AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ‘ಅಕ್ಕಿ ಗ್ಯಾರಂಟಿ’: ಕೇಂದ್ರ ಸರ್ಕಾರ ಒಪ್ಪಿದರೂ ಅಕ್ಕಿಭಾಗ್ಯ ಜಾರಿಗೆ ವಿಳಂಬ ಸಾಧ್ಯತೆ

ಎಲ್ಲ ಹಣಕಾಸು ಪ್ರಕ್ರಿಯೆ ನಡೆಯಲು ಕೂಡ ಜೂನ್ ತಿಂಗಳು ಪೂರ್ತಿ ಸಮಯ ಬೇಕಾಗಬಹುದು. ಹೀಗಾಗಿ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡಲು ಒಪ್ಪಿದರೂ ಅನ್ನಭಾಗ್ಯ ಜಾರಿಗೆ ವಿಳಂಬವಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ 'ಅಕ್ಕಿ ಗ್ಯಾರಂಟಿ': ಕೇಂದ್ರ ಸರ್ಕಾರ ಒಪ್ಪಿದರೂ ಅಕ್ಕಿಭಾಗ್ಯ ಜಾರಿಗೆ ವಿಳಂಬ ಸಾಧ್ಯತೆ
ಅಕ್ಕಿಭಾಗ್ಯ
Rakesh Nayak Manchi
Rakesh Nayak Manchi|

Updated on:May 30, 2023 | 4:03 PM

Share

ಬೆಂಗಳೂರು: ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ (Rice) ನೀಡಲು ಒಪ್ಪಿಗೆ ಸೂಚಿಸಿದರೂ ಕರ್ನಾಟಕದಲ್ಲಿ ಅನ್ನಭಾಗ್ಯ ಜಾರಿಗೆ ವಿಳಂಬವಾಗಲಿದೆ. ಇದಕ್ಕೆ ಸಂಬಂಧಿಸಿದ ಹಣಕಾಸು ಪ್ರಕ್ರಿಯೆ ನಡೆಯಲು ಸಂಪೂರ್ಣ ಜೂನ್ ತಿಂಗಳು ಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ. ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲು ಮಾಸಿಕ 742.86 ಕೋಟಿ ನೀಡಬೇಕು. ಎಲ್ಲ ಹಣಕಾಸು ಪ್ರಕ್ರಿಯೆ ಮುಗಿಸಲು 1 ತಿಂಗಳು ಸಮಯ ಬೇಕಾಗುತ್ತದೆ. ಕೇಂದ್ರ ನಿರಾಕರಿಸಿದರೆ ಟೆಂಡರ್ ಪ್ರಕ್ರಿಯೆಗೆ ಮತ್ತಷ್ಟು ಸಮಯ ಬೇಕಾಗುತ್ತದೆ. ಟೆಂಡರ್ ಮೂಲಕ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಹೊರೆ ಬೀಳಬಹುದು.

ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರರಿಗೆ 6 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಇದರಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ನೀಡುವ ಹೆಚ್ಚುವರಿ ಅಕ್ಕಿಗೆ ಹೆಚ್ಚುವರಿ ಹೊರೆ ಬೀಳಲಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಜನರಿಗೆ ಭರವಸೆ ನೀಡಿದಂತೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಗೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಅಕ್ಕಿ ಸೇರಿಸಬೇಕು. ಇದಕ್ಕಾಗಿ 742.86 ಕೋಟಿ ಹಣದ ಹೊರೆ ಬೀಳಲಿದೆ.

ಇದನ್ನೂ ಓದಿ: ತೆಲಂಗಾಣದಿಂದ ಹೆಚ್ಚುವರಿ 6.80 ಲಕ್ಷ ಮೆಟ್ರಿಕ್ ಟನ್ ಪ್ಯಾರಾ ಬಾಯಿಲ್ಡ್ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ; ಕಿಶನ್ ರೆಡ್ಡಿ

ಕರ್ನಾಟಕದಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಒಟ್ಟು ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಅಕ್ಕಿಯೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದರು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ನಾಯಕರೆಲ್ಲರೂ ಚುನಾವಣಾ ಪ್ರಚಾರದ ವೇಳೆ 10 ಕೆಜಿ ಉಚಿತ ಅಕ್ಕಿ ಬಗ್ಗೆ ಘೋಷಣೆ ಮಾಡುತ್ತಾ ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Tue, 30 May 23

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ