ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
Follow us
| Updated By: Digi Tech Desk

Updated on:Sep 19, 2023 | 9:57 AM

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23