ಇಂದಿನಿಂದ ಬಿಜೆಪಿ ‘ಜನಾಶೀರ್ವಾದ ಯಾತ್ರೆ’ ಆರಂಭ; ಕೆಲ ಮಾಹಿತಿ ಇಲ್ಲಿದೆ ನೋಡಿ

ಬೆಳಗ್ಗೆ 11 ಗಂಟೆಗೆ ಮಂಡ್ಯದ ಪತ್ರಿಕಾ ಭವನದಲ್ಲಿ ಪ್ರೆಸ್ ಮೀಟ್​ನಲ್ಲಿ ಭಾಗಿಯಾಗಲಿರುವ ಶೋಭಾ ಕರಂದ್ಲಾಜೆ, ನಂತರ ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದಿನಿಂದ ಬಿಜೆಪಿ ‘ಜನಾಶೀರ್ವಾದ ಯಾತ್ರೆ’ ಆರಂಭ; ಕೆಲ ಮಾಹಿತಿ ಇಲ್ಲಿದೆ ನೋಡಿ
ಸಂಗ್ರಹ ಚಿತ್ರ
Follow us
| Updated By: sandhya thejappa

Updated on:Aug 16, 2021 | 11:00 AM

ಭಾರತೀಯ ಜನತಾ ಪಕ್ಷ (BJP) ಜನರನ್ನು ತಲುಪುವ ನಿಟ್ಟಿನಲ್ಲಿ ಜನಾಶೀರ್ವಾದ ಯಾತ್ರೆಯನ್ನು (Jan Ashirwad Yatra) ಪ್ರಾರಂಭಿಸಲು ಮುಂದಾಗಿದ್ದು, ಇಂದಿನಿಂದ (ಆಗಸ್ಟ್ 16) ಈ ಯಾತ್ರೆ ಆರಂಭವಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟ ಸೇರ್ಪಡೆಯಾದ 39 ಹೊಸ ಸಚಿವರ ಜನಾಶೀರ್ವಾದ ಯಾತ್ರೆಯಾಗಿದ್ದು, ದೊಡ್ಡ ಮಟ್ಟದ ಱಲಿ ಮೂಲಕ ಜನರನ್ನು ತಲುಪುವ ಹೊಸ ಯೋಜನೆಯಾಗಿದೆ. ಇಂದಿನಿಂದ ಈ ಜನಾಶೀರ್ವಾದ ಯಾತ್ರೆ ಶುರುವಾಗಿದೆ. ಜನಾಶೀರ್ವಾದ ಯಾತ್ರೆ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಮಂಡ್ಯಕ್ಕೆ ಆಗಮಿಸಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮಂಡ್ಯದ ಪತ್ರಿಕಾ ಭವನದಲ್ಲಿ ಪ್ರೆಸ್ ಮೀಟ್​ನಲ್ಲಿ ಭಾಗಿಯಾಗಲಿರುವ ಶೋಭಾ ಕರಂದ್ಲಾಜೆ, ನಂತರ ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಅಂಗಡಿಗೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇಂದಿನಿಂದ ಆರಂಭವಾಗುತ್ತಿರುವ ಈ ಜನಾಶೀರ್ವಾದ ಯಾತ್ರೆಯನ್ನು ಕೇಂದ್ರ ಇಲಾಖೆ ರಾಜ್ಯ ಸಚಿವರುಗಳು ಪ್ರಾರಂಭಿಸುತ್ತಿದ್ದಾರೆ. ಇದರಲ್ಲಿ ಕ್ಯಾಬಿನೆಟ್ ದರ್ಜೆಯ ಹೊಸ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. ಇಂದಿನಿಂದ ಶುರುವಾಗುವ ಈ ಜನಾಶೀರ್ವಾದ ಯಾತ್ರೆ ಸುಮಾರು 22 ರಾಜ್ಯಗಳಿಂದ, ಒಟ್ಟು 19,567 ಕಿಮೀಗಳಷ್ಟು ದೂರ ಸಂಚರಿಸಲಿದೆ. 22 ರಾಜ್ಯಗಳ, 265 ಜಿಲ್ಲೆಗಳು ಮತ್ತು 212 ಲೋಕಸಭಾ ಕ್ಷೇತ್ರಗಳ ಮೂಲಕ ಈ ನೂತನ ಸಚಿವರ ಜನಾಶೀರ್ವಾದ ಯಾತ್ರೆ ಸಂಚಾರ ಮಾಡಲಿದೆ.

ಈ ಬಗ್ಗೆ ಮಾತನಾಡಿದ್ದ ಬಿಜೆಪಿಯ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಇತ್ತೀಚೆಗೆ ಸಂಪುಟ ಸೇರ್ಪಡೆಯಾದ ಹೊಸ ಸಚಿವರು, ಜನರ ಆಶೀರ್ವಾದ ಪಡೆಯಲು ಯಾತ್ರೆ ಹೊರಡಲಿದ್ದಾರೆ. ಸಮಾಜದ ದುರ್ಬಲ ವರ್ಗಗಳು ಮತ್ತು ವಿವಿಧ ಬಡ ಸಮುದಾಯಗಳ ಏಳಿಗೆಗ ಬಿಜೆಪಿ ನೇತೃತ್ವದ ಸರ್ಕಾರ ಪ್ರಾತಿನಿಧ್ಯ ನೀಡಲಿದೆ ಎಂಬ ಸಂದೇಶವನ್ನು ಹೊತ್ತು ಈ ಯಾತ್ರೆ ಸಂಚಾರ ಮಾಡಲಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ

ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಸುಷ್ಮಿತಾ ದೇವ್

ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್ ಜನ್ಮದಿನದ ಪ್ರಯುಕ್ತ ಗೂಗಲ್ ಡೂಡಲ್ ವಿಶೇಷ ಗೌರವ

(From now on BJP has begun the Jan Ashirwad Yatra)

Published On - 10:56 am, Mon, 16 August 21

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ