AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಪ್ರಿಯರಿಗೆ ಶಾಕ್: ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ಎಲ್ಲೆಡೆ ಗಣಪತಿ ಹಬ್ಬ ಸಂಭ್ರಮ ಮನೆ ಮಾಡಿದೆ. ಗಣೇಶನನ್ನು ಪ್ರತಿಷ್ಠಾಸಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಇನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಸಾಮೂಹಿಕ ಗಣೇಶ ವಿಸರ್ಜನೆ ಮಾಡುವ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಈ ಎರಡು ದಿನ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಬಾರ್ ಬಂದ್ ಆಗಿರಲಿವೆ.

ಮದ್ಯ ಪ್ರಿಯರಿಗೆ ಶಾಕ್: ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ
Liquor Sale Ban
ರಮೇಶ್ ಬಿ. ಜವಳಗೇರಾ
|

Updated on: Aug 29, 2025 | 10:36 PM

Share

ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್  31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ   ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಎರಡು ದಿನ ಬಾರ್ ಬಂದ್ ಇರಲಿವೆ.

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದು, ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police) ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ

ಎಲ್ಲೆಲ್ಲಿ ಬಾರ್ ಬಂದ್?

ಆಗಸ್ಟ್ 31ರ ಬೆಳಿಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 01ರ ಬೆಳಿಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್‌ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್‌, ಜೆ.ಸಿ. ನಗರ, ಆರ್‌.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು.

ಸೆಪ್ಟೆಂಬರ್ 14ರ ಬೆಳಿಗ್ಗೆ 6ಗಂಟೆಯಿಂದ ಸೆ.15ರ ಬೆಳಿಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?