AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಶಾಯಿ, ನಗರದ ವಿವಿಧಡೆ ಸುರಿದ ಮಳೆ ಪ್ರಮಾಣ ಎಷ್ಟು?

ಬೆಂಗಳೂರು ಹಲವಡೆ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿನ ಗಿಡ-ಮರಗಳು ಧರಾಶಾಯಿಯಾಗಿದ್ದವು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ಆಫಿಸ್​ನಿಂದ ಮನೆಗಳಿಗೆ ತೆರಳುವವರು ಪರದಾಡುವಂತಾಯಿತು. ಹಾಗಿದ್ದರೆ ಶುಕ್ರವಾರ ಸುರಿದ ಮಳೆ ಪ್ರಮಾಣ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಶಾಯಿ, ನಗರದ ವಿವಿಧಡೆ ಸುರಿದ ಮಳೆ ಪ್ರಮಾಣ ಎಷ್ಟು?
ಬೆಂಗಳೂರು ಮಳೆ
ಶಾಂತಮೂರ್ತಿ
| Edited By: |

Updated on:Oct 05, 2024 | 11:10 AM

Share

ಬೆಂಗಳೂರು, ಅಕ್ಟೋಬರ್​ 05: ಆಗಾಗ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರು (Bengaluru) ಮಂದಿಗೆ ಶುಕ್ರವಾರ ಸಂಜೆ ವರುಣರಾಯ ತಂಪೆರೆದಿದ್ದಾನೆ. ಶುಕ್ರವಾರ ಸಂಜೆ ಶುರುವಾದ ಮಳೆ (Rain) ಶನಿವಾರ ಬೆಳಗ್ಗೆ 7:30ರವರೆಗೆ ನಗರದ ವಿವಿಧೆಡೆ ಭರ್ಜರಿಯಾಗಿ ಸುರಿದಿದೆ. ಈ ಮೂಲಕ ವಾರದ ಬಳಿಕ ಮತ್ತೆ ಮಳೆರಾಯನ ಆರ್ಭಟ ಬೆಂಗಳೂರಿನಲ್ಲಿ ಮತ್ತೆ ಶುರುವಾಗಿದೆ.

ನಗರದ ಹಲವಡೆ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿನ ಗಿಡ-ಮರಗಳು ಧರಾಶಾಯಿಯಾಗಿದ್ದವು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ಆಫಿಸ್​ನಿಂದ ಮನೆಗಳಿಗೆ ತೆರಳುವವರು ಪರದಾಡುವಂತಾಯಿತು. ಜಯನಗರದ 4th ಬ್ಲಾಕ್ ಸುತ್ತಮುತ್ತ ಧರೆಗುರುಳಿದ ರೆಂಬೆ, ಕೊಂಬೆಗಳು ಧರೆಗೆ ಉರಿಳಿದ್ದವು.

ನವರಾತ್ರಿ ಶುಕ್ರವಾರವಾಗಿದ್ದ ಹಿನ್ನೆಲಯಲ್ಲಿ ದೇವಿ ದೇವಸ್ಥಾನಗಳಿಗೆ ತೆರಳುತ್ತಿದ್ದ ಭಕ್ತಾದಿಗಳಿಗೆ ಮಳೆ ಅಡ್ಡಿಯಾಯಿತು. ಉತ್ಸವಗಳು ತಡವಾಗಿ ಆರಂಭವಾದವು. ಭಕ್ತರು ಮಳೆಯಲ್ಲಿ ನೆಂದು ದೇವಸ್ಥಾನಗಳಿಗೆ ತೆರಳುವಂತಾಯಿತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ

ಹಲವು ಬಡಾವಣೆಗಳಲ್ಲಿ ಸುರಿದ ಮಳೆ ಪ್ರಮಾಣ

ಶುಕ್ರವಾರ ಹೆಎಚ್​ಎಸ್​ಆರ್​ ಲೇಔಟ್​ನಲ್ಲಿ 35 ಮಿ.ಮೀ ಮಳೆಯಾಗಿದೆ. ಬಾಣಸವಾಡಿ 24 ಮಿ.ಮೀ, ರಾಮಮೂರ್ತಿ ನಗರ 22 ಮಿ.ಮೀ, ಹಂಪಿನಗರ 21 ಮಿ.ಮೀ, ವಿಶ್ವೇಶ್ವರಯ್ಯಪುರಂ 21 ಮಿ.ಮೀ, ಬಿಟಿಎಂ ಲೇಔಟ್ 16 ಮಿ.ಮೀ, ಚಾಮರಾಜಪೇಟೆ 16 ಮಿ.ಮೀ, ಬೊಮ್ಮನಹಳ್ಳಿ 18 ಮಿ.ಮೀ, ಬಸವನಪುರ 17.50 ಮಿ.ಮೀ, ಹೊರಮಾವು 16 ಮಿ.ಮೀ ಮತ್ತು ಕೋರಮಂಗಲದಲ್ಲಿ 16 ಮಿ.ಮೀ ಮಳೆಯಾಗಿದೆ.

ಅಕ್ಟೋಬರ್​ 8ವರೆಗು ಮಳೆ

ಅಕ್ಟೋಬರ್​ 8ವರೆಗು ಬೆಂಗಳೂರಿನ ವಿವಿಧಡೆ ಬೆಳಗ್ಗೆ ಅಥವಾ ಸಂಜೆ ನಂತರ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಜೆ ವೇಳೆ ಮನೆಯಿಂದ ಹೊರಗೆ ಹೋಗುವರು ಮತ್ತು ಕಚೇರಿ ನೌಕರರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಸಮುದ್ರ ಮೇಲ್ಮೈನಲ್ಲಿ ಉಂಟಾದ ಸ್ಟ್ರಫ್ ಕಾರಣದಿಂದ ಹಾಗೂ ಹಿಂಗಾರು ಮಳೆ ಸುರಿಸುವ ಮಾರುತಗಳು ನಿಗದಿತ ಸಮಯದಲ್ಲಿ ಸಕ್ರಿಯಗೊಂಡ ಪರಿಣಾಮ ಮಳೆಆಯಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Sat, 5 October 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ