AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು

ಅಡುಗೆ ಎಣ್ಣೆ, ಟೀ & ಕಾಫಿ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಹಿನ್ನೆಲೆ ಹೋಟೆಲ್ಗಳಲ್ಲಿ ಊಟ, ಉಪಾಹಾರದ ದರ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಊಟದ ದರ ಏರಿಕೆ ಮಾಡಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ.

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು
ಅಡುಗೆ ಎಣ್ಣೆ ಮತ್ತು ಜಿಲೇಬಿ ತಯಾರಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Apr 04, 2022 | 7:31 PM

Share

ಬೆಂಗಳೂರು: ಕೊರೊನಾ ಹೊಡೆತದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಜನ ಸಾಮಾನ್ಯರಿಗೆ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಿಸಿ ಶಾಕ್ ಕೊಟ್ಟಿದೆ. ಇದರ ಜೊತೆಗೆ ಈಗ ಹೋಟೆಲ್‌ಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್‌, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಏರಿಕೆ ಮಾಡಿದ್ದಾರೆ.

ಅಡುಗೆ ಎಣ್ಣೆ, ಟೀ & ಕಾಫಿ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಹಿನ್ನೆಲೆ ಹೋಟೆಲ್ಗಳಲ್ಲಿ ಊಟ, ಉಪಾಹಾರದ ದರ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಊಟದ ದರ ಏರಿಕೆ ಮಾಡಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ. ಗ್ರಾಹಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಊಟ, ಉಪಾಹಾರ, ಕಾಫಿ, ಟೀ ದರ ಶೇಕಡಾ 10ರಷ್ಟು ಹೆಚ್ಚಳವಾಗಿದೆ. ಈ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ.

ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಆಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲು ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಆದರೆ ಈ ಸಂದರ್ಭದಲ್ಲಿ ಹೋಟೆಲ್ಗಳಲ್ಲಿ ಬೆಲೆ ಏರಿಕೆಯು ಅನಿವಾರ್ಯವಾಗಿದೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ತೆಗೆದುಕೊಂಡಿರುತ್ತೇವೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನೊಂದು ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು ಇನ್ನೊಂದು ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಕನಿಷ್ಠ ಶೇ.10ರಷ್ಟು ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಯಾವ್ಯಾವ ತಿನಿಸು ದರ ಏರಿಕೆ ಎಂಬುದು ಆಯಾ ಹೋಟೆಲ್ ನವರಿಗೆ ಬಿಟ್ಟಿದ್ದು. ಗ್ಯಾಸ್, ಅಡುಗೆ ಎಣ್ಣೆ ನಿರಂತರವಾಗಿ ಏರಿಕೆಯಾಗುತ್ತಿದೆ. ತಿಂಡಿ ಐದು ರೂ. ಕಾಫಿ, ಟೀ ಎರಡು ರೂ. ಹೆಚ್ಚಳ ಆಗುತ್ತೆ. ವಿದ್ಯುತ್ ದರ ಏರಿಕೆಯೂ ಜಾಸ್ತಿ ಆಗಿರೋದ್ರಿಂದ ದರ ಏರಿಕೆ ಅನಿವಾರ್ಯ. ಸದ್ಯ ಬೆಂಗಳೂರು ನಗರದಲ್ಲಿ ದರ ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಇದನ್ನೂ ಓದಿ: Investors Wealth: ಷೇರುಪೇಟೆ ಹೂಡಿಕೆದಾರರ ಸಂಪತ್ತು ಒಂದು ತಿಂಗಳಲ್ಲಿ 30 ಲಕ್ಷ ಕೋಟಿ ರೂಪಾಯಿ ಹೆಚ್ಚಳ

RR vs RCB Head to Head: ಆರ್​ಸಿಬಿ- ರಾಜಸ್ಥಾನ ಹಣಾಹಣಿ; ಇಬ್ಬರ ಮುಖಾಮುಖಿಯಲ್ಲಿ ಬೆಂಗಳೂರೇ ಬೆಸ್ಟ್

Published On - 7:08 pm, Mon, 4 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್