AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ನಗರದ ಈ ರಸ್ತೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಸೂಚಿಸಿದ್ದಾರೆ.

ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ
ಗಣೇಶ ವಿಸರ್ಜನೆ ಮೆರವಣಿಗೆ
ವಿವೇಕ ಬಿರಾದಾರ
|

Updated on:Sep 09, 2024 | 9:14 AM

Share

ಬೆಂಗಳೂರು, ಸೆಪ್ಟೆಂಬರ್​ 09: ಮೂರನೇ ದಿನ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಚಾಮುಂಡಿನಗರದಲ್ಲಿ ಸೋಮವಾರ ಗಣೇಶ ವಿಸರ್ಜನೆ ಮೆರವಣಿಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಇಂದು (ಸೆ.09) ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ.

ಚಾಮುಂಡಿನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಿಜೆ, ಟ್ಯಾಬ್ಲೋಗಳು, ಸಂಗೀತ, ಡೊಳ್ಳು ಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ಸುಗಮ ಸಂಚಾರ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ಸೆ.09ರ ಸಂಜೆ 06.00 ಗಂಟೆಯಿಂದ ಸೆ.10ರ ಬೆಳಿಗ್ಗೆ 2.00 ಗಂಟೆಯವರೆಗು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಟ್ವಿಟರ್​ ಪೋಸ್ಟ್​

ಬದಲಿ ಮಾರ್ಗ

  • ಸುಲ್ತಾನ್​ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮಂಟ್ ರೈಲು ನಿಲ್ದಾಣದಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್​ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಟಿ.ವಿ ಬದರ್​ನಲ್ಲಿ ಎಡ ತಿರುವು ಪಡೆದು ಜಯಮಹಲ್ ಮುಖ್ಯರಸ್ತೆ ಯಲ್ಲಿ ನೇರವಾಗಿ ಕಂಟೋನ್ವೆಂಟ್​ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಬಿ ರಸ್ತೆ)ಯಲ್ಲಿ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್‌ ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲ ತಿರುವು ಮಠದಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡೂರಾವ್ ಸರ್ಕಲ್​ನಲ್ಲಿ ಎಡ ತಿರುವು ಪಡೆದುಕೊಂಡು ತರಳಬಾಳು ರಸ್ತೆ ಎಡತಿರುವು ಪಡೆದುಕೊಂಡು ಬೆಂಗಳೂರು ಬಳ್ಳಾರಿ ರಸ್ತೆ ಮೇತ್ರಿ ಸರ್ಕಲ್​ನಲ್ಲಿ ಪಡೆದುಕೊಂಡು ಬೆಂಗಳೂರು ನಗರದ ಕಡೆಗೆ ಹಾಗೂ ಮೇತ್ರಿ ಸರ್ಕಲ್ ಯು ಟರ್ನ್ ಪಡೆದುಕೊಂಡು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಕಂಟೋನ್ಮೆಂಟ್​​ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸುಲ್ತಾನ್ ಪಾಳ್ಯ- ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲಕ್ಕೆ ತಿರುಗಿ ಪಡೆದುಕೊಂಡು ವಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಬ್ಬರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಂದಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಮೇಕ್ರಿಸರ್ಕಲ್ – ಜಯಮಹಲ್ ಮುಖ್ಯರಸ್ತೆ ಜಂಕ್ಷನ್ ಪಿ.ಆರ್.ಬಿ.ಸಿ ಜಂಕ್ಷನ್ ಟಿ.ವಿ ಬವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ಪಡೆದುಕೊಂಡು ವಾಟರ್ ಬ್ಯಾಂಕ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಸಾಳ್ಯ- ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಬೆಂಗಳೂರು ನಗರದ (ಬಿಬಿ ರಸ್ತೆ) ಮೇಖ್ರಿ ಸರ್ಕಲ್ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಮೇಕ್ರಿ ಸರ್ಕಲ್-ಸಿಬಿಐ ಇಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸಂಜಯನಗರ ಕ್ರಾಸ್ ಸರ್ವಿಸ್ ರಸ್ತೆ, ತರಳಬಾಳು ರಸ್ತೆಯಲ್ಲಿ ಎಡತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಆರ್. ಟಿ ನಗರ ಮುಖ್ಯರಸ್ತೆಗೆ ಹೋಗಬಹುದು.
  • ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಸುಲ್ತಾನ್ ಪಾಳ್ಯ ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆಯಲ್ಲಿ ಎಡ ತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 am, Mon, 9 September 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ