Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​, ವಾಹನ ನಿಲುಗಡೆ ನಿಷೇಧ

ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ, ಮಾರ್ಗ ಬದಲಾವಣೆ ಸೂಚಿಸಿದ್ದಾರೆ. ​

ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​, ವಾಹನ ನಿಲುಗಡೆ ನಿಷೇಧ
ಗಣೇಶ ವಿಸರ್ಜನೆ
Follow us
ವಿವೇಕ ಬಿರಾದಾರ
|

Updated on: Sep 06, 2024 | 7:56 AM

ಬೆಂಗಳೂರು, ಸೆಪ್ಟೆಂಬರ್​ 06: ನಾಡಿನಲ್ಲಡೆ ಗೌರಿಗಣೇಶ ಹಬ್ಬದ (Gowri Ganesha Festival) ಸಡಗರ ಮನೆ ಮಾಡಿದೆ. ಗಣೇಶ ಹಬ್ಬ (Ganesha Festival) ಪ್ರಯುಕ್ತ ಸಿದ್ದತೆ ಜೋರಾಗಿ ನಡೆದಿದೆ. ಗಣೇಶ ಮಂಡಳಿಗಳು ಸಾರ್ವಜನಿಕ ಗಣಪನನ್ನು ಕೂರಿಸಲು ತಯಾರಾಗಿವೆ. ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಬೆಂಗಳೂರು ನಗರ ಸಂಚಾರ ಪೊಲೀಸರು (Benagluru Traffic Police) ಮಾರ್ಗಸೂಚಿ ಹೊರಡಿಸಿದ್ದಾರೆ.

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್​ ಕಲ್ಯಾಣಿಯಲ್ಲಿ ಸೆಪ್ಟೆಂಬರ್​ 7 ರಿಂದ 9ರವರೆಗೆ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಕೆರೆಯ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಈ ದಿನಾಂಕಗಳಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ

ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇಜಿ ಕಡೆಯಿಂದ ಕನ್ನಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಯಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣಸ್ವಾಮಿ ಮೊದಲಿಯಳ ರಸ್ತೆಯಲ್ಲಿ, ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕಣ್ಮು ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ವಿಕಮುಖ ಸಂಚಾರಕ್ಕೆ, ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ, ಖರೀದಿ ಜೋರು; ಹೂ, ಹಣ್ಣು ತುಸು ದುಬಾರಿ

ಮಾರ್ಗ ಬದಲಾವಣೆ

ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚಿಟ್ಟೆ ರಸ್ತೆ ಡಿಕನ್ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೊಗಬಹುದು.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟ‌ರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರೆ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.

ವಾಹನ ನಿಲುಗಡೆ ನಿಷೇಧ

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ಸೆಪ್ಟೆಂಬರ್​ 7 ರಿಂದ 9 ವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ