AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
Jagadisha B
| Edited By: |

Updated on:Sep 19, 2023 | 9:57 AM

Share

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ