರುವುದರಿಂದ ಪಾದಾಚಾರಿಗಳು ಯಾವುದೇ ತೊಂದರೆ ಇಲ್ಲದೆ ಓಡಾಡುವಂತಾಗಿದೆ.

ಪೂರ್ವ ವಿಭಾಗದ ಕೆ.ಆರ್.ಪುರಂ ಟ್ರಾಫಿಕ್ ವ್ಯಾಪ್ತಿಯ ಟಿಸಿ ಪಾಳ್ಯ ಜಂಕ್ಷನ್​ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿತ್ತು. 750 ಮೀಟರ್​ನಿಂದ 1 ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಜಂಕ್ಷನ್‌ನ ಮಧ್ಯ ಭಾಗದಲ್ಲಿ ಇದ್ದ ಸೆಂಟರ್ ಮಿಡಿಯನ್ ಮುಚ್ಚಿ ಫ್ರೀ ಲೆಫ್ಟ್ ಟರ್ನ್ ಮಾಡಿದರು.

ಇದನ್ನೂ ಓದಿ: ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್

ಫ್ರೀ ಲೆಫ್ಟ್ ಟರ್ನ್​ ಆರಂಭಿಸಿದ ನಂತರ ಟ್ರಾಫಿಕ್ ಜಾಮ್ ಇಲ್ಲದೆ ನೇರವಾಗಿ ಕೋಲಾರ ಹೊಸಕೋಟೆ, ಮೇಡಹಳ್ಳಿ ಕಡೆ ವಾಹನಗಳು ಸಂಚಾರ ಮಾಡುತ್ತಿವೆ. ಡಿಸೆಂಬರ್ 20 ರಿಂದ ಪ್ರಾಯೋಗಿಕ ಸಂಚಾರ ಶುರು ಮಾಡಿದ್ದರು. ಸದ್ಯ ಪೊಲೀಸರ ಈ ಯೋಜನೆ ಯಶಸ್ವಿಯಾಗಿದ್ದು, ಸ್ಥಳೀಯರು ಸಂಚಾರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 4 January 24

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ