AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್ ವೇ ಆಫ್ ಬೆಂಗಳೂರಿನ ಫ್ಲೈಓವರ್ ದುರಸ್ತಿ ಕಾರ್ಯ ಇನ್ನೂ ಒಂದು ವಾರ ವಿಳಂಬ; ವಾಹನ ಸಂಚಾರಕ್ಕೆ ಸಮಸ್ಯೆ

ಸತತ 26 ದಿನದಿಂದಲೂ NHAI ಅಧಿಕಾರಿಗಳು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಒಂದು ವಾರಗಳ ಕಾಲ ವಾಹನ ಸವಾರರು ಸಂಚಾರ ದಟ್ಟಣೆಯ ನಡುವೆಯೇ ಸಾಗಬೇಕಿದೆ. NHAI ತಾಂತ್ರಿಕ ಮುಖ್ಯಸ್ಥ ಪಾರ್ವತೀಶಮ್ ಈ ಬಗ್ಗೆ ಮೌಖಿಕ ಹೇಳಿಕೆ ನೀಡಿದ್ದಾರೆ.

ಗೇಟ್ ವೇ ಆಫ್ ಬೆಂಗಳೂರಿನ ಫ್ಲೈಓವರ್ ದುರಸ್ತಿ ಕಾರ್ಯ ಇನ್ನೂ ಒಂದು ವಾರ ವಿಳಂಬ; ವಾಹನ ಸಂಚಾರಕ್ಕೆ ಸಮಸ್ಯೆ
ತುಮಕೂರು ರಸ್ತೆ ಫ್ಲೈಓವರ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Jan 22, 2022 | 1:04 PM

Share

ನೆಲಮಂಗಲ: ಗೇಟ್ ವೇ ಆಫ್ ಬೆಂಗಳೂರಿನ ಬ್ರಿಡ್ಜ್ ದುರಸ್ತಿ ಕಾರ್ಯ ಸರಿಯಾಗಿ ನಡೆದಿಲ್ಲ. 26 ದಿನ ಕಳೆದರೂ ಗೇಟ್ ವೇ ಆಫ್ ಬೆಂಗಳೂರಿನ ಬ್ರಿಡ್ಜ್ ಸರಿಯಾಗಿಲ್ಲ. 4 ಕಿಲೋ ಮೀಟರ್ ಉದ್ದದ ನಾಗಸಂದ್ರ- ಗೊರಗುಂಟೆಪಾಳ್ಯ ಬ್ರಿಡ್ಜ್ ಇನ್ನೂ ಸರಿಯಾಗಿಲ್ಲ. ಡಿಸೆಂಬರ್ 25 ರಂದು 101, 102, 103 ರ ಪಿಲ್ಲರ್ ನಡುವಿನ ಸ್ಲಾಬ್‌ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಉಂಟಾಗಿತ್ತು. ಈ ಸಂಬಂಧ ಟೆಕ್ನಿಕಲ್ ಹೆಡ್ ದೆಹಲಿಯಿಂದ ಬಂದಿದ್ದರು. ಅಹಮದ್ ಶಾಬಜ್ ಅಲಂ ಬಂದು ಸಮಸ್ಯೆ ಗುರ್ತಿಸಿದ್ದರು. ಸಮಯ ಪ್ರಜ್ಞೆಯಿಂದ ಬೆಂಗಳೂರಿನಲ್ಲಿ ಸಂಭವಿಸಬೇಕಿದ್ದ ಭಾರಿ ಅನಾಹುತವೊಂದು ತಪ್ಪಿತ್ತು.

ಆದರೆ, ಅದು ಇನ್ನೂ ದುರಸ್ತಿ ಆಗಿರದ ಬಗ್ಗೆ ಅಸಮಾಧಾನ ಕೇಳಿಬಂದಿದೆ. ಕೇವಲ 10 ವರ್ಷದಲ್ಲೇ ಪ್ಲೈಒವರ್ ಕಳಪೆ ಕಾಮಗಾರಿ ಬಯಲಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. 10 ವರ್ಷದ ಟೆಂಡರ್ ಮುಗಿದಿರೋ ಹಿನ್ನೆಲೆ ಹೊಸ ಸಾಯಿ ಟೋಲ್ ಸಂಸ್ಥೆ ಚಾರ್ಜ್ ವೇಳೆ ಘಟನೆ ಬೆಳಕಿಗೆ ಬಂದಿದೆ. ಫ್ಲೈ‌ ಓವರ್‌ನಲ್ಲಿ 16 ರೋಪ್‌ಗಳನ್ನ ಅಳವಡಿಸಿದ್ದು ಅದರಲ್ಲಿ ಎರಡು ರೋಪ್‌ನ ಸೆಗ್ಮೆಂಟ್ ಜಾಯಿಂಟ್ ಮಾತ್ರ ಸಮಸ್ಯೆಯಾಗಿತ್ತು ಎಂದು ತಿಳಿದುಬಂದಿದೆ.

ಫ್ಲೈ‌ ಓವರ್‌ನಲ್ಲಿ ಒಟ್ಟು 116 ಪಿಲ್ಲರ್‌ಗಳಿದ್ದು ಅದರಲ್ಲಿ 101, 102, 103ನೇ ಪಿಲ್ಲರ್ ನಡುವಿನ ಸ್ಲಾಬ್‌ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಎದುರಾಗಿದೆ. ಸತತ 26 ದಿನದಿಂದಲೂ NHAI ಅಧಿಕಾರಿಗಳು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಒಂದು ವಾರಗಳ ಕಾಲ ವಾಹನ ಸವಾರರು ಸಂಚಾರ ದಟ್ಟಣೆಯ ನಡುವೆಯೇ ಸಾಗಬೇಕಿದೆ. NHAI ತಾಂತ್ರಿಕ ಮುಖ್ಯಸ್ಥ ಪಾರ್ವತೀಶಮ್ ಈ ಬಗ್ಗೆ ಮೌಖಿಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ; ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ, ಬೆಳ್ಳಂ ಬೆಳಿಗ್ಗೆ ಟ್ರಾಫಿಕ್ ಜಾಮ್

ಇದನ್ನೂ ಓದಿ: Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!