AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2021: ಗಣೇಶ ಗೈಡ್​ಲೈನ್ಸ್ ಮತ್ತೊಮ್ಮೆ ಬದಲು: ಒಂದು ವಾರ್ಡ್​ನಲ್ಲಿ ಒಂದೇ ಗಣೇಶ ನಿಯಮ ಕೈಬಿಟ್ಟ ಬಿಬಿಎಂಪಿ

ಒಂದು ವಾರ್ಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.

Ganesh Chaturthi 2021: ಗಣೇಶ ಗೈಡ್​ಲೈನ್ಸ್ ಮತ್ತೊಮ್ಮೆ ಬದಲು: ಒಂದು ವಾರ್ಡ್​ನಲ್ಲಿ ಒಂದೇ ಗಣೇಶ ನಿಯಮ ಕೈಬಿಟ್ಟ ಬಿಬಿಎಂಪಿ
ಬಿಬಿಎಂಪಿ ಮುಖ್ಯ ಕಚೇರಿ
TV9 Web
| Updated By: guruganesh bhat|

Updated on:Sep 09, 2021 | 3:51 PM

Share

ಬೆಂಗಳೂರು: ಗಣೇಶೋತ್ಸವ ಸಮಿತಿಗಳ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದೆ. ಬೇಡಿಕೆ ಬಂದಲ್ಲಿ ಒಂದು ವಾರ್ಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ. ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಗಣೇಶ ಉತ್ಸವ ಸಮಿತಿ, ಮೂರ್ತಿ ತಯಾರಕರ ಧರಣಿಯನ್ನು ಹಿಂಪಡೆದಿದ್ದಾರೆ.  3 ದಿನದ ಆಚರಣೆಯ ನಿಯಮವನ್ನೂ ಬಿಬಿಎಂಪಿ ಹಿಂಪಡೆದಿದೆ ಎಂದು ತಿಳಿದುಬಂದಿದೆ. ಆದರೆ ಈಕುರಿತು ಅಧಿಕೃತ ಆದೇಶ ಇನ್ನೂ ಬಿಡುಗಡೆಗೊಂಡಿಲ್ಲ.

ಈಕುರಿತು ಟಿವಿ9 ಜತೆ ಮಾತನಾಡಿದ  ಬೆಂಗಳೂರು ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ರಾಜ್, ಯಾವುದೇ ಸರ್ಕಾರ ಧಾರ್ಮಿಕ ವಿಚಾರಕ್ಕೆ ತಲೆ ಹಾಕಬಾರದು ಎಂಬ ವಿಷಯಕ್ಕೆ ಜಯ ಸಿಕ್ಕಿದೆ. ಗಣಪತಿ ಮೂರ್ತಿ ಎತ್ತರದ ಬಗ್ಗೆ ಕೂಡ ಬಿಬಿಎಂಪಿ ನಿಯಮ ಹಿಂಪಡೆದಿದೆ.  ಕಲ್ಯಾಣಿಗಳಲ್ಲಿ ವಿಸರ್ಜನೆ ಅವಕಾಶ ಕೊಟ್ಟಿದೆ. ಗಣೇಶ ಹಬ್ಬ ಆಚರಿಸಲು ಚೌತಿ ಯಿಂದ ಚರ್ತುದರ್ಶಿವರೆಗೆಗೂ ಅವಕಾಶ ಮಾಡಿಕೊಟ್ಟಿದ್ದಾರೆ. ಎಲ್ಲಾ ರೀತಿಯ ಅನುಕೂಲ ಮಾಡಿಕೊಳ್ಳುತ್ತೇವೆ ಹಾಗೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ. ವಾರ್ಡ್ ನಲ್ಲಿ ಎಲ್ಲಾ ಸಮಿತಿಗೂ ಗಣೇಶ ಕೂರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: 

ತಿಲಕರಿಂದ ಸ್ಫೂರ್ತಿಗೊಂಡು ಉತ್ತರ ಕರ್ನಾಟಕದಲ್ಲೇ ಮೊದಲು ಶುರುವಾಯ್ತು ಸಾರ್ವಜನಿಕ ಗಣೇಶೋತ್ಸವ

ಬಿಬಿಎಂಪಿ ಕಚೇರಿಯಲ್ಲಿ ಗಣೇಶ ಮೂರ್ತಿ ಸ್ಥಾಪನೆ, ಪಟಾಕಿ ಹೊಡೆದು ಪ್ರತಿಭಟನೆ; ಸಂಜೆಯೊಳಗೆ ಅಂತಿಮ ತೀರ್ಮಾನ ಎಂದ ಸಿಎಂ

(Ganesh Chaturthi 2021 Bengaluru Guidelines changed On Ganesh in one word rule aborted BBMP )

Published On - 3:45 pm, Thu, 9 September 21

ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ