AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FSLನಿಂದ ಪಿಎಸ್ಐ ಅಭ್ಯರ್ಥಿಗಳ ಅಕ್ರಮ ಬಟಾಬಯಲು! ನಾಳೆ ಹೈಕೋರ್ಟ್​ಗೆ ವರದಿ ಸಲ್ಲಿಕೆ

ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್​ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

FSLನಿಂದ ಪಿಎಸ್ಐ ಅಭ್ಯರ್ಥಿಗಳ ಅಕ್ರಮ ಬಟಾಬಯಲು! ನಾಳೆ ಹೈಕೋರ್ಟ್​ಗೆ ವರದಿ ಸಲ್ಲಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 03, 2022 | 10:41 AM

Share

ಬೆಂಗಳೂರು: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾದ ದಿನದಿಂದ ಸಿಐಡಿ (CID) ಅಧಿಕಾರಿಗಳು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮದ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಲವಾರು ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಸದ್ಯ ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವುದು ಬಟಾಬಯಲಾಗಿದ್ದು, ಈ ಬಗ್ಗೆ ಎಫ್ಎಸ್ಎಲ್ ವರದಿಯನ್ನು (PSL Report) ನಾಳೆ ಹೈಕೋರ್ಟ್​ಗೆ ಸಲ್ಲಿಕೆ ಮಾಡಲಾಗುತ್ತದೆ.

ಓಎಂಆರ್ ಶೀಟ್, ಕಾರ್ಬನ್ ಶೀಟ್​ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್​ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಅಕ್ರಮ ನಡೆದಿರುವುದು ಪಕ್ಕಾ ಆಗಿದೆ. ಸದ್ಯ ಎಫ್ಎಸ್ಎಲ್ ವರದಿ ಸಿಐಡಿ ಕೈಯಲ್ಲಿದ್ದು, ನಾಳೆ ಕೋರ್ಟ್ಗೆ ನೀಡಲಾಗುತ್ತದೆ.

ಇದನ್ನೂ ಓದಿ: ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್​ಗೆ ಮನವಿ

ಇದನ್ನೂ ಓದಿ
Image
Happiness: ನೀವು ಸದಾ ಸಂತೋಷವಾಗಿರಲು ಈ ಸಲಹೆಗಳನ್ನು ಪಾಲಿಸಿ
Image
ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
Image
International Plastic Bag Free Day 2022: ಪ್ಲಾಸ್ಟಿಕ್ ಮುಕ್ತ ವಿಶ್ವದತ್ತ ಸದೃಢ ಹೆಜ್ಜೆಯ ಸಂಕಲ್ಪಕ್ಕೆ ಇಂದು ಶುಭದಿನ
Image
Benefits Of Barberries: ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಂತಹ ಕಾಯಿಲೆಗಳಿಗೆ ಸಹಕಾರಿ ಬಾರ್ಬೆರ್ರಿ ಹಣ್ಣು..!

ನೇಮಕಾತಿಯಲ್ಲಿ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢ: ಪ್ರಕರಣ ಸಂಬಂಧ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢವಾಗಿದೆ. ಎಫ್​ಎಸ್​​ಎಲ್​ ವರದಿಯಲ್ಲಿ ಅಭ್ಯರ್ಥಿ ದರ್ಶನ್ ಅಕ್ರಮದ ಸತ್ಯ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಉತ್ತರ ಬರೆಯದೆ ದರ್ಶನ್ ಗೌಡ ರ್ಯಾಂಕ್ ​ ಬಂದಿದ್ದ. ಪರೀಕ್ಷೆ ದಿನ ಸಂಪೂರ್ಣ ಗೊತ್ತಿದ್ದ ಕೆಲವು ಉತ್ತರ ಮಾತ್ರ ಬರೆದಿದ್ದ. ಉಳಿದ ಜಾಗದಲ್ಲಿ ಹಾಗೆ ಬಿಟ್ಟು ಉತ್ತರ ಪತ್ರಿಕೆ ಕೊಟ್ಟು ಹೋಗಿದ್ದ. ನೇಮಕಾತಿ ವಿಭಾಗದಲ್ಲೇ ಆರೋಪಿಯ ಉತ್ತರ ಪತ್ರಿಕೆ ತಿದ್ದಿದ್ದಾರೆ. ಖಾಲಿ ಉತ್ತರ ಪತ್ರಿಕೆಯನ್ನು ದರ್ಶನ್ ಗೌಡ ಕೊಟ್ಟು ಹೋಗಿದ್ದು, ಬಳಿಕ ಒಎಂಆರ್​ ಶೀಟ್ ನಂಬರ್ ತಿಳಿಸಿದ್ದ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿ ನಟಿ ಪವೀತ್ರ ಲೋಕೇಶ್ ನಟ ನರೇಶ್? ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್​​ನ್ನು ಸಿಐಡಿ  ಡಿವೈಎಸ್​ಪಿ ಬಿ.ಕೆ.ಶೇಖರ್ ತಂಡ ನಿನ್ನೆ ಚನ್ನಪಟ್ಟಣದಲ್ಲಿ ಬಂಧಿಸಿದೆ. ಎಸ್.ಜಾಗೃತ್ ಪರೀಕ್ಷೆಯಲ್ಲಿ 4ನೇ ರ್ಯಾಂಕ್​​ ಬಂದಿದ್ದನು. ಎಸ್.ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್​​ಐಆರ್ ಹಾಕಿರುವುದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಈ ಜಾಗೃತನೂ ಒಬ್ಬನಾಗಿದ್ದಾನೆ.

Published On - 10:36 am, Sun, 3 July 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ