AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2021: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ? ಇಂದು ಸಭೆ ಕರೆದ ಸಿಎಂ ಬೊಮ್ಮಾಯಿ‌

ಗೌರಿ ಗಣೇಶ ಹಬ್ಬ ಆಚರಣೆಗೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಕಾಟವೂ ಕಡಿಮೆ ಆಗಿದೆ. ಹೀಗಾಗಿ ಯುವಕರು ಏರಿಯಾದಲ್ಲಿ ಗಣೇಶ ಕೂರಿಸಿ, ಎಂಜಾಯ್ ಮಾಡೋಕೆ ಸೈಲೆಂಟಾಗಿ ಪ್ಲ್ಯಾನ್ ಮಾಡ್ತಿದ್ದಾರೆ. ಸರ್ಕಾರ ಗಣೇಶ ಉತ್ಸವಕ್ಕೆ ಅನುಮತಿ ಕೊಡುತ್ತಾ ಅಂತಾ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಇವತ್ತು ಒಂದು ನಿರ್ಧಾರಕ್ಕೆ ಬರಲಿದೆ. ಅದ್ರ ಡಿಟೇಲ್ಸ್ ಇಲ್ಲಿದೆ.

Ganesh Chaturthi 2021: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ? ಇಂದು ಸಭೆ ಕರೆದ ಸಿಎಂ ಬೊಮ್ಮಾಯಿ‌
ಗಣೇಶ ವಿಗ್ರಹ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Aug 30, 2021 | 7:36 AM

Share

ಬೆಂಗಳೂರು: ಡಿಜೆ ಮ್ಯೂಸಿಕ್.. ತಮಟೆ ಸೌಂಡ್.. ಜೊತೆಯಲ್ಲಿ ಗಲ್ಲಿ ಬಾಯ್ಸ್.. ಊರಿನ ತುಂಬಾ ಹಬ್ಬವೋ ಹಬ್ಬ.. ನಿಜಕ್ಕೂ ಗಣೇಶ ಹಬ್ಬ ಎಂಟ್ರಿ ಕೊಟ್ರೆ ಮುಗೀತ್.. ಒಂದು ತಿಂಗಳು ಯುವಕರು ಫುಲ್ ಎಂಜಾಯ್ ಮಾಡ್ತಾರೆ. ಆದ್ರೆ, ಕೊರೊನಾ ಕಾಟದಿಂದ ಕಳೆದ ವರ್ಷ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಆದ್ರೆ, ಈ ವರ್ಷ ಸೋಂಕಿನ ಸಂಖ್ಯೆ ಕಡಿಮೆ ಆಗಿರೋದ್ರಿಂದ ಸಾಮೂಹಿಕ ಗಣೇಶೋತ್ಸವಕ್ಕೆ ಅನುಮತಿ ಸಿಗುತ್ತಾ ಅಂತಾ ಎಲ್ರು ಕಾಯುತ್ತಿದ್ದಾರೆ.

ಇಂದು ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ‌ ರಾಜ್ಯದಲ್ಲಿ ಸಂಪೂರ್ಣವಾಗಿ ಕೊರೊನಾ ಸೋಂಕು ಕಡಿಮೆಯಾಗಿಲ್ಲ. ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಇದ್ರ ಬೆನ್ನಲ್ಲೇ ಗೌರಿ ಗಣೇಶ ಹಬ್ಬಕ್ಕೆ ಕೌಂಟ್ಡೌನ್ ಶುರುವಾಗಿದೆ. ಆದ್ರೆ, ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆ ಮಾಡ್ಬೇಕಾ ಅಥವಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದಾರೆ. ಹೀಗಾಗಿ ಈ ಗೊಂದಲಕ್ಕೆ ಇವತ್ತು ಸಂಜೆ ತೆರೆ ಬೀಳುವ ಸಾಧ್ಯತೆ ಇದೆ. ಯಾಕಂದ್ರೆ, ಸಾಮೂಹಿಕ ಗಣೇಶ ಆಚರಣೆ ವಿಚಾರವಾಗಿ ಇವತ್ತು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ. ಇವತ್ತು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 4 ಗಂಟೆಗೆ ಸಭೆ ನಡೆಯಲಿದ್ದು, ಸಿಎಂ, ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವರು, ಬಿಬಿಎಂಪಿ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ. ಇಷ್ಟೇ ಅಲ್ಲ, ಗಣೇಶೋತ್ಸವ ಆಚರಣೆಗೆ ಕೆಲ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ.

ಇನ್ನು ಕಳೆದ ವರ್ಷ ರಾಜ್ಯದಲ್ಲಿ ಕೊವಿಡ್ ಅಟ್ಟಹಾಸ ಹೆಚ್ಚಾಗಿತ್ತು. ಇದ್ರಿಂದ ಸಾಮೂಹಿಕ ಗಣೇಶ ಆಚರಣೆಗೆ ಸರ್ಕಾರ ಅವಕಾಶ ಕೊಟ್ಟಿರಲಿಲ್ಲ. ಆದ್ರೆ, ಈ ಬಾರಿ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ ಇದ್ದು, ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವಂತೆ ಸಾಕಷ್ಟು ಒತ್ತಡ ಇದೆ. ಅಷ್ಟೇ ಅಲ್ಲದೆ ಗಣೇಶ ಆಚರಣೆಗೆ ಅವಕಾಶ ಕೊಡುವಂತೆ ವಿಪಕ್ಷ ನಾಯಕರು ಹಾಗೂ ಸ್ವಪಕ್ಷದವರು ಕೂಡ ಸಿಎಂಗೆ ಒತ್ತಡ ಹಾಕುತ್ತಿದ್ದಾರೆ. ಇದರ ಜೊತೆಗೆ ಹಬ್ಬ ಆಚರಣೆಗೆ ಸಾಕಷ್ಟು ವಿರೋಧವೂ ಕೂಡ ಕೇಳಿ ಬರುತ್ತಿದೆ. ಹೀಗಾಗಿ ಇವತ್ತು ಗಣೇಶ ಹಬ್ಬ ಆಚರಣೆ ವಿಚಾರವಾಗಿ ಸಿಎಂ ಮಹತ್ವದ ಸಭೆ ಕರೆದಿದ್ದು, ಮಹತ್ವದ ನಿರ್ಧಾರಕ್ಕೆ ಬರಲಿದ್ದಾರೆ.

ಸದ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಸಾಕಷ್ಟು ಪರ-ವಿರೋಧ ಮತ್ತು 3ನೇ ಅಲೆ ಅತಂಕ ಎದುರಾಗಿದೆ. ಹೀಗಾಗಿ ಇವತ್ತಿನ ಸಭೆಯಲ್ಲಿ ಸಿಎಂ ಯಾವ ನಿರ್ಧಾರಕ್ಕೆ ಬರಲಿದ್ದಾರೆ ಅನ್ನೋ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: 1 ರಿಂದ 8ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಕುರಿತು ಮಹತ್ವದ ಸಭೆ: ಚರ್ಚೆಯಾಗಲಿರುವ ಪ್ರಮುಖ ಸಂಗತಿಗಳೇನು?

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ