AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಅಲೆಯ ಮಧ್ಯೆಯೂ ಮೋಜು ಮಸ್ತಿ.. ನ್ಯೂ ಹಾರಿಜಾನ್ ಕಾಲೇಜು ಆಗುತ್ತಾ ಕೊರೊನಾ ಹಾಟ್ ಸ್ಪಾಟ್?

ಮೂರನೇ ಅಲೆಯ ಮಧ್ಯೆಯೂ ನ್ಯೂ ಹಾರಿಜಾನ್ ಕಾಲೇಜ್​ನಲ್ಲಿ ಮೋಜು ಮಸ್ತಿ ಮಾಡಿದ್ದಾರೆ. ಸರ್ಕಾರದ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸ್ನೇಹಿತರ ದಿನೋತ್ಸವ ಹೆಸರಲ್ಲಿ ನ್ಯೂ ಹಾರಿಜಾನ್ ಕಾಲೇಜು ಮೋಜು ಮಸ್ತಿ ಮಾಡಿದೆ.

ಮೂರನೇ ಅಲೆಯ ಮಧ್ಯೆಯೂ ಮೋಜು ಮಸ್ತಿ.. ನ್ಯೂ ಹಾರಿಜಾನ್ ಕಾಲೇಜು ಆಗುತ್ತಾ ಕೊರೊನಾ ಹಾಟ್ ಸ್ಪಾಟ್?
ನ್ಯೂ ಹಾರಿಜಾನ್ ಕಾಲೇಜು ವಿದ್ಯಾರ್ಥಿಗಳಿಂದ ಮೋಜು ಮಸ್ತಿ
TV9 Web
| Updated By: sandhya thejappa|

Updated on:Aug 03, 2021 | 1:43 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ಶುರುವಾಗಿದೆ. ಕೊರೊನಾ ಮೂರನೇ ಅಲೆಯನ್ನು ಪ್ರಾರಂಭದಲ್ಲೆ ತಡೆಯಲು ಬಿಬಿಎಂಪಿ ತಯಾರಿ ನಡೆಸಿಕೊಳ್ಳುತ್ತಿದೆ. ಈಗಾಗಲೇ ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದೂ ಬೆಂಗಳೂರಿನ ನ್ಯೂ ಹಾರಿಜಾನ್ ಕಾಲೇಜಿನಲ್ಲಿ ರೂಲ್ಸ್ ಬ್ರೇಕ್ ಆಗಿದೆ. ಕೊವಿಡ್ ನಿಯಮ ಉಲ್ಲಂಘಿಸಿ ಕಾಲೇಜಿನಲ್ಲಿ ಮೋಜು ಮಸ್ತಿ ಮಾಡಿದ್ದಾರೆ.

ಮೂರನೇ ಅಲೆಯ ಮಧ್ಯೆಯೂ ನ್ಯೂ ಹಾರಿಜಾನ್ ಕಾಲೇಜ್​ನಲ್ಲಿ ಮೋಜು ಮಸ್ತಿ ಮಾಡಿದ್ದಾರೆ. ಸರ್ಕಾರದ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸ್ನೇಹಿತರ ದಿನೋತ್ಸವ ಹೆಸರಲ್ಲಿ ನ್ಯೂ ಹಾರಿಜಾನ್ ಕಾಲೇಜು ಮೋಜು ಮಸ್ತಿ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳನ್ನ ಕರೆದು ಮೊನ್ನೆ ರಾತ್ರಿ ಕಾಲೇಜಿನಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಕಾಲೇಜಿನೊಳಗೆ ಓಪನ್ ಸ್ಪೇಸ್​ನಲ್ಲಿ ತ್ರಿ ಇಡಿಯಟ್ ಸಿನಿಮಾ ಹಾಕಿ ಸಂಭ್ರಮಿಸಿದ್ದಾರೆ. ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫ್ರೆಂಡ್ ಶಿಪ್ ಡೇ ಹೆಸರಲ್ಲಿ ವಿದ್ಯಾರ್ಥಿಗಳು ಎಲ್ಲರೂ ಸೇರಿ ಕುಣಿದು ಎಂಜಾಯ್ ಮಾಡಿದ್ದಾರೆ. ಈ ವೇಳೆ ಯಾವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡಿರಲಿಲ್ಲ. ಹೀಗಾಗಿ ನ್ಯೂ ಹಾರಿಜಾನ್ ಕಾಲೇಜು ಕೊರೊನಾ ಹಾಟ್ ಸ್ಪಾಟ್ ಆಗುತ್ತಾ ಎಂಬ ಆತಂಕ ಶುರುವಾಗಿದೆ.

ಇದನ್ನೂ ಓದಿ

ಗಣಿನಾಡಲ್ಲಿ ಕೊರೊನಾ 3ನೇ ಅಲೆ ಆತಂಕ, ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರೋ ಬಗ್ಗೆ ತಜ್ಞರಿಂದ ವಾರ್ನಿಂಗ್

3ನೇ ಡೋಸ್ ಕೊರೊನಾ ಲಸಿಕೆ ವಿತರಣೆಗೆ ಚಿಂತನೆ; ಐಸಿಎಂಆರ್​ ಅನುಮತಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

(friendship day celebrated at New Horizon College amid Corona third wave in Bengaluru)

Published On - 12:56 pm, Tue, 3 August 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ