AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
Jagadisha B
| Edited By: |

Updated on:Sep 19, 2023 | 9:57 AM

Share

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23

Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ