AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳ ವಿರುದ್ಧ ಆರೋಪ ನಿಗದಿ ಮಾಡಿದ ಸಿಸಿಹೆಚ್ ವಿಶೇಷ ನ್ಯಾಯಾಲಯ

ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದೆ. ಡಿಸೆಂಬರ್ 8 ರಿಂದ ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರಣೆ ಆರಂಭಿಸಲಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳ ವಿರುದ್ಧ ಆರೋಪ ನಿಗದಿ ಮಾಡಿದ ಸಿಸಿಹೆಚ್ ವಿಶೇಷ ನ್ಯಾಯಾಲಯ
ಪತ್ರಕರ್ತೆ ಗೌರಿ ಲಂಕೇಶ್
TV9 Web
| Edited By: |

Updated on: Nov 01, 2021 | 1:02 PM

Share

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಸಿಸಿಹೆಚ್ ವಿಶೇಷ ನ್ಯಾಯಾಲಯದಿಂದ ಆರೋಪ ನಿಗದಿ ಮಾಡಲಾಗಿದೆ. ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದೆ. ಡಿಸೆಂಬರ್ 8 ರಿಂದ ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರಣೆ ಆರಂಭಿಸಲಿದೆ.

ಇನ್ನು ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನು ಆರೋಪಿಗಳಿಗೆ ಕೊಲೆ, ಕ್ರಿಮಿನಲ್‌ ಪಿತೂರಿ, ಸಂಘಟಿತ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳು, 2000ರ ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ ಹಾಗೂ 1959ರ ಶಸ್ತ್ರಾಸ್ತ್ರ ಕಾಯಿದೆ, ಅಡಿಯಲ್ಲಿ ಆರೋಪಗಳನ್ನು ರೂಪಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಜನರನ್ನು ಬಂಧಿಸಲಾಗಿದೆ. ನ್ಯಾಯಾಲಯ ಆಕ್ಟೋಬರ್ 29 ರಂದು ಬಂಧಿತ ಆರೋಪಿಗಳ ವಿಚಾರಣೆ ನಡೆಸಿದೆ. ಆರೋಪಿಗಳಾದ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಅಮಿತ್ ಬಡ್ಡಿ, ಗಣೇಶ್ ಮಿಸ್ಕಿನ್, ಅಮಿತ್ ದೇಗ್ವೆಕರ್ ಸೇರಿ 17 ಜನರ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿತ್ತು. ಐಪಿಸಿ ಸೆಕ್ಷನ್ 302, 120ಬಿ, ಆರ್ಮ್ಸ್ ಌಕ್ಟ್, ಕೋಕಾ 2000 ಕಾಯ್ದೆ, ಹಲವು ಸೆಕ್ಷನ್ಗಳಡಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: Gauri Lankesh Day ಕೆನಡಾದ ಬರ್ನಾಬಿಯಲ್ಲಿ ಸೆಪ್ಟೆಂಬರ್ 5ಕ್ಕೆ ಗೌರಿ ಲಂಕೇಶ್ ದಿನ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ನವೀನ್​ಗೆ ಕಿಡ್ನಿ ಸಮಸ್ಯೆ; ಆಸ್ಪತ್ರೆಗೆ ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!