
ಬೆಂಗಳೂರು, ಆಗಸ್ಟ್ 23: ಗಣೇಶ ಚತುರ್ಥಿಗೆ (Ganesh Chaturthi 2025) ಇನ್ನೇನು ಕೆಲವೇ ದಿನಗಳಿದ್ದು, ಬೆಂಗಳೂರಿನಲ್ಲಿ (Bengaluru) ಹಬ್ಬದ ಆಚರಣೆಗೆ ಸಾರ್ವಜನಿಕ ಗಣೇಶ ಮಂಡಳಿಗಳು ಮತ್ತು ಮನೆಯಲ್ಲಿ ಸಿದ್ಧತೆ ಬರದಿಂದ ಸಾಗುತ್ತಿದೆ. ಬೃಹತ್ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಯದ್ದೇ ತಲೆನೋವಾಗಿ ಪರಿಣಮಿಸುತ್ತದೆ. ಹೀಗಾಗಿ, ಬಿಬಿಎಂಪಿಯು (BBMP) ಗಣೇಶ ಮೂರ್ತಿ ವಿಸರ್ಜನೆಗೆ ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ಸಂಚಾರಿ ಟ್ಯಾಂಕ್ಗಳನ್ನು ತಯಾರು ಮಾಡಿದೆ.
ಜೊತೆಗೆ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆದಿದೆ. ಮೇಲ್ವಿಚಾರಣೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಗಾಗಿ https://apps.bbmpgov.in/ganesh2025/ ವೆಬ್ಸೈಟ್ಗೆ ಭೇಟಿ ನೀಡಿ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 2025ನೇ ಸಾಲಿನಲ್ಲಿ ವಲಯವಾರು ಕೆರೆ ಅಂಗಳದ ಕಲ್ಯಾಣಿ/ತಾತ್ಕಾಲಿಕ ಕಲ್ಯಾಣಿಗಳ ಸ್ಥಳಗಳ ವಿವರಗಳು
ಇದನ್ನೂ ಓದಿ: ಪಿಒಪಿ ಗಣೇಶ ಬಳಸುವುದಿಲ್ಲ ಅಂತ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ಗೆ ಅನುಮತಿ ನೀಡಿ: ಖಂಡ್ರೆ
ಬಿಟಿಎಂ ಲೇಔಟ್, ಪದ್ಮನಾಭಗರ, ಜಯನಗರ, ಬಸವನಗುಡಿ, ಚಿಕ್ಕಪೇಟೆ, ವಿಜಯನಗರ, ಮಹಾಲಕ್ಷ್ಮೀಪುರ, ರಾಜಾಜಿನಗರ, ಗೋವಿಂದರಾಜನಗರ, ಚಾಮರಾಜಪೇಟೆ, ಮಲ್ಲೇಶ್ವರಂ, ಗಾಂಧಿನಗರ, ಸರ್ವಜ್ಞನಗರ, ಸರ್. ಸಿವಿ ರಾಮಾನ್ ನಗರ, ಪುಲಿಕೇಶಿನಗರ, ಹೆಬ್ಬಾಳ, ಶಿವಾಜಿನಗರ, ಶಾಂತಿನಗರ ವಿಧಾನಸಭಾಕ್ಷೇತ್ರ ಸಂಚಾರಿ ಟ್ಯಾಂಕ್ಗಳನ್ನು ನಿರ್ಮಾಣ ಮಾಡಲಾಗಿದೆ. ಈ ವಿಧಾನಸಭಾಕ್ಷೇತ್ರಗಳಲ್ಲಿ ಯಾವ್ಯಾವ ನಗರಗಳಲ್ಲಿ ಸಂಚಾರಿ ಟ್ಯಾಂಕ್ಗಳು ನಿಲ್ಲಿಸಲಾಗುತ್ತದೆ ಎಂಬ ಮಾಹಿತಿ ಈ ಲಿಂಕ್ನಲ್ಲಿದೆ.
Published On - 7:37 pm, Sat, 23 August 25