AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಡುರಾತ್ರಿ ಊಬರ್ ಆಟೋ ಅಡ್ಡಗಟ್ಟಿ ಹಲ್ಲೆ ನಡೆಸಿದ ಕ್ಯಾಬ್ ಚಾಲಕರು

ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ಕೊಟ್ಟರೂ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ನಿಲ್ಲುತ್ತಿಲ್ಲ. ತಡರಾತ್ರಿ ಆಟೋ ಅಡ್ಡಗಟ್ಟಿದ ಗ್ಯಾಂಗ್, ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊರಮಾವು ಬಳಿ ನಡೆದಿದೆ. ಆಟೋ ಚಾಲಕ ನಂಜುಂಡ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ನಡುರಾತ್ರಿ ಊಬರ್ ಆಟೋ ಅಡ್ಡಗಟ್ಟಿ ಹಲ್ಲೆ ನಡೆಸಿದ ಕ್ಯಾಬ್ ಚಾಲಕರು
ಆಟೋ ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಕ್ಯಾಬ್ ಚಾಲಕರು
Jagadisha B
| Edited By: |

Updated on:Oct 06, 2023 | 1:43 PM

Share

ಬೆಂಗಳೂರು, ಅ.6: ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ಕೊಟ್ಟರೂ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪುಡಿರೌಡಿಗಳ ಪುಂಡಾಟ ನಿಲ್ಲುತ್ತಿಲ್ಲ. ನಡುರಾತ್ರಿ ಆಟೋ ಅಡ್ಡಗಟ್ಟಿದ ಗ್ಯಾಂಗ್, ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊರಮಾವು ಬಳಿ ನಡೆದಿದೆ. ಆಟೋ ಚಾಲಕ ನಂಜುಂಡ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಸ್ಯಾಂಕಿ ರಸ್ತೆಯಿಂದ ಚಾಲಕ ನಂಜುಂಡ ಅವರು ನಾಲ್ವರು ಪ್ರಯಾಣಿಕರನ್ನು ಊಬರ್ ಆಟೋದಲ್ಲಿ ಹತ್ತಿಸಿಕೊಂಡಿದ್ದು, ಹೊರಮಾವು ಬಳಿ ನಿಲ್ಲಿಸಿದ್ದಾರೆ. ಈ ವೇಳೆ ಸ್ವಿಫ್ಟ್ ಕಾರಿನಲ್ಲಿ ಬಂದ ಗ್ಯಾಂಗ್, ಆಟೋ ಡ್ರೈವರ್​ಗೆ ಹಿಗ್ಗಾಮುಗ್ಗಾ ಥಳಿಸಿದೆ. ಆರೋಪಿಗಳ ಕಾಲಿಗೆ ಬಿದ್ದು ಯುವತಿ ಬೇಡಿಕೊಂಡರೂ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಬೈಕ್​ಗೆ ಇಂಜಿನ್ ಆಯಿಲ್​ ಹಾಕಿಸಲು ಯುವಕರಿಂದ ರಾಬರಿ… ರಾತ್ರಿ ಮನೆಗೆ ವಾಪಸಾಗ್ತಿದ್ದ ಹೋಟೆಲ್ ಉದ್ಯಮಿ ಮೇಲೆ ಯುವಕರಿಂದ ಹಲ್ಲೆ; ಕಣ್ಣು ಕಳೆದುಕೊಂಡ ಸಂತ್ರಸ್ತ

ಪೊಲೀಸರಿಗೆ ಕರೆ ಮಾಡಲು ಯತ್ನಿಸಿದಾಗ ಮೊಬೈಲ್ ಕಸಿದುಕೊಳ್ಳಲಾಗಿದೆ. ಭಾನುವಾರ ಮಧ್ಯರಾತ್ರಿ 1.45ರ ಸುಮಾರಿಗೆ ನಡೆದಿರುವ ಘಟನೆ ಇದಾಗಿದ್ದು, ಆಟೋ ಚಾಲಕ ನಂಜುಂಡ ಅವರು ನೀಡಿದ ದೂರಿನ ಮೇರೆಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಕ್ಯಾಬ್ ಚಾಲಕರನ್ನು ಬಂಧಿಸಿದ ಪೊಲೀಸರು

ಹಲ್ಲೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡ ಹೆಣ್ಣೂರು ಠಾಣಾ ಪೊಲೀಸರು, ಇಬ್ಬರು ಕ್ಯಾಬ್ ಚಾಲಕರನ್ನು ಬಂಧಿಸಿದ್ದಾರೆ. ಅನಿಲ್ ಮತ್ತು ರಘು ಬಂಧಿತ ಆರೋಪಿಗಳಾಗಿದ್ದಾರೆ. ವಿಚಾರಣೆ ವೇಳೆ ಆಟೋ ಚಾಲಕನಿಂದ ಪ್ರಯಾಣಿಕರಿಗೆ ಸಮಸ್ಯೆಯಾದಂತೆ ಕಂಡೆವು. ಹೀಗಾಗಿ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾಗಿ ಹೇಳಿದ್ದಾರೆ.

ಗ್ಯಾಂಗ್​ನಿಂದ ಹಲ್ಲೆಗೊಳಗಾದ ಪ್ರಯಾಣಿಕರು ಇದುವರೆಗೆ ಠಾಣೆಗೆ ದೂರು ನೀಡಿಲ್ಲ. ತನಿಖೆ ವೇಳೆ ಪ್ರಯಾಣಿಕರು ಕುಡಿದಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಆಟೋ ಚಾಲಕ ನೀಡಿದ ದೂರಿನ ಹಿನ್ನಲೆ ಎಫ್​ಐಆರ್ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Fri, 6 October 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ