AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಈ ವರ್ಷ 1.75 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ನಿರೀಕ್ಷೆ

ಬೆಂಗಳೂರಿನಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಜೋರಾಗಿಯೇ ನಡೆಯುತ್ತಿದೆ. ಮನೆ ಮನೆಗಳಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈ ವರ್ಷ ಯಡಿಯೂರು ಸೇರಿ ಬೆಂಗಳೂರಿನ ಕೆರೆಗಳಲ್ಲಿ 1.75 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ನಿರೀಕ್ಷೆ ಇದ್ದು, ಬಿಬಿಎಂಪಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರು: ಈ ವರ್ಷ 1.75 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ನಿರೀಕ್ಷೆ
ಗಣೇಶ ಮೂರ್ತಿಗಳು
ಗಣಪತಿ ಶರ್ಮಾ
|

Updated on: Sep 07, 2024 | 11:52 AM

Share

ಬೆಂಗಳೂರು, ಸೆಪ್ಟೆಂಬರ್ 7: ಕಳೆದ ವರ್ಷ ಗಣೇಶೋತ್ಸವ ಸಂದರ್ಭ ಬೆಂಗಳೂರಿನ ಯಡಿಯೂರು ಕೆರೆಯಲ್ಲಿ 1.75 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿತ್ತು. ಈ ವರ್ಷವೂ ಅದೇ ಪ್ರಮಾಣದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯಾಗುವ ನಿರೀಕ್ಷೆ ಇದೆ. ನಗರದ ಅನೇಕ ಮನೆಗಳಲ್ಲಿ ಹಬ್ಬದ ಆಚರಣೆ ಭರ್ಜರಿಯಾಗಿಯೇ ನಡೆಯುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸಹ ಕೊಳಗಳನ್ನು ಸ್ವಚ್ಛಗೊಳಿಸಿ ಮರುಪೂರಣ ಮಾಡಿದ್ದಾರೆ.

ಆದಾಗ್ಯೂ, ಈ ವರ್ಷ ನಿರ್ವಹಣಾ ಕಾರ್ಯಗಳ ಕಾರಣ ಯಡಿಯೂರು ಕೆರೆಯ (ಕಲ್ಯಾಣಿ) ಭಾಗವನ್ನು ಸೆಪ್ಟೆಂಬರ್ 10 ರಂದು ಮುಚ್ಚಲಾಗುತ್ತದೆ. ಸೆಪ್ಟೆಂಬರ್ 11 ರಂದು ತೆರೆಯಲಾಗುತ್ತಿದ್ದು, ವಿಸರ್ಜನಾ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ.

ಕಲ್ಯಾಣಿಯಲ್ಲಿ ವಿಗ್ರಹಗಳ ನಿಮಜ್ಜನಕ್ಕೆ ಸೆಪ್ಟೆಂಬರ್ 7 ರಿಂದ 17 ರವರೆಗೆ 11 ದಿನಗಳ ಕಾಲ ಮಾತ್ರ ಅನುಮತಿ ನೀಡಲಾಗುವುದು. ನಿರ್ವಹಣಾ ಕಾಮಗಾರಿಗಳು, ಸಂಚಾರ ದಟ್ಟಣೆ ಮತ್ತು ಇತರ ಕಾರಣಗಳಿಗಾಗಿ ಅವಧಿಯನ್ನು ಮಿತಿಗೊಳಿಸಲಾಗಿದೆ. ಸೆಪ್ಟೆಂಬರ್ 18 ರಿಂದ ಈ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ನಿಷೇಧಿಸಲಾಗುವುದು ಮತ್ತು ಪಿಒಪಿ ಗಣೇಶ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪದ್ಮನಾಭನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ಈ ದೇವಾಲಯದಲ್ಲಿದೆ ತಲೆಯಿಲ್ಲದ ಗಣೇಶನ ವಿಗ್ರಹ, ಇದರ ಹಿಂದಿದೆ ಈ ಕಾರಣ

ಇದಲ್ಲದೆ, ಮೂರ್ತಿ ವಿಸರ್ಜನೆಗಾಗಿ ಗುರುತಿಸಲಾದ 40ಕ್ಕೂ ಹೆಚ್ಚಿನ ಕೆರೆಗಳಲ್ಲಿ ಬಿಬಿಎಂಪಿ ಸಾಕಷ್ಟು ಸಿದ್ಧತೆಗಳನ್ನು ಮಾಡಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊಳಗಳಲ್ಲಿ ಜನಸಂದಣಿಯನ್ನು ತಪ್ಪಿಸಲು, ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ 400 ಕ್ಕೂ ಹೆಚ್ಚು ಮೊಬೈಲ್ ಇಮ್ಮರ್ಶನ್ ಟ್ಯಾಂಕ್‌ಗಳನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್