AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ

ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ಪತಿ ಸೂರಜ್ ಕುಟುಂಬ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದೆ. ಗಾನವಿ ಹಿಂದೆ ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದಳು, ಮದುವೆ ನಂತರ ಪ್ರೀತಿ ವಿಚಾರವನ್ನು ಆಕೆ ಸೂರಜ್‌ಗೆ ತಿಳಿಸಿದ್ದಳು. ಹೀಗಾಗಿಯೇ ಹನಿಮೂನ್​ನಿಂದ ಅವರು ಅರ್ಧಕ್ಕೇ ವಾಪಸ್​​ ಆಗಿದ್ದು, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕುಟುಂಬಸ್ಥರ ಆರೋಪಗಳಿಗೆ ನೊಂದು ಸೂರಜ್​​ ಕೂಡ ಪ್ರಾಣ ಬಿಟ್ಟಿದ್ದಾರೆ ಎಂದು ಕೋರ್ಟ್​​ಗೆ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ
ಗಾನವಿ ಮತ್ತು ಸೂರಜ್​​
Ramesha M
| Edited By: |

Updated on: Dec 29, 2025 | 5:23 PM

Share

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ.

ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ ತೆರಳಿದ್ದ ಗಾನವಿ ಡಿ.25ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಗೆ ಸೂರಜ್​​ ಮನೆಯವರಿಂದ ಯಾವುದೇ ಕಿರುಕುಳವಾಗಿಲ್ಲ. ಮಾನಸಿಕ ವೈದ್ಯರೊಂದಿಗೆ ಸೂರಜ್ ಸಮಾಲೋಚನೆ ನಡೆಸಲಾಗಿದೆ. ಯಾವುದೇ ಮಾನಸಿಕ, ವೈದ್ಯಕೀಯ ಕಾರಣಗಳಿಲ್ಲ. ಹೀಗಿದ್ದರೂ ಅವರ ಕುಟುಂಬದ ವಿರುದ್ಧ ಸುಳ್ಳು ಆರೋಪ ಹೊರಿಸಿದ್ದಾರೆ. ಅಪಮಾನ, ನಿಂದನೆ ತಡೆಯದೇ ಸೂರಜ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿದಾರರ ಪರ ವಕೀಲರು ಕೋರ್ಟ್​​ಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗಾನವಿ-ಸೂರಜ್ ಪ್ರಕರಣ; ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಸ್ಫೋಟಕ ರಹಸ್ಯ ಬಯಲು

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ನಿನ್ನೆಯಷ್ಟೇ ಹೊಸ ಟ್ವಿಸ್ಟ್​​ ಸಿಕ್ಕಿತ್ತು. ಗಾನವಿ ಈ ಹಿಂದೆ ಹರ್ಷ ಎಂಬಾತನನ್ನ ಪ್ರೀತಿ ಮಾಡುತ್ತಿದ್ದಳು. ಆತನನ್ನೆ ಮದುವೆಯಾಗ್ಬೇಕು ಎಂದು ನಿರ್ಧರಿಸಿದ್ದಳು. ಆದರೆ ಮನೆಯವರ ಒತ್ತಾಯಕ್ಕೆ ಗಾನವಿ ಸೂರಜ್​​ನ ಮದುವೆಯಾಗಿದ್ದಳು. ಶ್ರೀಲಂಕಾಗೆ ಹನಿಮೂನ್​​ಗೆ ಹೋದಾಗ ಹರ್ಷ ಜೊತೆಗಿನ ಪ್ರೀತಿ ವಿಚಾರವನ್ನು ಆಕೆಯೇ ಸೂರಜ್​​ಗೆ ತಿಳಿಸಿದ್ದಳು. ಹೀಗಾಗಿಯೇ ಹನಿಮೂನ್​​ಗೆ ತೆರಳಿದ್ದ ಅವರು ಅರ್ಧಕ್ಕೇ ಬೆಂಗಳೂರಿಗೆ ಹಿಂದಿರುಗಿದ್ದರು. ನಂತರ ತವರಿಗೆ ತೆರಳಿದ್ದ ಆಕೆ ಅಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಆರೋಪವನ್ನು ನಮ್ಮ ಕುಟುಂಬದ ವಿರುದ್ಧ ಹೊರಿಸಲಾಗಿದೆ ಎಂದು ಸೂರಜ್​​ ಭಾವ ರಾಜ್​​ಕುಮಾರ್​​ ವಿದ್ಯಾರಣ್ಯಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ