AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G 20 Summit 2023: ಜಿ20 ಶೃಂಗಸಭೆ, ಬೆಂಗಳೂರಿನ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧ

ಬೆಂಗಳೂರು ನಗರದಲ್ಲಿ ನಾಳೆಯಿಂದ ಆರಂಭಗೊಳ್ಳಲಿರುವ ಜಿ20 ಶೃಂಗಸಭೆ 2023 ಹಿನ್ನೆಲೆ ತಾಜ್‌ವೆಸ್ಟೆಂಡ್‌ ಹೋಟೆಲ್​ನ 1 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾಗೂ ಏರ್​ಕ್ರಾಫ್ಟ್​ ಹಾರಾಟ ನಿಷೇಧಿಸಲಾಗಿದೆ.

G 20 Summit 2023: ಜಿ20 ಶೃಂಗಸಭೆ, ಬೆಂಗಳೂರಿನ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧ
ಜಿ20 ಶೃಂಗಸಭೆ 2023 ಹಿನ್ನೆಲೆ ಅತಿಥಿಗಳು ತಂಗಲಿರುವ ತಾಜ್‌ವೆಸ್ಟೆಂಡ್‌ ಹೋಟೆಲ್ ವ್ಯಾಪ್ತಿಯಲ್ಲಿ ಡ್ರೋನ್‌, ಏರ್‌ಕ್ರಾಫ್ಟ್​​ ಹಾರಾಟ ನಿಷೇಧImage Credit source: FILE
Shivaprasad B
| Edited By: Rakesh Nayak Manchi|

Updated on: Jul 04, 2023 | 10:20 PM

Share

ಬೆಂಗಳೂರು: ನಗರದಲ್ಲಿ ಜುಲೈ 6 ಮತ್ತು 7 ರಂದು ಜಿ20 ಶೃಂಗಸಭೆ 2023 (G20 Summit 2023) ನಡೆಯಲಿದೆ. ಅದರಂತೆ ಸಭೆಯಲ್ಲಿ ಭಾಗಿಯಾಗುವ ವಿದೇಶಿ ಪ್ರತಿನಿಧಿಗಳು, ವಿವಿಐಪಿಗಳು ಜುಲೈ 5ರಿಂದ ತಾಜ್‌ವೆಸ್ಟೆಂಡ್‌ ಹೋಟೆಲ್​ನಲ್ಲಿ ತಂಗಲಿರುವ ಹಿನ್ನೆಲೆ ಅಂದಿನಿಂದ ಹೊಟೇಲ್​ನ 1 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾಗೂ ಏರ್​ಕ್ರಾಫ್ಟ್​ ಹಾರಾಟ ನಿಷೇಧಿಸಿ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಜು.6 ಮತ್ತು 7ರಂದು ತಾಜ್‌ವೆಸ್ಟೆಂಡ್‌ ಸುತ್ತಮುತ್ತ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದ್ದು, ಓರ್ವ ಡಿಸಿಪಿ, ನಾಲ್ವರು ಎಸಿಪಿ, 11 ಇನ್ಸ್‌ಪೆಕ್ಟರ್‌, 32 ಪಿಎಸ್‌ಐ, 190 ಹೆಚ್‌ಸಿ, 40 ಪಿಸಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ.

ಬೆಂಗಳೂರಿನಲ್ಲಿ ಜಿ 20 ಶೃಂಗ ಸಭೆ ಹಿನ್ನಲೆ ವಿದೇಶಿ ಪ್ರತಿನಿಧಿಗಳು, ವಿವಿಐಪಿ ಸಭೆಯಲ್ಲಿ ಭಾಗಿಯಾಗುವವರು ತಾಜ್‌ವೆಸ್ಟೆಂಡ್‌ ಹೋಟೆಲ್​ನಲ್ಲಿ ತಂಗಲಿದ್ದಾರೆ. ಹೀಗಾಗಿ 1 ಕಿ.ಮೀ ವ್ಯಾಪ್ತಿಯೊಳಗೆ ತಾತ್ಕಾಲಿಕ ನೋ ಫ್ಲೈನ್ ಜೋನ್​ಗೆ ಆದೇಶಿಸಿಸುವಂತೆ ಕೇಂದ್ರ ವಿಭಾಗ ಡಿಸಿಪಿ ಮಾಡಿದ ಮನವಿ ಮೇರೆಗೆ ಪೊಲೀಸ್ ಆಯುಕ್ತರು ಡ್ರೋಣ್, ಏರ್ ಕ್ರಾಫ್ಟ್ ಹಾರಾಟ ನಿಷೇಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: G20 Summit: ರಾಜ್ಯದ ಪ್ರಮುಖ ಈ 3 ಸ್ಥಳಗಳಲ್ಲಿ ನಡೆಯಲಿದೆ G20 ಶೃಂಗಸಭೆ, ಇಲ್ಲಿದೆ ವೇಳಾಪಟ್ಟಿ

ಜಿ20 ಶೃಂಗಸಭೆಗೆ ಸೆಪ್ಟೆಂಬರ್​​​ ತಿಂಗಳಲ್ಲಿ ನವದೆಹಲಿಯಲ್ಲಿ ಚಾಲನೆ ನೀಡಲಾಗಿದ್ದು, ಕರ್ನಾಟಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಕಡೆಗಳಲ್ಲಿ ಶೃಂಗಸಭೆ ನಡೆಯಲಿದೆ. ಜುಲೈ 6 ಮತ್ತು 7 ರಂದು ಬೆಂಗಳೂರಿನಲ್ಲಿ, ಜುಲೈ 9-16ರ ವರೆಗೆ ಹಂಪಿಯಲ್ಲಿ, ಆಗಸ್ಟ್ 1 ರಿಂದ 2 ರವರೆಗೆ ಮೈಸೂರಿನಲ್ಲಿ, ಆಗಸ್ಟ್ 16ರಿಂದ 19ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ