AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
Jagadisha B
| Edited By: |

Updated on:Sep 19, 2023 | 9:57 AM

Share

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ