AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಲಪಾಳ್ಯದಲ್ಲಿ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​ ಸ್ಫೋಟ, ತಪ್ಪಿದ ಭಾರಿ ಅನಾಹುತ

ಭಾರತ್ ಭವಾನಿ ಗ್ಯಾಸ್ ಏಜೆನ್ಸಿಯಲ್ಲಿ ಘಟನೆ ನಡೆದಿದ್ದು, ಇಲ್ಲಿ ಅಕ್ರಮವಾಗಿ ಸಣ್ಣ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಲಾಗ್ತಿತ್ತು ಎಂದು ತಿಳಿದುಬಂದಿದೆ. ಕೂದಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.

ಮೂಡಲಪಾಳ್ಯದಲ್ಲಿ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​ ಸ್ಫೋಟ, ತಪ್ಪಿದ ಭಾರಿ ಅನಾಹುತ
ಮೂಡಲಪಾಳ್ಯದಲ್ಲಿ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಗ್ಯಾಸ್​ ಲೀಕ್​, ಸ್ಫೋಟ ತಪ್ಪಿದ ಭಾರಿ ಅನಾಹುತ
TV9 Web
| Updated By: ಸಾಧು ಶ್ರೀನಾಥ್​|

Updated on:Jan 08, 2022 | 1:52 PM

Share

ಬೆಂಗಳೂರು: ಬೆಂಗಳೂರಿನ ಮೂಡಲ ಪಾಳ್ಯದಲ್ಲಿ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ಸ್ಥಳದಲ್ಲಿ ಗ್ಯಾಸ್ ಲೀಕ್ ಆಗಿದೆ. ಮೂಲಪಾಳ್ಯ ಸರ್ಕಲ್ ನ‌ ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ನಡೆಯುತ್ತಿದ್ದ ವೇಳೆ ಸಿಲಿಂಡರ್ ಲೀಕ್ ಅಗಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿಯಲ್ಲಿ ಘಟನೆ ನಡೆದಿದ್ದು, ಇಲ್ಲಿ ಅಕ್ರಮವಾಗಿ ಸಣ್ಣ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಲಾಗ್ತಿತ್ತು ಎಂದು ತಿಳಿದುಬಂದಿದೆ. ಹತ್ತಾರು ಸಿಲಿಂಡರ್ ಗಳು ಒಂದೆ ಕಡೆ ಇದ್ದವು. ಕೂದಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಸಿದ್ದಾರೆ. ಏಕಾಏಕಿ ಸಿಲಿಂಡರ್ ಲೀಕ್ ಅಗಿದ್ದರ ಪರಿಣಾಮ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಗೋವಿಂದರಾಜನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿರ್ಮಾಣ ಹಂತದ ಪ್ರೆಸ್ಟಿಜ್ ಫಾಲ್‌ಕಾನ್ ಸಿಟಿ ಮಾಲ್ ನಲ್ಲಿ ಬೆಂಕಿ ಮತ್ತೊಂದು ಘಟನೆಯಲ್ಲಿ ಕೋಣನಕುಂಟೆ ಕ್ರಾಸ್ ಮೆಟ್ರೋ ಸ್ಟೇಷನ್ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿ ಪ್ರೆಸ್ಟಿಜ್ ಫಾಲ್‌ಕಾನ್ ಸಿಟಿ ಮಾಲ್ ನಿರ್ಮಾಣ ಆಗ್ತಿತ್ತು. ಕಾರ್ಮಿಕರು ಕಟ್ಟಡದ ಒಳಗೆ ಕೆಲಸ ಮಾಡ್ತಿದ್ದರು. ಕಳೆದೊಂದು ಗಂಟೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆಯಿಂದ ರಸ್ತೆಯೂ ಕಾಣದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ದಟ್ಟ ಹೊಗೆ ಕಂಡು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಘಟನೆಯಲ್ಲಿ ಯಾವುದೆ ಜೀವ ಹಾನಿ ಸಂಭವಿಸಿರುವ ಮಾಹಿತಿ ಇಲ್ಲ.

ಮಂಡ್ಯ ಕಿರುಗಾವಲು: ಮನೆಯಲ್ಲಿ ಗ್ಯಾಸ್ ಸ್ಫೋಟ, ಹೊತ್ತಿ ಉರಿದ ಮನೆ, ಒಬ್ಬರ ಸ್ಥಿತಿ ಗಂಭೀರ ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸ್ಫೋಟ ಸಂಭವಿಸಿದ್ದು, ಮನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗ್ಯಾಸ್ ಸೋರಿಕೆಯಾಗಿ ಮನೆ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಗ್ರಾಮದ ಶಿವಣ್ಣ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ 1 ಲಕ್ಷ ನಗದು ಸೇರಿ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ಪಾದಾರ್ಥಗಳು ನಾಶವಾಗಿವೆ. ಕಿರುಗಾವಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:50 pm, Sat, 8 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ