ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣಿಸಿದ್ದು, ನಗರದಾದ್ಯಂತ ರಾಶಿ ರಾಶಿ ಕಸ ಬಿದ್ದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಸ ಸಂಗ್ರಹ ಮತ್ತು ವಿಲೇವಾರಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜನರು ದೂರುತ್ತಿದ್ದಾರೆ. ಇನ್ನು ಈ ಬಗ್ಗೆ ಉದ್ಯಮಿ ಕೂಡ GBA ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಿಡಿಸಿದ್ದಾರೆ.

ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ
ಉದ್ಯಮಿ ಕಿರಣ್ ಮಜುಂದಾರ್ ಪೋಸ್ಟ್​​
Image Credit source: tv9 kannada

Updated on: Apr 13, 2026 | 3:15 PM

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಕಸದ (Garbage) ಸಮಸ್ಯೆ ತಲೆದೂರಿದೆ. ಹೀಗಾಗಿ ಬಿದ್ದ ರಾಶಿ ರಾಶಿ ಕಸವನ್ನು ಜನರೇ ಎತ್ತಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ರಸ್ತೆ ಬಳಿ ಬಿದ್ದ ಕಸವನ್ನು ಜನರೇ ಜೆಸಿಬಿ ಮತ್ತು ಲಾರಿ ಕರೆಸಿ ಕಸ ಎತ್ತಿಸಿ, ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ. ಈ ಮಧ್ಯೆ  ನಗರದಲ್ಲಿನ ಕಸವನ್ನು ಸಂಗ್ರಹ ಮಾಡಿ, ವಿಲೇವಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಬಿಎ ವಿರುದ್ಧ ಉದ್ಯಮಿ ಗರಂ

ಈ ಬಗ್ಗೆ ಎಕ್ಸ್​ನಲ್ಲಿ ಕಸದ ವಿಡಿಯೋ ಮಾಡಿ ಪೋಸ್ಟ್ ಮಾಡಿ, ಟ್ವೀಟ್ ಮಾಡಿರುವ ಉದ್ಯಮಿ ಕಿರಣ್ ಮಜುಂದಾರ್ ಶಾ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೇಳಿಸಿಕೊಳ್ಳುತ್ತಿದೆಯಾ? ಇಲ್ಲಾ ನಟಿಸುತ್ತಿದೆಯಾ? ಇದು ತುಂಬಾ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಕಸದ ಸಮಸ್ಯೆಗೆ ಕಿರಣ್ ಮಜುಂದಾರ್​​ ಕಿಡಿಕಾರಿದ್ದರು.

ತಾವೇ ಕಸ ಎತ್ತಿದ ಸ್ಥಳೀಯರು 

ಇನ್ನು ಜಯನಗರ ವಿಧಾನಸಭಾ ಕ್ಷೇತ್ರದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 171 ಗುರಪ್ಪನಪಾಳ್ಯದಲ್ಲಿ ಎಲೆಡೆ ಕಸದ ದರ್ಶನವೇ ಆಗುತ್ತೆ. ವಾರ ಅಲ್ಲ, ತಿಂಗಳುಗಳೇ ಕಳೆದರೂ ಕಸ ಎತ್ತುವುದಕ್ಕೆ ಮಾತ್ರ ಸಂಬಂಧಪಟ್ಟ ಅಧಿಕಾರಿಗಳು ಮನಸ್ಸು ಮಾಡಿಲ್ಲ.

ಇದನ್ನೂ ಓದಿ: ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ಈ ವಾರ್ಡ್ ಅನ್ನ ಮರೆತೇ ಬಿಟ್ಟಿದ್ದಾರೆ. ಹೀಗಾಗಿ ದಿಕ್ಕು ತೋಚದ ಸ್ಥಳೀಯರು ತಾವೇ ನಿನ್ನೆ ಕಸ ಎತ್ತಿಸಿದ್ದಾರೆ. ಸ್ಥಳೀಯ ನಿವಾಸಿ ಹಾಗೂ ಸಮಾಜ ಸೇವಕ ಮಾಸ್ತಿ ಜಾಕಿರ್ ಅವರು ತಮ್ಮ ಸ್ವಂತ ದುಡ್ಡಿನಲ್ಲಿ ಕಸ ಎತ್ತುವ ಅಭಿಯಾನ ಮಾಡಿದ್ದಾರೆ.

ಅಧಿಕಾರಿಗಳಿಗೆ ಹಿಡಿಶಾಪ

ಅದೇ ರೀತಿ ಹಳೆ ಗುರಪ್ಪನಪಾಳ್ಯ ವೃತ್ತದಲ್ಲಿ ಸ್ಥಳೀಯ ನಿವಾಸಿಗಳು ರೊಚ್ಚಿಗೆದ್ದಿದ್ದರು. GBA ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಬಿದ್ದು ನಾರುತ್ತಿರುವ ಕಸದ ರಾಶಿಯಿಂದ ಎದುರಾಗಿರುವ ಅನಾನುಕೂಲಗಳನ್ನು ಹೇಳುತ್ತಾ ಹಿಡಿಶಾಪ ಹಾಕಿದರು. ಕಸವನ್ನಾದರೂ ಎತ್ತಿ, ಇಲ್ಲವಾದರೆ ಮತ್ತೆ ಕಸ ಬೀಳದಂತೆ ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.

ವರದಿ: ನಟರಾಜ್​​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us