AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ

ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.

ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ
ಬೆಂಗಳೂರು ಹಬ್ಬ
ವಿವೇಕ ಬಿರಾದಾರ
|

Updated on:Nov 20, 2023 | 8:03 AM

Share

ಬೆಂಗಳೂರು ನ.20: ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಮುಂದಿನ ತಿಂಗಳು ನಗರದಾದ್ಯಂತ ನಡೆಯಲಿರುವ ‘ಬೆಂಗಳೂರು ಹಬ್ಬ’ಕ್ಕೆ (Bengaluru Habba) ಪಾಲಿಕೆಯ ಎಲ್ಲ ವಲಯಗಳು ಎಲ್ಲ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು ಶನಿವಾರ ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚಿಸಿದರು.

ಜಂಕ್ಷನ್‌ಗಳು, ಫ್ಲೈಓವರ್‌ಗಳು, ಉದ್ಯಾನವನಗಳು ಮತ್ತು ಮಾರುಕಟ್ಟೆಗಳಂತಹ ಪ್ರಮುಖ ಸ್ಥಳಗಳನ್ನು ಗುರುತಿಸಲಾಗುತ್ತದೆ. ಪಾರಂಪರಿಕ ಕಟ್ಟಡಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಶೃಂಗರಿಸಬೇಕು. ಮತ್ತು ಈ ಎಲ್ಲಾ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಇದನ್ನೂ ಓದಿ: ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ : ಡಿಎಸಿಂ ಡಿಕೆ ಶಿವಕುಮಾರ್​

ಬೆಂಗಳೂರು ಹಬ್ಬ ನಿರ್ದೇಶಕ ವಿ ರವಿಚಂದರ್ ಮಾತನಾಡಿ, ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ‘ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ’ವನ್ನು ಆಚರಿಸಲಾಗುತ್ತಿದ್ದು, ಇದನ್ನು 12 ವಿಭಾಗಗಳಾಗಿ ವಿಂಗಡಿಸಲಾಗಿದೆ. ಉತ್ಸವಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಮತ್ತು ನಾಗರಿಕರು ಉತ್ಸವದ ಬಗ್ಗೆ ವಿವರಗಳನ್ನು https://habba.unboxingblr.com ನಲ್ಲಿ ಪಡೆಯಬಹುದು ಮತ್ತು ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಡಿಸೆಂಬರ್ 1 ರಿಂದ 11ರ ವರೆಗೆ ಬೆಂಗಳೂರು ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ 2023 ನಡೆಯಲಿದೆ ಇದು ಕಲೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ, ತಂತ್ರಜ್ಞಾನ, ಪರಿಸರ, ವಿನ್ಯಾಸ, ನೃತ್ಯ, ಸಂಗೀತ ಮತ್ತು ರಂಗಭೂಮಿಗೆ ಸಂಬಂಧಿಸಿದ 300 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹೊಂದಿರುತ್ತದೆ.

Published On - 8:02 am, Mon, 20 November 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​