AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಮೆಜೆಸ್ಟಿಕ್​​​ನ ಕೆಎಸ್​ಆರ್​ಟಿಸಿ ಬಸ್​​ ನಿಲ್ದಾಣದಲ್ಲಿ ಮೇಲ್ವಿಚಾರಣೆಗೆ ಕೆಎಸ್ಆರ್​​ಟಿಸಿಯು 50 ಹಿರಿಯ ಅಧಿಕಾರಿಗಳನ್ನು ನೇಮಿಸಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ.

ಗಣೇಶ ಚತುರ್ಥಿ: ಮೆಜೆಸ್ಟಿಕ್​​​ KSRTC ಬಸ್​​ ನಿಲ್ದಾಣದಲ್ಲಿ ಜನದಟ್ಟಣೆ, ಮೇಲ್ವಿಚಾರಣೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ಮೆಜೆಸ್ಟಿಕ್​ ಬಸ್​ ನಿಲ್ದಾಣ
ಜಗದೀಶ ಬಿ.
| Edited By: |

Updated on:Sep 19, 2023 | 9:57 AM

Share

ಬೆಂಗಳೂರು ಸೆ.17: ಗೌರಿ-ಗಣೇಶ ಹಬ್ಬದ (Ganesh Chaturthi) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಮೆಜೆಸ್ಟಿಕ್​​​ನ (Majestic) ಕೆಎಸ್​ಆರ್​ಟಿಸಿ (KSRTC) ಕೆಂಪೇಗೌಡ ಬಸ್ ​​ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆ ಕೆಲಸ ಮುಗಿಸಿ ಊರುಗಳತ್ತ ಜನರು ಹೊರಟಿದ್ದಾರೆ. ವೀಕೆಂಡ್,ಹಬ್ಬದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ಜನದಟ್ಟಣೆ ಉಂಟಾಗಿದ್ದು, ನಿಯಂತ್ರಣಕ್ಕೆ ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗಲಾಟೆ, ನೂಕು ನುಗ್ಗಲು ನಡೆಯದಂತೆ ಹಿರಿಯ ಅಧಿಕಾರಿಗಳು ಮುಂಜಾಗೃತೆ ವಹಿಸಿದ್ದಾರೆ. ಹಬ್ಬದ ಹಿನ್ನಲೆ, ಒಂದು ಲಕ್ಷ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬೇರೆ ಬೇರೆ ಜಿಲ್ಲೆಗಳಿಗೆ ಹೆಚ್ಚುವರಿ ಬಸ್​ ಬಿಟ್ಟಿದೆ. ಹಬ್ಬಕ್ಕೆ 1200 ಹೆಚ್ಚುವರಿ ಬಸ್ ಗಳನ್ನು ಕೆಎಸ್​ಆರ್​ಟಿಸಿ ಬಿಟ್ಟಿದ್ದು, ಆದ್ರೂ ಬಹುತೇಕ ಬಸ್ ಗಳು ಹೌಸ್ ಫುಲ್ ಆಗಿವೆ. ಶಕ್ತಿಯೋಜನೆ ಎಫೆಕ್ಟ್ ನಿಂದ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 1200 ಹೆಚ್ಚುವರಿ ಬಸ್; ಇಲ್ಲಿದೆ ವಿವರ

ಬಿಎಂಟಿಸಿಯ 150 ಬಸ್​, ಎನ್​​ಡಬ್ಲೂಕೆಆರ್​ಟಿಸಿ 100, ಕೆಕೆಆರ್​ಟಿಸಿ 100, ಕೆಎಸ್ಆರ್ಟಿಸಿ 850 ಹೆಚ್ಚುವರಿ ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಮೇಲ್ವಿಚಾರಣೆಗೆ ಮೆಜೆಸ್ಟಿಕ್​​ ಬಸ್​​ ನಿಲ್ದಾಣದಲ್ಲಿ ಕೆಎಸ್ಆರ್​​ಟಿಸಿಯ 50 ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಸೆ.18ರ ನಸುಕಿನ ಜಾವ 3 ಗಂಟೆಯವರೆಗೂ ಕಾರ್ಯನಿರ್ವಹಿಸುತ್ತಾರೆ. ಸಂಚಾರದಲ್ಲಿ ವ್ಯತ್ಯಯ ಆಗಬಾರದು ಎಂದು ಸಾರಿಗೆ ಇಲಾಖೆ ಈ ಪ್ಲಾನ್ ಮಾಡಿದೆ.

ಇನ್ನು ಶನಿವಾರ ಸಾಯಂಕಾಲದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಮೆಜೆಸ್ಟಿಕ್​​ ಸುತ್ತ-ಮುತ್ತ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಗಂಟೆಗಟ್ಟಲ್ಲೇ ಜಾಮ್​​ನಲ್ಲಿ ನಿಂತು ಸವಾರರು ಸುಸ್ತಾಗಿ ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sun, 17 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!