AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
Jagadisha B
| Edited By: |

Updated on:Sep 19, 2023 | 9:57 AM

Share

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ