
ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ.
ಮಾರ್ಚ್ 27ರ ಬೆಳಿಗ್ಗೆ 07 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 26, 2026
ರಥೋತ್ಸವದ ಸಮಯದಲ್ಲಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಹಾಗೂ ಅನಿವಾರ್ಯವಿದ್ದಲ್ಲಿ ಮಾತ್ರ ಈ ರಸ್ತೆಯನ್ನು ಬಳಸುವಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಚರಿಸುವ ಮುನ್ನ ಗೂಗಲ್ ಮ್ಯಾಪ್ ಅಥವಾ ಸಂಚಾರಿ ಪೊಲೀಸರ ಅಧಿಕೃತ ಸೂಚನೆಗಳನ್ನು ಗಮನಿಸುವುದು ಉತ್ತಮ.
ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆ ಮಾರ್ಚ್ 27 ರಿಂದ ಇಂದಿನಿಂದ 3 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಾತ್ರಿ 12ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, HAL ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು, ವೈಟ್ ಫೀಲ್ಡ್ ಕಡೆ ಹೋಗುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತ್ತಹಳ್ಳಿ ಬ್ರಿಡ್ಜ್ ಮೂಲಕ HAL ಕಡೆಗೂ ಸಂಚಾರ ನಿರ್ಬಂಧ ಮಾಡಲಾಗಿದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.