AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FSLನಿಂದ ಪಿಎಸ್ಐ ಅಭ್ಯರ್ಥಿಗಳ ಅಕ್ರಮ ಬಟಾಬಯಲು! ನಾಳೆ ಹೈಕೋರ್ಟ್​ಗೆ ವರದಿ ಸಲ್ಲಿಕೆ

ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್​ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

FSLನಿಂದ ಪಿಎಸ್ಐ ಅಭ್ಯರ್ಥಿಗಳ ಅಕ್ರಮ ಬಟಾಬಯಲು! ನಾಳೆ ಹೈಕೋರ್ಟ್​ಗೆ ವರದಿ ಸಲ್ಲಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jul 03, 2022 | 10:41 AM

Share

ಬೆಂಗಳೂರು: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾದ ದಿನದಿಂದ ಸಿಐಡಿ (CID) ಅಧಿಕಾರಿಗಳು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮದ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಲವಾರು ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಸದ್ಯ ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವುದು ಬಟಾಬಯಲಾಗಿದ್ದು, ಈ ಬಗ್ಗೆ ಎಫ್ಎಸ್ಎಲ್ ವರದಿಯನ್ನು (PSL Report) ನಾಳೆ ಹೈಕೋರ್ಟ್​ಗೆ ಸಲ್ಲಿಕೆ ಮಾಡಲಾಗುತ್ತದೆ.

ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್​ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಅಕ್ರಮ ನಡೆದಿರುವುದು ಪಕ್ಕಾ ಆಗಿದೆ. ಸದ್ಯ ಎಫ್ಎಸ್ಎಲ್ ವರದಿ ಸಿಐಡಿ ಕೈಯಲ್ಲಿದ್ದು, ನಾಳೆ ಕೋರ್ಟ್ಗೆ ನೀಡಲಾಗುತ್ತದೆ.

ಇದನ್ನೂ ಓದಿ: ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್​ಗೆ ಮನವಿ

ಇದನ್ನೂ ಓದಿ
Image
Happiness: ನೀವು ಸದಾ ಸಂತೋಷವಾಗಿರಲು ಈ ಸಲಹೆಗಳನ್ನು ಪಾಲಿಸಿ
Image
ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
Image
International Plastic Bag Free Day 2022: ಪ್ಲಾಸ್ಟಿಕ್ ಮುಕ್ತ ವಿಶ್ವದತ್ತ ಸದೃಢ ಹೆಜ್ಜೆಯ ಸಂಕಲ್ಪಕ್ಕೆ ಇಂದು ಶುಭದಿನ
Image
Benefits Of Barberries: ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಂತಹ ಕಾಯಿಲೆಗಳಿಗೆ ಸಹಕಾರಿ ಬಾರ್ಬೆರ್ರಿ ಹಣ್ಣು..!

ನೇಮಕಾತಿಯಲ್ಲಿ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢ: ಪ್ರಕರಣ ಸಂಬಂಧ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢವಾಗಿದೆ. ಎಫ್​ಎಸ್​​ಎಲ್​ ವರದಿಯಲ್ಲಿ ಅಭ್ಯರ್ಥಿ ದರ್ಶನ್ ಅಕ್ರಮದ ಸತ್ಯ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಉತ್ತರ ಬರೆಯದೆ ದರ್ಶನ್ ಗೌಡ ರ್ಯಾಂಕ್ ​ ಬಂದಿದ್ದ. ಪರೀಕ್ಷೆ ದಿನ ಸಂಪೂರ್ಣ ಗೊತ್ತಿದ್ದ ಕೆಲವು ಉತ್ತರ ಮಾತ್ರ ಬರೆದಿದ್ದ. ಉಳಿದ ಜಾಗದಲ್ಲಿ ಹಾಗೆ ಬಿಟ್ಟು ಉತ್ತರ ಪತ್ರಿಕೆ ಕೊಟ್ಟು ಹೋಗಿದ್ದ. ನೇಮಕಾತಿ ವಿಭಾಗದಲ್ಲೇ ಆರೋಪಿಯ ಉತ್ತರ ಪತ್ರಿಕೆ ತಿದ್ದಿದ್ದಾರೆ. ಖಾಲಿ ಉತ್ತರ ಪತ್ರಿಕೆಯನ್ನು ದರ್ಶನ್ ಗೌಡ ಕೊಟ್ಟು ಹೋಗಿದ್ದು, ಬಳಿಕ ಒಎಂಆರ್​ ಶೀಟ್ ನಂಬರ್ ತಿಳಿಸಿದ್ದ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿ ನಟಿ ಪವೀತ್ರ ಲೋಕೇಶ್ ನಟ ನರೇಶ್? ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್​​ನ್ನು ಸಿಐಡಿ  ಡಿವೈಎಸ್​ಪಿ ಬಿ.ಕೆ.ಶೇಖರ್ ತಂಡ ನಿನ್ನೆ ಚನ್ನಪಟ್ಟಣದಲ್ಲಿ ಬಂಧಿಸಿದೆ. ಎಸ್.ಜಾಗೃತ್ ಪರೀಕ್ಷೆಯಲ್ಲಿ 4ನೇ ರ್ಯಾಂಕ್​​ ಬಂದಿದ್ದನು. ಎಸ್.ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್​​ಐಆರ್ ಹಾಕಿರುವುದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಈ ಜಾಗೃತನೂ ಒಬ್ಬನಾಗಿದ್ದಾನೆ.

Published On - 10:36 am, Sun, 3 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ