AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್​​ ಸಂಚಾರ

KSRTC Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್ ಸಂಚರಿಸಲಿದ್ದು, ಅತಿ ಕಡಿಮೆ ದರದಲ್ಲಿ ಸುಖಕರವಾದ ಪ್ರಯಾಣ ನಿಮ್ಮದಾಗುತ್ತದೆ.

Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್​​ ಸಂಚಾರ
ಎಲೆಕ್ಟ್ರಿಕ್​ ಬಸ್​​
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 14, 2023 | 4:02 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿಂದ ಮೈಸೂರು ಮಾರ್ಗವಾಗಿ  ಎಲೆಕ್ಟ್ರಿಕ್​ ​ಬಸ್​ ಬಿಡಲು ನಿರ್ಧರಿಸಿದೆ. ಜನವರಿ 16ರ ನಂತರ ಬಸ್​ಗಳು ರೋಡ್​ಗೆ ಇಳಿಯಲಿವೆ. ಇ ಬಸ್​ನ (E-Bus) ಪ್ರಯಾಣ ದರ 300 ರೂ. ಆಗಿರಲಿದೆ. ಇನ್ನು ಫೆಬ್ರವರಿ ಅಂತ್ಯದ ಒಳಗೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಸಂಪರ್ಕಿಸುವ 6 ಮಾರ್ಗಗಳಿಗೆ ಇ-ಬಸ್​ ಬಿಡುವ ಚಿಂತನೆ ಇದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌ , ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ  ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Sat, 14 January 23

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ