AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ

ಆನ್‌ಲೈನ್ ರಮ್ಮಿ ಸಂಸ್ಥೆ ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್ ಮೇಲೆ ಇಡಿ ದಾಳಿ ನಡೆಸಿ, 526 ಕೋಟಿ ರೂ. ಆಸ್ತಿ ಜಪ್ತಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆ (PMLA) ಅಡಿ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ. ಕಂಪನಿ ಆಟಗಾರರ ವಿರುದ್ಧ ಬಾಟ್‌ಗಳನ್ನು ಬಳಸಿ ವಂಚಿಸಿದೆ ಮತ್ತು ನಿಷಿದ್ಧ ರಾಜ್ಯಗಳಲ್ಲಿ ಜಿಯೋ-ಲೊಕೇಶನ್ ತಿದ್ದಿ ಆಡಲು ಅವಕಾಶ ನೀಡಿದೆ. ಈ ಹಗರಣದಿಂದ ಸಾವಿರಾರು ಆಟಗಾರರು ಮಾನಸಿಕ ಯಾತನೆ ಅನುಭವಿಸಿದ್ದಾರೆ.

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 15, 2026 | 9:06 AM

Share

ಬೆಂಗಳೂರು, ಮೇ.15 : ಆನ್‌ಲೈನ್ ರಮ್ಮಿ ಗೇಮಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಬೆಂಗಳೂರು ಮೂಲದ ‘ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್’ (Gameskraft Technologies) ಕಂಪನಿಯ ಕರಾಳ ಮುಖ ಅನಾವರಣಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ನಡೆಸಿದ ಸರಣಿ ದಾಳಿಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ.

ಮೇ 7 ರಿಂದ 13 ರವರೆಗೆ ಬೆಂಗಳೂರು ಮತ್ತು ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್, ಮ್ಯೂಚುವಲ್ ಫಂಡ್ ಮತ್ತು ಸ್ಥಿರ ಠೇವಣಿಗಳನ್ನು ಫ್ರೀಜ್ ಮಾಡಲಾಗಿದೆ. ಜೊತೆಗೆ 3.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು 11 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಕಂಪನಿಯ ನಿರ್ದೇಶಕರಾದ ಪೃಥ್ವಿ ರಾಜ್ ಸಿಂಗ್, ವಿಕಾಸ್ ತನೇಜಾ ಮತ್ತು ದೀಪಕ್ ಸಿಂಗ್ ಅಹ್ಲಾವತ್ ಅವರನ್ನು ಇಡಿ ಬಂಧಿಸಿದೆ.RummyCulture, RummyPrime, Playship ಮತ್ತು RummyTime ನಂತಹ ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಈ ಕಂಪನಿ ವ್ಯವಹಾರ ನಡೆಸುತ್ತಿತ್ತು. ಕಂಪನಿಯು ತನ್ನ ವೇದಿಕೆಯಲ್ಲಿ ಯಾವುದೇ ಬಾಟ್‌ಗಳಿಲ್ಲ, ಇದು ಪಾರದರ್ಶಕವಾಗಿದೆ ಎಂದು ಭರವಸೆ ನೀಡಿತ್ತು. ಆದರೆ, ಇಡಿ ತನಿಖೆಯ ಪ್ರಕಾರ, ಬಳಕೆದಾರರಿಗೆ ತಿಳಿಯದಂತೆ ಅವರ ವಿರುದ್ಧ ಕಂಪನಿಯೇ ಬಾಟ್‌ಗಳನ್ನು (ಕಂಪ್ಯೂಟರ್ ಪ್ರೋಗ್ರಾಂ) ಬಳಸುತ್ತಿತ್ತು. ಇದರಿಂದಾಗಿ ಸಾವಿರಾರು ಆಟಗಾರರು ಹಣ ಕಳೆದುಕೊಂಡು ಮಾನಸಿಕ ಯಾತನೆ ಅನುಭವಿಸಿದ್ದಾರೆ.

ಇದನ್ನೂ ಓದಿ: CNG Price Hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ಆನ್‌ಲೈನ್ ಗೇಮಿಂಗ್ ನಿಷೇಧವಿರುವ ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ರಾಜ್ಯಗಳ ಬಳಕೆದಾರರಿಗೂ ಆಡಲು ಅವಕಾಶ ನೀಡಲು ಕಂಪನಿಯು ಅವರ ಜಿಯೋ ಲೊಕೇಶನ್ ಅನ್ನು ಟ್ಯಾಂಪರ್ (ತಿದ್ದುಪಡಿ) ಮಾಡಿತ್ತು. ಆಟಗಾರರಿಂದ ಕಮಿಷನ್ ರೂಪದಲ್ಲಿ ಪಡೆದ ಕೋಟ್ಯಂತರ ರೂಪಾಯಿ ಲಾಭವನ್ನು ವಿದೇಶಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವ ಮೂಲಕ ಹಣ ವರ್ಗಾವಣೆ ಮಾಡಲಾಗಿತ್ತು ಎಂದು ತನಿಖೆ ಬಹಿರಂಗಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್