AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್​ ಹತ್ಯೆ ಪ್ರಕರಣ: ಜುಲೈ 4ರಿಂದ ನಿರಂತರ ವಿಚಾರಣೆ ಆರಂಭ

ಪ್ರಕರಣದ ವಿಚಾರಣೆಯನ್ನು ವಿಶೇಷ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ನಡೆಸುತ್ತಿದೆ. ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರು ಶುಕ್ರವಾರ ವಿಚಾರಣೆಗೆ ಮಾರ್ಗಸೂಚಿಗಳನ್ನು ನಿಗದಿಪಡಿಸಿದ್ದಾರೆ.

ಗೌರಿ ಲಂಕೇಶ್​ ಹತ್ಯೆ ಪ್ರಕರಣ: ಜುಲೈ 4ರಿಂದ ನಿರಂತರ ವಿಚಾರಣೆ ಆರಂಭ
ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್
TV9 Web
| Edited By: |

Updated on: May 28, 2022 | 10:53 AM

Share

ಬೆಂಗಳೂರು: ಸುಮಾರು ಐದು ವರ್ಷಗಳ ಹಿಂದೆ ಗುಂಡೇಟಿಗೆ ಬಲಿಯಾಗಿದ್ದ, ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಯನ್ನು ಜುಲೈ 4ರಿಂದ 8ರವರೆಗೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್‌ ಕೋರ್ಟ್‌ ಸ್ಪಷ್ಟಪಡಿಸಿದೆ. ಪ್ರಕರಣದ ವಿಚಾರಣೆಯನ್ನು ವಿಶೇಷ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ನಡೆಸುತ್ತಿದೆ. ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರು ಶುಕ್ರವಾರ ವಿಚಾರಣೆಗೆ ಮಾರ್ಗಸೂಚಿಗಳನ್ನು ನಿಗದಿಪಡಿಸಿದ್ದಾರೆ. ವಿಚಾರಣೆಯು ತಿಂಗಳ ಪ್ರತಿ ಎರಡನೇ ವಾರದಲ್ಲಿ ಐದು ದಿನಗಳವರೆಗೆ ನಿರಂತರ ನಡೆಯಲಿದೆ. ಪ್ರಕರಣದ ವಾದಗಳ ವಿಚಾರಣೆಯನ್ನು ಜುಲೈ 4 ರಿಂದ ಜುಲೈ 8 ರವರೆಗೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಜೋಶಿ ಹೇಳಿದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ದೂರುದಾರರಾದ ಕವಿತಾ ಅವರ ಸಹೋದರಿ ಕವಿತಾ ಅವರ ಹೇಳಿಕೆಯನ್ನು ಶುಕ್ರವಾರ ದಾಖಲಿಸಿಕೊಳ್ಳಲಾಗಿತ್ತು. ಆದರೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಆರೋಪಿಗಳ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಸಿಡಬ್ಲ್ಯೂ 1 (ಕವಿತಾ) ನ್ಯಾಯಾಲಯದ ಮುಂದೆ ಎಲ್ಲಾ ಆರೋಪಿಗಳ ಉಪಸ್ಥಿತಿಯನ್ನು ಖಾತ್ರಿಪಡಿಸಿದ ನಂತರ ಅವರ ಸಾಕ್ಷ್ಯವನ್ನು ದಾಖಲಿಸಲಾಗುವುದು ಎಂದು ಇದಕ್ಕೆ ನ್ಯಾಯಾಧೀಶರು ಹೇಳಿದರು. ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಮುಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ 17 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ವಿಚಾರಣೆಯ ಸಂದರ್ಭದಲ್ಲಿ, ಆರೋಪಿಗಳ ಪರ ವಕೀಲರು ತಮ್ಮ ಕಕ್ಷಿದಾರರ ಭೌತಿಕ ಉಪಸ್ಥಿತಿಯಲ್ಲಿ ಮಾತ್ರ ವಿಚಾರಣೆಯನ್ನು ನಡೆಸಬೇಕೆಂದು ಕೋರಿ ಅರ್ಜಿಯನ್ನು ಸಲ್ಲಿಸಿದರು. ವಿಚಾರಣೆಯ ಸಮಯದಲ್ಲಿ ತಮ್ಮ ಕಕ್ಷಿದಾರರನ್ನು ಸಮಾಲೋಚಿಸಬೇಕು ಎಂದು ವಕೀಲರು ಹೇಳಿದರು. ಇದಕ್ಕೆ ನ್ಯಾಯಾಧೀಶರು, ಕೆಲವು ಆರೋಪಿಗಳ ಉಪಸ್ಥಿತಿಯನ್ನು ಕೋರಲು ವಕೀಲರಿಗೆ ಹಕ್ಕಿದೆ. ಆದರೆ ಅವರು ಭೌತಿಕ ಉಪಸ್ಥಿತಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನವರಿಂದ ಹಿಂದೂ ಸಮಾಜ ಒಡೆಯುವ ಕೆಲಸ ಆಗುತ್ತಿದೆ : ಬಿ. ಸಿ ನಾಗೇಶ್

ಆದರೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಲು ನ್ಯಾಯಾಲಯ ಆದೇಶಿಸಿದೆ. ಮತ್ತು ವಕೀಲರು ತಮ್ಮ ಕಕ್ಷಿದಾರರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಅಥವಾ ಅವರನ್ನು ದೈಹಿಕವಾಗಿ ಭೇಟಿ ಮಾಡಲು ಅವಕಾಶ ನೀಡಲಾಗುವುದು ಎಂದು ಹೇಳಿದರು. ವರ್ಚುವಲ್ ಉಪಸ್ಥಿತಿಯನ್ನು ಭೌತಿಕ ಸಲಹಾ ವಿಧಾನವಾಗಿ ಸ್ವೀಕರಿಸಲಾಗಿದೆ. ಜೈಲು ಅಧಿಕಾರಿಗಳಿಗೆ ದೂರವಾಣಿ ಸಂಪರ್ಕಕ್ಕೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

ಗಣೇಶ್ ಮಿಸ್ಕಿನ್ (A3), ಅಮಿತ್ ಬದ್ದಿ (A4), ಸುಧಾವ ಗೊಂಡಲಕರ್ (A9), ಶರದ್ ಕಲಾಸ್ಕರ್ (10), ವಾಸುದೇವ್ ಸೂರ್ಯವಂಶಿ (A12), ಮತ್ತು ರಿಷಿಕೇಶ್ ದಿಯೋಡಿಕರ್ (A18) ಪ್ರಮುಖ ಆರೋಪಿಗಳಾಗಿದ್ದು, ಇವರು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ವಿಚಾರಣೆಯ ಸಮಯದಲ್ಲಿ ಗೈರುಹಾಜರಾಗಿದ್ದರು, ಉಳಿದ ಆರೋಪಿಗಳು ಬೆಂಗಳೂರಿನ ಪರಪ್ಪನ ಜೈಲಿನಲ್ಲಿದ್ದರು. ಶೂಟರ್ ಪರಶುರಾಮ್ ವಾಘ್ಮೋರೆ ಮತ್ತು ಕೊಲೆ ಸಂಚು ರೂಪಿಸಿದ ಅಮೋಲ್ ಕಾಳೆ ಸೇರಿದಂತೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಯ ಭಾಗವಾಗಿದ್ದರು.

ಇದನ್ನೂ ಓದಿ: World Menstrual Hygiene Day 2022: ಸ್ತ್ರೀಯರು ಈ ಸಲಹೆಗಳನ್ನು ತಪ್ಪೆದೇ ಅನುಸರಿಸಿ, ಈ ತಪ್ಪು ಮಾಡಲೇ ಬೇಡಿ

ಕೊಲೆ ಪ್ರಕರಣದ ತನಿಖೆಗಾಗಿ ಕರ್ನಾಟಕ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, (ಎಸ್‌ಐಟಿ) ಆರೋಪ ಪಟ್ಟಿಯಲ್ಲಿ ವಿವಿಧ ಹಿಂದುತ್ವವಾದಿ ಸಂಘಟನೆಗಳ ಬಲಪಂಥೀಯ ಕಾರ್ಯಕರ್ತರನ್ನು ಸೇರ್ಪಡೆಗೊಳಿಸಿದೆ ಎನ್ನಲಾದ ಅನಾಮಧೇಯ ಸಂಘಟನೆಯು ಕೊಲೆಯ ಹಿಂದೆ ಇದೆ ಎಂದು ಹೇಳಿದೆ. ಧಾರವಾಡದಲ್ಲಿ ನಡೆದ ವಿಚಾರವಾದಿಗಳಾದ ಎಂಎಂ ಕಲಬುರ್ಗಿ ಮತ್ತು ಮಹಾರಾಷ್ಟ್ರದಲ್ಲಿ ಗೋವಿಂದ ಪನ್ಸಾರೆ ಮತ್ತು ನರೇಂದ್ರ ಧಾಬೋಲ್ಕರ್ ಅವರ ಹತ್ಯೆಯ ನಡುವಿನ ಸಂಬಂಧವನ್ನು ತನಿಖೆಯು ಬಹಿರಂಗಪಡಿಸಿದೆ. ಎಸ್‌ಐಟಿ ಅಧಿಕಾರಿಗಳ ಪ್ರಕಾರ, ಲಂಕೇಶ್ ಪ್ರಕರಣದ ವಿಚಾರಣೆಯು ಪ್ರಗತಿ ಕಾಣದ ಇತರೆ ಮೂರು ಕೊಲೆ ಪ್ರಕರಣಗಳ ತನಿಖೆಯ ಮೇಲೆ ಪರಿಣಾಮ ಬೀರುತ್ತದೆ. ತನಿಖೆಯ ಆರಂಭಿಕ ದಿನಗಳಲ್ಲಿ, ಆಗಸ್ಟ್ 30, 2015 ರಂದು ಹತ್ಯೆಯಾದ ಲಂಕೇಶ್ ಮತ್ತು ಕಲ್ಬುರ್ಗಿ ಅವರ ಹತ್ಯೆಗಳ ನಡುವಿನ ಸಂಬಂಧವನ್ನು ಎಸ್‌ಐಟಿ ಪತ್ತೆ ಮಾಡಿದೆ. ಲಂಕೇಶ್ ಅವರ ಮನೆಯಿಂದ ವಶಪಡಿಸಿಕೊಂಡ ನಾಲ್ಕು ಗುಂಡುಗಳು ಮತ್ತು ಕಾಟ್ರಿಡ್ಜ್‌ಗಳು ಕಲ್ಬುರ್ಗಿ ಅವರ ಹತ್ಯೆಯ ಸ್ಲಗ್ ಮತ್ತು ಕಾರ್ಟ್ರಿಡ್ಜ್‌ಗಳಿಗೆ ಹೊಂದಿಕೆಯಾಗುತ್ತವೆ. ಫೊರೆನ್ಸಿಕ್ ಲ್ಯಾಬ್‌ ವರದಿ ಪ್ರಕಾರ ಒಂದೇ ಬಂದೂಕಿನಿಂದ ಗುಂಡುಗಳನ್ನು ಹಾರಿಸಿರುವುದಾಗಿ ಕಂಡುಬಂದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?