AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ: ಕದ್ದ ಬಳಿಕ ದೇವರಿಗೆ ಕ್ಷಮೆಯಾಚಿಸುತ್ತಿದ್ದ ಆಸಾಮಿಗಳು ಅಂದರ್!​

ಕೆಲವು ಕಳ್ಳರು ಮನೆಗಳನ್ನ, ಬ್ಯಾಂಕ್​ಗಳನ್ನ ಟಾರ್ಗೆಟ್ ಮಾಡಿದರೆ, ಈ ಆಸಾಮಿಗಳು ಮಾತ್ರ ದೇವಾಯಗಳಿಗೆ ಸ್ಕೆಚ್ ಹಾಕಿ ಉಂಡೆನಾಮ ಹಾಕುತ್ತಿದ್ದರು. ಪ್ರತಿಸಾರಿ‌ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈ ಮುಗಿಯುತ್ತಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ, ಏಕೆಂದರೆ ಇಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ.

ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ: ಕದ್ದ ಬಳಿಕ ದೇವರಿಗೆ ಕ್ಷಮೆಯಾಚಿಸುತ್ತಿದ್ದ ಆಸಾಮಿಗಳು ಅಂದರ್!​
ವಶಕ್ಕೆ ಪಡೆದಿರುವ ವಸ್ತುಗಳು
Shivaprasad B
| Edited By: |

Updated on: Sep 24, 2025 | 10:03 AM

Share

ಬೆಂಗಳೂರು, ಸೆಪ್ಟೆಂಬರ್​ 24: ಬೆಳಗಿನ ಜಾವ ದೇವಾಲಯಗಳಲ್ಲಿ ಅರ್ಚಕನಾದರೆ, ರಾತ್ರಿ ಕಳ್ಳತನಕ್ಕೆ (theft) ಇಳಿಯುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈಮುಗಿಯುತ್ತಿದ್ದರು. ಆದರೆ ದೇವರ ಶಾಪವೂ ಏನೋ ಸದ್ಯ ಇಬ್ಬರು ಅರೆಸ್ಟ್ (Arrest)​ ಆಗಿದ್ದಾರೆ.

ಬೆಂಗಳೂರಿನ ದೇವಾಲಯಗಳಿಗೂ ಕನ್ನ

ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಇಬ್ಬರು ಬಂಧಿತರು. ಪ್ರವೀಣ್ ಭಟ್​​ ಬೆಳಗಿನ ಜಾವ ಉಡುಪಿ, ಶಿವಮೊಗ್ಗದ ಪ್ರತಿಷ್ಠಿತ ದೇವಾಲಯಗಳಲ್ಲಿ ಅರ್ಚಕನಾಗಿ ಪೂಜೆ ಮಾಡುತ್ತಿದ್ದ. ರಾತ್ರಿ ಆದರೆ ಸಾಕು ಅಲ್ಲಿದ್ದ ದೇವರ‌ ಸಾಮಾಗ್ರಿಗಳನ್ನ ಕಳ್ಳತನ ಮಾಡುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಸಂತೋಷ್​ನ ಸಹವಾಸದಿಂದ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳಿಗೂ ಕನ್ನ ಹಾಕಿ ಸದ್ಯ ಪೋಲಿಸರ ಅತಿಥಿಯಾಗಿದ್ದಾರೆ.

ಇದನ್ನೂ ಓದಿ: ಸೈಬರ್ ವಂಚಕರಿಂದ ಸುಧಾಮೂರ್ತಿ ಗ್ರೇಟ್ ಎಸ್ಕೇಪ್: ಮಾಡಿದ್ದೇನು ಗೊತ್ತಾ?

ಪ್ರವೀಣ್ ಭಟ್​ ಶಿವಮೊಗ್ಗ, ಉಡುಪಿಯಲ್ಲಿ ಅರ್ಚಕನಾಗಿದ್ದ. ಅಲ್ಲಿ ಹೋಮ, ಹವನ, ಪೂಜೆ ಮಾಡಿಕೊಂಡಿದ್ದ. ರಾತ್ರಿ ಅದೇ ದೇವಾಲಯದಲ್ಲಿ ದೇವರ ಬೆಳ್ಳಿ ಸಾಮಗ್ರಿಗಳು, ಹಿತ್ತಾಳೆ ವಸ್ತುಗಳು, ಚಿನ್ನಾಭರಣವನ್ನು ಕದ್ದು ಮಾರಾಟ ಮಾಡುತ್ತಿದ್ದ.

ಅರ್ಚಕನಾಗಿದ್ದರಿಂದ ಈ ವಸ್ತುಗಳನ್ನು ಕೊಂಡುಕೊಳ್ಳುವರು ಯಾವುದೇ ಅನುಮಾನ ಪಡುತ್ತಿರಲಿಲ್ಲ. ಮನೆಯಲ್ಲಿ ‌ಕಷ್ಟಯಿದೆ, ಅಲ್ಲದೆ ಮನೆಯ ತುಂಬಾ ಇಂತಹ ವಸ್ತುಗಳೇ ಇವೆ ಎಂದು ಹೇಳುತ್ತಿದ್ದ. ಆದರೆ ಅದೊಂದು ದಿನ ಮಾತ್ರ ಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದ. ಹೀಗೆ ಜೈಲು ಸೇರಿದ ಪ್ರವೀಣ್ ಭಟ್​​ಗೆ ಸಂತೋಷ್ ‌ಕೂಡ ಪರಿಚಯವಾಗಿದೆ. ಇಬ್ಬರು ಹೊರಗಡೆ ಬಂದು ಪಾರ್ಟ್ನರ್ಸ್ ಆಗಿದ್ದರು.

ಬನಶಂಕರಿ ದೇವಾಲಯದಲ್ಲಿ ಅರ್ಚಕನಾಗಿದ್ದಾಗ ಕೂಡ ಕಳ್ಳತನ ಮಾಡಿದ್ದ. ದೇವಾಲಯದ ಆಡಳಿತ ಮಂಡಳಿ ಪರಿಶೀಲನೆ ಮಾಡಿ, ಬಳಿಕ ಪೋಲಿಸರಿಗೆ ದೂರು ನೀಡಿದ್ದರು. ಬನ್ನೇರುಘಟ್ಟ ಸಮೀಪದ ಗೊಟ್ಟಿಗೇರೆ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಲಾಕ್ ಆಗಿದ್ದರು. ತನಿಖೆ ಮಾಡಿದಾಗ ದೇವಾಲಯಗಳಲ್ಲಿ ಕಳ್ಳತನ ‌ಮಾಡಿದ್ದು ಬಯಲಾಗಿತ್ತು.

14 ಲಕ್ಷ ರೂ. ಮೌಲ್ಯದ ಸಾಮಾಗ್ರಿಗಳು ವಶಕ್ಕೆ 

ಇನ್ನೂ ಕದ್ದ ಸಾಮಾಗ್ರಿಗಳನ್ನು ಅಂಗಡಿಗೆ ಮಾರಾಟ ಮಾಡಿದರೆ, ಮತ್ತೊಮ್ಮೆ ಆ ಕಡೆ ಅಂಗಡಿಗೆ ಹೋಗುತ್ತಿರಲಿಲ್ಲ. ಪಕ್ಕಾ ಪ್ಲ್ಯಾನ್​ ಮಾಡಿಯೇ ಸ್ಕೆಚ್ ಹಾಕುತ್ತಿದ್ದರು. ಹೀಗೆ ಬಂಧಿತರಿಂದ 14 ಲಕ್ಷ ರೂ. ಮೌಲ್ಯದ ಸಾಮಾಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಇಬ್ಬರ ವಿರುದ್ಧ ಬನಶಂಕರಿ, ಜಯನಗರ, ಕುಮಾರಸ್ವಾಮಿ, ಜೆಪಿ ನಗರ ಸೇರಿ ಸುಮಾರು 11 ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲಿಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಲಾಕ್

ಒಟ್ಟಿನಲ್ಲಿ ಕಷ್ಟ ಎಂದು ಹೇಳಿಕೊಂಡು ಬರುವ ಭಕ್ತರ ಹಾಗೂ ದೇವರ ಮಧ್ಯೆ ಕೊಂಡಿಯಾಗಿದ್ದ ಅರ್ಚಕನೇ‌ ಕಳ್ಳತನ ಮಾಡಿ ಸದ್ಯ ಪೊಲೀಸರ ಅತಿಥಿ ಆಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್