Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ

ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.

ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ
ಬೆಂಗಳೂರು ಹಬ್ಬ
Follow us
ವಿವೇಕ ಬಿರಾದಾರ
|

Updated on:Nov 20, 2023 | 8:03 AM

ಬೆಂಗಳೂರು ನ.20: ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಮುಂದಿನ ತಿಂಗಳು ನಗರದಾದ್ಯಂತ ನಡೆಯಲಿರುವ ‘ಬೆಂಗಳೂರು ಹಬ್ಬ’ಕ್ಕೆ (Bengaluru Habba) ಪಾಲಿಕೆಯ ಎಲ್ಲ ವಲಯಗಳು ಎಲ್ಲ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು ಶನಿವಾರ ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚಿಸಿದರು.

ಜಂಕ್ಷನ್‌ಗಳು, ಫ್ಲೈಓವರ್‌ಗಳು, ಉದ್ಯಾನವನಗಳು ಮತ್ತು ಮಾರುಕಟ್ಟೆಗಳಂತಹ ಪ್ರಮುಖ ಸ್ಥಳಗಳನ್ನು ಗುರುತಿಸಲಾಗುತ್ತದೆ. ಪಾರಂಪರಿಕ ಕಟ್ಟಡಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಶೃಂಗರಿಸಬೇಕು. ಮತ್ತು ಈ ಎಲ್ಲಾ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಇದನ್ನೂ ಓದಿ: ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ : ಡಿಎಸಿಂ ಡಿಕೆ ಶಿವಕುಮಾರ್​

ಬೆಂಗಳೂರು ಹಬ್ಬ ನಿರ್ದೇಶಕ ವಿ ರವಿಚಂದರ್ ಮಾತನಾಡಿ, ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ‘ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ’ವನ್ನು ಆಚರಿಸಲಾಗುತ್ತಿದ್ದು, ಇದನ್ನು 12 ವಿಭಾಗಗಳಾಗಿ ವಿಂಗಡಿಸಲಾಗಿದೆ. ಉತ್ಸವಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಮತ್ತು ನಾಗರಿಕರು ಉತ್ಸವದ ಬಗ್ಗೆ ವಿವರಗಳನ್ನು https://habba.unboxingblr.com ನಲ್ಲಿ ಪಡೆಯಬಹುದು ಮತ್ತು ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಡಿಸೆಂಬರ್ 1 ರಿಂದ 11ರ ವರೆಗೆ ಬೆಂಗಳೂರು ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ 2023 ನಡೆಯಲಿದೆ ಇದು ಕಲೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ, ತಂತ್ರಜ್ಞಾನ, ಪರಿಸರ, ವಿನ್ಯಾಸ, ನೃತ್ಯ, ಸಂಗೀತ ಮತ್ತು ರಂಗಭೂಮಿಗೆ ಸಂಬಂಧಿಸಿದ 300 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹೊಂದಿರುತ್ತದೆ.

Published On - 8:02 am, Mon, 20 November 23

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು