AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬರಹಳ್ಳಿಯಲ್ಲಿ ಕೊಲೆ ಯತ್ನ: ಒಬ್ಬನ ಕೈ ಕಟ್​, ನಾಯಿ ಕಚ್ಚಿಕೊಂಡು ಹೋದ ಕೈ ಹುಡುಕಾಟದಲ್ಲಿ ಪೊಲೀಸರು!

ಒಂದೇ ಮಚ್ಚಿನೇಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ. ಹಲ್ಲೆ ನಡೆಸಿದ ಎದುರಾಳಿ ಗ್ಯಾಂಗ್ ಕೈ ಕಟ್ ಆಗ್ತಿದ್ದಂತೆ ಎಸ್ಕೇಪ್ ಆಗಿದೆ. ಈ ಮಧ್ಯೆ, ನಾಯಿಯೊಂದು ರಸ್ತೆಯಲ್ಲಿ ಬಿದ್ದಿರುವ ಹಸಿ ಮಾಂಸದ ಕೈಯನ್ನು ಕಚ್ಚಿ ಪರಾರಿಯಾಗಿದೆ. ಪೊಲೀಸರು ಕೈ ಹುಡುಕಾಟದಲ್ಲಿದ್ದಾರೆ.

ಕುರುಬರಹಳ್ಳಿಯಲ್ಲಿ ಕೊಲೆ ಯತ್ನ: ಒಬ್ಬನ ಕೈ ಕಟ್​, ನಾಯಿ ಕಚ್ಚಿಕೊಂಡು ಹೋದ ಕೈ ಹುಡುಕಾಟದಲ್ಲಿ ಪೊಲೀಸರು!
ಕೊಲೆ ಯತ್ನ: ಒಬ್ಬನ ಕೈ ಕಟ್​, ನಾಯಿ ಕಚ್ಚಿಕೊಂಡು ಹೋದ ಕೈನ ಹುಡುಕಾಟದಲ್ಲಿ ಪೊಲೀಸರು!
TV9 Web
| Edited By: |

Updated on:Nov 02, 2022 | 3:54 PM

Share

ಬೆಂಗಳೂರು: ಕುಡಿದ ಅಮಲಿನಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗಲಾಟೆಯಾಗಿರುವ ಪ್ರಕರಣವೊಂದು ಅಕ್ಟೋಬರ್ 29ರ ರಾತ್ರಿ 12:30 ರ ಸುಮಾರಿಗೆ ನಡೆದಿದೆ. ಕೊಲೆ ಯತ್ನ ಪ್ರಕರಣದಲ್ಲಿ ಮಚ್ಚೇಟಿಗೆ ಪಜ್ವಲ್ (21) ಎಂಬ ಯುವಕನ ಕೈ ಕಟ್ ಆಗಿದೆ. ಕುರುಬರಹಳ್ಳಿಯಲ್ಲಿ ನಡೆದ ಭಯಾನಕ 307 ಕೇಸ್ ಇದಾಗಿದೆ. ಲಗ್ಗೆರೆಯಲ್ಲಿರುವ ಕದಂಬ ಬಾರ್ ನಲ್ಲಿ ಎಣ್ಣೆ ಹೊಡೆಯುತ್ತಿದ್ದ ಪ್ರಜ್ವಲ್ ಗ್ಯಾಂಗ್, ಎಣ್ಣೆ ಏಟಲ್ಲಿ ಎದುರಲ್ಲಿ ಕುಳಿತ ಮತ್ತೊಂದು ಟೀಂ ನೊಂದಿಗೆ ಗಲಾಟೆ ಮಾಡಿಕೊಂಡಿತ್ತು. ಗಲಾಟೆ ನಂತರ ಬಾರ್ ಸಿಬ್ಬಂದಿ ಎರಡೂ ಗ್ಯಾಂಗನ್ನು ಹೊರ ಕಳಿಸಿದ್ದರು.

ಬಾರ್ ನಿಂದ ಹೊರಬಿದ್ದ ನಂತರ ನಡೆದಿರುವುದೇ ಈ ಗ್ಯಾಂಗ್ ವಾರ್​, ಕೊಲೆ ಯತ್ನ ಪ್ರಕರಣ:

ಬಾರ್ ನಿಂದ ಹೊರಬಿದ್ದ ನಂತರ ಪ್ರಜ್ವಲ್ ಗ್ಯಾಂಗ್ ಕುರುಬರ ಹಳ್ಳಿ ಬಳಿ ಬಂದು ಕುಳಿತಿತ್ತು. ಆ ವೇಳೆಗೆ, ಗಲಾಟೆ ಮಾಡಿಕೊಂಡಿದ್ದ ಮತ್ತೊಂದು ಗ್ಯಾಂಗ್ ಕಾರಲ್ಲಿ ಎಂಟ್ರಿ ಕೊಟ್ಟಿದೆ. ಅವ್ರು ಎಂಟ್ರಿ ಆಗ್ತಿದ್ದಂತೆ ಪ್ರಜ್ವಲ್ ಜೊತೆಗಿದ್ದವರು ಎಸ್ಕೇಪ್ ಆಗಿದ್ದಾರೆ. ಎದುರಾಳಿ ಟೀಂ ಸರಿಯಾಗಿ ಆಗಲೇ ಪ್ರಜ್ವಲ್ ಮೇಲೆ ಮಚ್ಚು ಬೀಸಿದೆ. ಒಂದೇ ಮಚ್ಚಿನೇಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ.

ಹಲ್ಲೆ ನಡೆಸಿದ ಎದುರಾಳಿ ಗ್ಯಾಂಗ್ ಕೈ ಕಟ್ ಆಗ್ತಿದ್ದಂತೆ ಎಸ್ಕೇಪ್ ಆಗಿದೆ. ಈ ಮಧ್ಯೆ, ನಾಯಿಯೊಂದು ರಸ್ತೆಯಲ್ಲಿ ಬಿದ್ದಿರುವ ಹಸಿ ಮಾಂಸದ ಕೈಯನ್ನು ಕಚ್ಚಿ ಪರಾರಿಯಾಗಿದೆ. ಬೀದಿ ನಾಯಿ ಪ್ರಜ್ವಲ್ ಕೈಯನ್ನ ಕಚ್ಚಿಕೊಂಡು ಹೋಗುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕೊನೆಗೆ, ಪ್ರಜ್ವಲ್ ತನ್ನ ಸ್ನೇಹಿತರ ಸಹಾಯದಿಂದ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದಾನೆ. ಆಸ್ಪತ್ರೆಯಲ್ಲಿ ಜೆಸಿಬಿ ಕೈ ಮೇಲೆ ಹತ್ತಿ ಕಟ್ ಆಯ್ತು ಎಂದು ಕಥೆ ಹೇಳಿದ್ದ ಪ್ರಜ್ವಲ್. ಕುಡಿದ ಅಮಲು ಇಳಿದ ಮೇಲೆ ಮಚ್ಚಿನೇಟಿನ ಮಾಹಿತಿ ಕೊಟ್ಟಿದ್ದ. ಗಾಂಜಾ ಮತ್ತು ಎಣ್ಣೆ ಮತ್ತಲ್ಲಿ ಗ್ಯಾಂಗ್ ಗಳು ಗಲಾಟೆ ಮಾಡಿಕೊಂಡಿದ್ದವು.

ಪ್ರಜ್ವಲ್ ತಾಯಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲು:

ವಿಷಯ ತಿಳಿದುಬರುತ್ತಿದ್ದಂತೆ ಆಸ್ಪತ್ರೆಗೆ ಬಂದ ಪ್ರಜ್ವಲ್ ತಾಯಿ, ದೂರು ನೀಡಿ ಕೇಸ್ ದಾಖಲಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಾಯಿ ಕಚ್ಚಿಕೊಂಡು ಹೋಗಿರೋ ಪ್ರಜ್ವಲನ ಕೈ ಹುಡುಕಾಟದಲ್ಲಿದ್ದಾರೆ ಪೊಲೀಸರು. ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Published On - 1:38 pm, Wed, 2 November 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್