ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ; ಗ್ರಾಹಕರಿಗೆ ಶಾಕ್

ಮಳೆ ಹಿನ್ನೆಲೆ ತರಕಾರಿ ಬೆಳೆ ಬೆಳೆಯಲು ಸಮಸ್ಯೆಯಾಗುತ್ತಿದೆ. ಇನ್ನು ಕೆಲವೆಡೆ ಬೆಳೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೊಲ, ಗದ್ದೆಗಳು ಕೆರೆಯಂತಾಗುತ್ತಿವೆ. ಹೀಗಾಗಿ ಬೆಳೆ ಬೆಳೆಯಲು ಸಮಸ್ಯೆಯಾಗಿದ್ದು ತರಕಾರಿ, ಹಣ್ಣುಗಳ ಬೆಲೆ ಹೆಚ್ಚಾಗುತ್ತಿದೆ. ಮಾರುಕಟ್ಟೆಗೆ ತರಕಾರಿಗಳು ಹೆಚ್ಚಾಗಿ ಬರದ ಕಾರಣ ಬೆಲೆ‌ ಏರಿಕೆಯಾಗಿದೆ.

ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ; ಗ್ರಾಹಕರಿಗೆ ಶಾಕ್
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: May 11, 2022 | 2:46 PM

ಬೆಂಗಳೂರು: ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಗಗನಕ್ಕೇರಿದೆ. 15 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಒಂದೇ ವಾರದಲ್ಲಿ 80 ರೂಗೆ ಏರಿಕೆಯಾಗಿದೆ. ಬೀನ್ಸ್, ಸೋಪ್ಪುಗಳು ಸೇರಿದಂತೆ ಇತರ ತರಕಾರಿಗಳ ಬೆಲೆಯೂ ಏರಿಕೆ ಕಂಡಿದೆ. ಹೀಗೆ ಮಳೆ ಮುಂದುವರೆದರೆ ತರಕಾರಿಗಳ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯಾತೆ ಇದೆ ಎನ್ನಲಾಗುತ್ತಿದೆ. ಮಳೆ ಹಿನ್ನೆಲೆ ತರಕಾರಿ ಬೆಳೆ ಬೆಳೆಯಲು ಸಮಸ್ಯೆಯಾಗುತ್ತಿದೆ. ಇನ್ನು ಕೆಲವೆಡೆ ಬೆಳೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೊಲ, ಗದ್ದೆಗಳು ಕೆರೆಯಂತಾಗುತ್ತಿವೆ. ಹೀಗಾಗಿ ಬೆಳೆ ಬೆಳೆಯಲು ಸಮಸ್ಯೆಯಾಗಿದ್ದು ತರಕಾರಿ, ಹಣ್ಣುಗಳ ಬೆಲೆ ಹೆಚ್ಚಾಗುತ್ತಿದೆ. ಮಾರುಕಟ್ಟೆಗೆ ತರಕಾರಿಗಳು ಹೆಚ್ಚಾಗಿ ಬರದ ಕಾರಣ ಬೆಲೆ‌ ಏರಿಕೆಯಾಗಿದೆ. ತರಕಾರಿ‌ ಬೆಲೆ ಕೇಳಿ ಗ್ರಾಹಕರು ಬಾಯ್ ಮೇಲೆ ಬೆರಳು ಇಟ್ಟುಕೊಳ್ಳುವಂತಾಗಿದೆ. ಹೀಗೆ ಬೆಲೆ ಏರಿಕೆ ಮುಂದುವರೆದರೆ ಜೀವನ ಹೇಗೆ ಮಾಡೋದು ಅಂತ ಗ್ರಾಹಕರು ಪ್ರಶ್ನೆ ಮಾಡಿದ್ದಾರೆ.

ಇಂದಿನ ತರಕಾರಿಗಳ‌ ಬೆಲೆ ಹೇಗಿದೆ?
ಬೀನ್ಸ್ -80 ರೂ
ಕ್ಯಾರೆಟ್ -80 ರೂ
ಬಿಟ್ ರೋಟ್ -30ರೂ
ಕ್ಯಾಪ್ಸಿಕಮ್ -60 ರೂ
ನವಿಲುಕೋಸು -40 ರೂ
ಬೆಂಡೆಕಾಯಿ -30 ರೂ
ಶುಂಟಿ -80 ರೂ
ಮೆಣಸಿನಕಾಯಿ -80ರೂ
ಟೋಮಾಟೋ -80ರೂ
ಮೂಲಂಗಿ -30ರೂ
ಈರುಳ್ಳಿ -20ರೂ
ಬದನೆಕಾಯಿ -40 ರೂ
ಕೊತ್ತಂಬರಿ ಸೊಪ್ಪು -40ರೂ

ಇಂದಿನ ಹಣ್ಣುಗಳ‌ ಬೆಲೆ ಹೇಗಿದೆ?
ಸೇಬು ಕೆಜಿಗೆ -160 ರೂ
ದಾಳಿಂಬೆ ಕೆಜಿಗೆ -300 ರೂ
ದಾಕ್ಷಿ ಕೆಜಿಗೆ -100 ರೂ
ಮಾವಿನ ಹಣ್ಣು -120 ರೂ
ಕಿತ್ತಲೆ -120 ರೂ
ಅಪೋಟ -70 ರೂ
ಬಾಳೆಹಣ್ಣು -70 ರೂ
ಸೀಬೆಹಣ್ಣು -60 ರೂ
ಮೊಸಂಬಿ -100 ರೂ
ಪೈನಪಲ್ -40 ರೂ
ಇನ್ನು ಒಂದು ತಿಂಗಳು ತರಕಾರಿ ಬೆಲೆ ಹೆಚ್ಚಾಗುವ ಸಾಧ್ಯಾತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲಿಂಬೆ ಬೆಳೆ ಉಳಿಸಿಕೊಳ್ಳಲು ರೈತರ ಹರ ಸಾಹಸ
ಇನ್ನು ವಿಜಯಪುರದಲ್ಲಿ ಲಿಂಬೆ ಬೆಳೆ ಉಳಿಸಲು ಬೆಳೆಗಾರರು ಹರ ಸಾಹಸ ಪಡುತ್ತಿದ್ದಾರೆ. ಇಂಡಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ರೈತರು ಲಿಂಬೆ ತೋಟಕ್ಕೆ ಟ್ಯಾಂಕರ್ ಮೂಲಕ ನೀರು ಬಿಡುತ್ತಿದ್ದಾರೆ. ಕೆಲವು ಕಿಲೋ ಮೀಟರ್ ದೂರ ಸಾಗಿ ಅಲ್ಲಿಂದ ಟ್ಯಾಂಕರ್ ಮೂಲಕ ನೀರು ತಂದು ಹಾಕುತ್ತಿದ್ದಾರೆ. ಒಂದು ಟ್ಯಾಂಕರ್ ನೀರಿಗೆ 1000 ರಿಂದ 1500 ರೂಪಾಯಿ ಖರ್ಚು ಆಗುತ್ತಿದೆ. ನೂರಾರು ಲಿಂಬೆ ಗಿಡಗಳನ್ನು ಉಳಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಖರ್ಚು ಮಾಡುವಂತ ಪರಿಸ್ಥಿತಿ ಎದುರಾಗಿದೆ. ಸಾಲಸೋಲ ಮಾಡಿ ಲಿಂಬೆ ಬೆಳೆಗಳನ್ನ ಉಳಿಸಿಕೊಳ್ಳೋಕೆ ಲಿಂಬೆ ಬೆಳೆಗಾರರು ಹೋರಾಡುತ್ತಿದ್ದಾರೆ. ಬೇಸಿಗೆಯಲ್ಲಿ ಲಿಂಬೆ ಒಣಗಿ ಹೋದರೆ ಎಲ್ಲಾ ಬೆಳೆ ನಾಶವಾಗೋ ಭಯದಲ್ಲಿ ದಿನ ಕಳೆಯುತ್ತಿದ್ದಾರೆ. ಲಿಂಬೆ ಅಭಿವೃದ್ದಿ ಮಂಡಳಿ ಜಿಲ್ಲೆಯಲ್ಲಿ ಇದ್ದೂ ಇಲ್ಲದಂತಾಗಿದೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಟ್ಯಾಂಕರ್ ಮೂಲಕ ನೀರು ಹಾಕುತ್ತಿರೋ ರೈತರ ನೆರವಿಗೆ ಲಿಂಬೆ ಅಭಿವೃದ್ದಿ ಮಂಡಳಿ, ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರ ಸಹಾಯ ಮಾಡಬೇಕೆಂದು ಆಗ್ರಹಿಸಿದ್ದಾರೆ.

Published On - 2:35 pm, Wed, 11 May 22

Web contact

TV9 Kannada

Read More
Follow Us