Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Gandhi Jayanti Meat Ban: ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ

ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Oct 01, 2023 | 7:13 AM

ಬೆಂಗಳೂರು, ಅ.01: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬ ಹಿನ್ನೆಲೆ ಅಕ್ಟೋಬರ್ 2 ರಂದು ದೇಶದಲ್ಲಿ ಗಾಂಧಿ ಜಯಂತಿ (Gandhi Jayanti) ಆಚರಿಸಲಾಗುತ್ತೆ. ಈ ವಿಶೇಷ ದಿನದಂದು ನಗರದಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ (BBMP) ನಿಷೇಧಿಸಿದೆ. ಬಿಬಿಎಂಪಿಯ ಪ್ರಾಣಿ ಸಲಹಾ ವಿಭಾಗವು ಈ ಕುರಿತು ಆದೇಶ ಹೊರಡಿಸಿದೆ (Meat Sale Ban).

‘ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಮಾಂಸ ಮಾರಾಟ ಮಾಡದಂತೆ ಇಲಾಖೆ ಸೂಚನೆ ನೀಡಿದ್ದು, ತಪ್ಪಿದಲ್ಲಿ ಪಾಲಿಕೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನು ಮತ್ತೊಂದೆಡೆ ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ಮಾಂಸ ಮಾರಾಟ ಇರಲ್ಲ ಎಂದು ಪಾಲಿಕೆ ಪಶುಸಂಗೋಪನಾ ಇಲಾಖೆ ಜಂಟಿ-ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದೊರೆತ ಸಂಭ್ರಮದ ಸಂದರ್ಭದಲ್ಲಿ ಕೋಮು ಸಾಮರಸ್ಯಕ್ಕಾಗಿ ಕೋಲ್ಕತ್ತದಲ್ಲಿದ್ದ ಮಹಾತ್ಮ ಗಾಂಧಿ!

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್‌ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.

ಮಹಾತ್ಮ ಗಾಂಧಿ ಜೀ ಅವರು ಅಕ್ಟೋಬರ್ 2, 1869 ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ಇವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು, ಗಾಂಧಿ ಜಯಂತಿಯನ್ನು ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ದಿನದಂದು ಮಾಂಸ ಮಾರಾಟ ನಿಷೇಧಿಸಲಾಗುತ್ತದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 7:10 am, Sun, 1 October 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ