AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G 20 Summit 2023: ಜಿ20 ಶೃಂಗಸಭೆ, ಬೆಂಗಳೂರಿನ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧ

ಬೆಂಗಳೂರು ನಗರದಲ್ಲಿ ನಾಳೆಯಿಂದ ಆರಂಭಗೊಳ್ಳಲಿರುವ ಜಿ20 ಶೃಂಗಸಭೆ 2023 ಹಿನ್ನೆಲೆ ತಾಜ್‌ವೆಸ್ಟೆಂಡ್‌ ಹೋಟೆಲ್​ನ 1 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾಗೂ ಏರ್​ಕ್ರಾಫ್ಟ್​ ಹಾರಾಟ ನಿಷೇಧಿಸಲಾಗಿದೆ.

G 20 Summit 2023: ಜಿ20 ಶೃಂಗಸಭೆ, ಬೆಂಗಳೂರಿನ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧ
ಜಿ20 ಶೃಂಗಸಭೆ 2023 ಹಿನ್ನೆಲೆ ಅತಿಥಿಗಳು ತಂಗಲಿರುವ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧImage Credit source: FILE
Follow us
Shivaprasad
| Updated By: Rakesh Nayak Manchi

Updated on: Jul 04, 2023 | 10:20 PM

ಬೆಂಗಳೂರು: ನಗರದಲ್ಲಿ ಜುಲೈ 6 ಮತ್ತು 7 ರಂದು ಜಿ20 ಶೃಂಗಸಭೆ 2023 (G20 Summit 2023) ನಡೆಯಲಿದೆ. ಅದರಂತೆ ಸಭೆಯಲ್ಲಿ ಭಾಗಿಯಾಗುವ ವಿದೇಶಿ ಪ್ರತಿನಿಧಿಗಳು, ವಿವಿಐಪಿಗಳು ಜುಲೈ 5ರಿಂದ ತಾಜ್‌ವೆಸ್ಟೆಂಡ್‌ ಹೋಟೆಲ್​ನಲ್ಲಿ ತಂಗಲಿರುವ ಹಿನ್ನೆಲೆ ಅಂದಿನಿಂದ ಹೊಟೇಲ್​ನ 1 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾಗೂ ಏರ್​ಕ್ರಾಫ್ಟ್​ ಹಾರಾಟ ನಿಷೇಧಿಸಿ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಜು.6 ಮತ್ತು 7ರಂದು ತಾಜ್‌ವೆಸ್ಟೆಂಡ್‌ ಸುತ್ತಮುತ್ತ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದ್ದು, ಓರ್ವ ಡಿಸಿಪಿ, ನಾಲ್ವರು ಎಸಿಪಿ, 11 ಇನ್ಸ್‌ಪೆಕ್ಟರ್‌, 32 ಪಿಎಸ್‌ಐ, 190 ಹೆಚ್‌ಸಿ, 40 ಪಿಸಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ.

ಬೆಂಗಳೂರಿನಲ್ಲಿ ಜಿ 20 ಶೃಂಗ ಸಭೆ ಹಿನ್ನಲೆ ವಿದೇಶಿ ಪ್ರತಿನಿಧಿಗಳು, ವಿವಿಐಪಿ ಸಭೆಯಲ್ಲಿ ಭಾಗಿಯಾಗುವವರು ತಾಜ್‌ವೆಸ್ಟೆಂಡ್‌ ಹೋಟೆಲ್​ನಲ್ಲಿ ತಂಗಲಿದ್ದಾರೆ. ಹೀಗಾಗಿ 1 ಕಿ.ಮೀ ವ್ಯಾಪ್ತಿಯೊಳಗೆ ತಾತ್ಕಾಲಿಕ ನೋ ಫ್ಲೈನ್ ಜೋನ್​ಗೆ ಆದೇಶಿಸಿಸುವಂತೆ ಕೇಂದ್ರ ವಿಭಾಗ ಡಿಸಿಪಿ ಮಾಡಿದ ಮನವಿ ಮೇರೆಗೆ ಪೊಲೀಸ್ ಆಯುಕ್ತರು ಡ್ರೋಣ್, ಏರ್ ಕ್ರಾಫ್ಟ್ ಹಾರಾಟ ನಿಷೇಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಜಿ20 ಶೃಂಗಸಭೆಗೆ ಸೆಪ್ಟೆಂಬರ್​​​ ತಿಂಗಳಲ್ಲಿ ನವದೆಹಲಿಯಲ್ಲಿ ಚಾಲನೆ ನೀಡಲಾಗಿದ್ದು, ಕರ್ನಾಟಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಕಡೆಗಳಲ್ಲಿ ಶೃಂಗಸಭೆ ನಡೆಯಲಿದೆ. ಜುಲೈ 6 ಮತ್ತು 7 ರಂದು ಬೆಂಗಳೂರಿನಲ್ಲಿ, ಜುಲೈ 9-16ರ ವರೆಗೆ ಹಂಪಿಯಲ್ಲಿ, ಆಗಸ್ಟ್ 1 ರಿಂದ 2 ರವರೆಗೆ ಮೈಸೂರಿನಲ್ಲಿ, ಆಗಸ್ಟ್ 16ರಿಂದ 19ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ