ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ನಗರದ ಈ ರಸ್ತೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಸೂಚಿಸಿದ್ದಾರೆ.

ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ
ಗಣೇಶ ವಿಸರ್ಜನೆ ಮೆರವಣಿಗೆ
Follow us
|

Updated on:Sep 09, 2024 | 9:14 AM

ಬೆಂಗಳೂರು, ಸೆಪ್ಟೆಂಬರ್​ 09: ಮೂರನೇ ದಿನ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಚಾಮುಂಡಿನಗರದಲ್ಲಿ ಸೋಮವಾರ ಗಣೇಶ ವಿಸರ್ಜನೆ ಮೆರವಣಿಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಇಂದು (ಸೆ.09) ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ.

ಚಾಮುಂಡಿನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಿಜೆ, ಟ್ಯಾಬ್ಲೋಗಳು, ಸಂಗೀತ, ಡೊಳ್ಳು ಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ಸುಗಮ ಸಂಚಾರ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ಸೆ.09ರ ಸಂಜೆ 06.00 ಗಂಟೆಯಿಂದ ಸೆ.10ರ ಬೆಳಿಗ್ಗೆ 2.00 ಗಂಟೆಯವರೆಗು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಟ್ವಿಟರ್​ ಪೋಸ್ಟ್​

ಬದಲಿ ಮಾರ್ಗ

  • ಸುಲ್ತಾನ್​ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮಂಟ್ ರೈಲು ನಿಲ್ದಾಣದಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್​ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಟಿ.ವಿ ಬದರ್​ನಲ್ಲಿ ಎಡ ತಿರುವು ಪಡೆದು ಜಯಮಹಲ್ ಮುಖ್ಯರಸ್ತೆ ಯಲ್ಲಿ ನೇರವಾಗಿ ಕಂಟೋನ್ವೆಂಟ್​ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಬಿ ರಸ್ತೆ)ಯಲ್ಲಿ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್‌ ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲ ತಿರುವು ಮಠದಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡೂರಾವ್ ಸರ್ಕಲ್​ನಲ್ಲಿ ಎಡ ತಿರುವು ಪಡೆದುಕೊಂಡು ತರಳಬಾಳು ರಸ್ತೆ ಎಡತಿರುವು ಪಡೆದುಕೊಂಡು ಬೆಂಗಳೂರು ಬಳ್ಳಾರಿ ರಸ್ತೆ ಮೇತ್ರಿ ಸರ್ಕಲ್​ನಲ್ಲಿ ಪಡೆದುಕೊಂಡು ಬೆಂಗಳೂರು ನಗರದ ಕಡೆಗೆ ಹಾಗೂ ಮೇತ್ರಿ ಸರ್ಕಲ್ ಯು ಟರ್ನ್ ಪಡೆದುಕೊಂಡು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಕಂಟೋನ್ಮೆಂಟ್​​ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸುಲ್ತಾನ್ ಪಾಳ್ಯ- ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲಕ್ಕೆ ತಿರುಗಿ ಪಡೆದುಕೊಂಡು ವಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಬ್ಬರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಂದಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಮೇಕ್ರಿಸರ್ಕಲ್ – ಜಯಮಹಲ್ ಮುಖ್ಯರಸ್ತೆ ಜಂಕ್ಷನ್ ಪಿ.ಆರ್.ಬಿ.ಸಿ ಜಂಕ್ಷನ್ ಟಿ.ವಿ ಬವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ಪಡೆದುಕೊಂಡು ವಾಟರ್ ಬ್ಯಾಂಕ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಸಾಳ್ಯ- ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಬೆಂಗಳೂರು ನಗರದ (ಬಿಬಿ ರಸ್ತೆ) ಮೇಖ್ರಿ ಸರ್ಕಲ್ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಮೇಕ್ರಿ ಸರ್ಕಲ್-ಸಿಬಿಐ ಇಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸಂಜಯನಗರ ಕ್ರಾಸ್ ಸರ್ವಿಸ್ ರಸ್ತೆ, ತರಳಬಾಳು ರಸ್ತೆಯಲ್ಲಿ ಎಡತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಆರ್. ಟಿ ನಗರ ಮುಖ್ಯರಸ್ತೆಗೆ ಹೋಗಬಹುದು.
  • ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಸುಲ್ತಾನ್ ಪಾಳ್ಯ ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆಯಲ್ಲಿ ಎಡ ತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 am, Mon, 9 September 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ