AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2021: 2 ಸಾವಿರ ನೀಡಿ ಗೌರಿ ಗಣೇಶ ಮೂರ್ತಿ ಖರೀದಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆರ್.ವಿ.ದೇವರಾಜ್, ಆರ್.ವಿ.ಯುವರಾಜ, ಮಹಮ್ಮದ್ ನಲಪಾಡ್ ಸಹಯೋಗ ನೀಡಿದ್ದರು.

Ganesh Chaturthi 2021: 2 ಸಾವಿರ ನೀಡಿ ಗೌರಿ ಗಣೇಶ ಮೂರ್ತಿ ಖರೀದಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಗೌರಿ ಗಣೇಶ ಮೂರ್ತಿ ಖರೀದಿಸಿದ ಡಿ ಕೆ ಶಿವಕುಮಾರ್
TV9 Web
| Edited By: |

Updated on:Sep 09, 2021 | 8:23 PM

Share

ಬೆಂಗಳೂರು: ಗಣೇಶ ಮೂರ್ತಿ ತಯಾರಕರ ಮಳಿಗೆಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಗಣೇಶ ಮೂರ್ತಿ ತಯಾರಕರ ಸಮಸ್ಯೆ ಆಲಿಸಿದರು. ಬೆಂಗಳೂರಿನ ಮಾವಳ್ಳಿ ಆರ್.ವಿ.ರಸ್ತೆಯಲ್ಲಿರುವ ಮಳಿಗೆಗಳಿಗೆ ಅವರು ಭೇಟಿ ನೀಡಿದರು. ಇದೇ ವೇಳೆ ₹ 2 ಸಾವಿರ ನೀಡಿ ಗೌರಿ ಗಣೇಶ ಮೂರ್ತಿಯನ್ನು ಸಹ ಅವರು ಖರೀದಿ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆರ್.ವಿ.ದೇವರಾಜ್, ಆರ್.ವಿ.ಯುವರಾಜ, ಮಹಮ್ಮದ್ ನಲಪಾಡ್ ಸಹಯೋಗ ನೀಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದ್ದಾರೆ. ಕೊವಿಡ್ ನಿಯಮಗಳನ್ನ ಪಾಲಿಸಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವಂತೆ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಗಣೇಶ ಮೂರ್ತಿ ಸಂಘಟಕರು ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲ್ಲಿದ್ದೇವೆ ಎಂದು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗಣೇಶೋತ್ಸವ ಸಮಿತಿಗಳ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದೆ. ಬೇಡಿಕೆ ಬಂದಲ್ಲಿ ಒಂದು ವಾರ್ಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ. ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಗಣೇಶ ಉತ್ಸವ ಸಮಿತಿ, ಮೂರ್ತಿ ತಯಾರಕರ ಧರಣಿಯನ್ನು ಹಿಂಪಡೆದಿದ್ದಾರೆ.  3 ದಿನದ ಆಚರಣೆಯ ನಿಯಮವನ್ನೂ ಬಿಬಿಎಂಪಿ ಹಿಂಪಡೆದಿದೆ ಎಂದು ತಿಳಿದುಬಂದಿದೆ. ಆದರೆ ಈಕುರಿತು ಅಧಿಕೃತ ಆದೇಶ ಇನ್ನೂ ಬಿಡುಗಡೆಗೊಂಡಿಲ್ಲ.

ಈಕುರಿತು ಟಿವಿ9 ಜತೆ ಮಾತನಾಡಿದ  ಬೆಂಗಳೂರು ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ರಾಜ್, ಯಾವುದೇ ಸರ್ಕಾರ ಧಾರ್ಮಿಕ ವಿಚಾರಕ್ಕೆ ತಲೆ ಹಾಕಬಾರದು ಎಂಬ ವಿಷಯಕ್ಕೆ ಜಯ ಸಿಕ್ಕಿದೆ. ಗಣಪತಿ ಮೂರ್ತಿ ಎತ್ತರದ ಬಗ್ಗೆ ಕೂಡ ಬಿಬಿಎಂಪಿ ನಿಯಮ ಹಿಂಪಡೆದಿದೆ.  ಕಲ್ಯಾಣಿಗಳಲ್ಲಿ ವಿಸರ್ಜನೆ ಅವಕಾಶ ಕೊಟ್ಟಿದೆ. ಗಣೇಶ ಹಬ್ಬ ಆಚರಿಸಲು ಚೌತಿ ಯಿಂದ ಚರ್ತುದರ್ಶಿವರೆಗೆಗೂ ಅವಕಾಶ ಮಾಡಿಕೊಟ್ಟಿದ್ದಾರೆ. ಎಲ್ಲಾ ರೀತಿಯ ಅನುಕೂಲ ಮಾಡಿಕೊಳ್ಳುತ್ತೇವೆ ಹಾಗೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ. ವಾರ್ಡ್ ನಲ್ಲಿ ಎಲ್ಲಾ ಸಮಿತಿಗೂ ಗಣೇಶ ಕೂರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: 

ಗಣಪತಿ ವಿಗ್ರಹಗಳನ್ನು ಸ್ಪಾನ್ಸರ್ ಮಾಡದ ರಾಜಕಾರಣಿಗಳು; ಗಣೇಶನ ವಿಗ್ರಹಗಳ ಮಾರಾಟದಲ್ಲಿ ತೀವ್ರ ಕುಸಿತ

Tv9 Impact: ಗೌರಿ ಗಣೇಶ ಹಬ್ಬಕ್ಕೆ ಟಿವಿ9 ಉಡುಗೊರೆ ನೀಡಿತು: ಸಿಎಂ ಸ್ಪೀಕಿಂಗ್ Tv9 ಕಾರ್ಯಕ್ರಮದಲ್ಲಿ ಪರಿಹಾರ ದೊರೆತವರ ಖುಷಿಯ ವ್ಯಾಖ್ಯಾನ

Published On - 7:52 pm, Thu, 9 September 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು