AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಪೂರ್ಣ ಪ್ರಮಾಣದಲ್ಲಿ ಸೂರ್ಯ ಗವಿ ಗಂಗಾಧರೇಶ್ವರನನ್ನು ಸ್ಪರ್ಶಿಸಿರುವುದರಿಂದ ಎಲ್ಲವೂ ಒಳ್ಳೆಯದೇ ಆಗಲಿದೆ; ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್

ಸೂರ್ಯ ಕಳೆದ ಬಾರಿ ಮುನಿಸಿಕೊಂಡಿದ್ದ. ಕಳೆದ ಬಾರಿ ಸೂರ್ಯನ ದರ್ಶನ ಆಗಿರಲಿಲ್ಲ. ಆದರೆ, ಇಂದು ಪೂರ್ಣ ಪ್ರಮಾಣದಲ್ಲಿ ಸೂರ್ಯ ಶಿವಲಿಂಗವನ್ನು ಸ್ಪರ್ಶ ಮಾಡಿರುವುದರಿಂದ ಎಲ್ಲವೂ ತುಂಬ ಒಳ್ಳೆಯದಾಗುತ್ತದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ.

ಈ ಬಾರಿ ಪೂರ್ಣ ಪ್ರಮಾಣದಲ್ಲಿ ಸೂರ್ಯ ಗವಿ ಗಂಗಾಧರೇಶ್ವರನನ್ನು ಸ್ಪರ್ಶಿಸಿರುವುದರಿಂದ ಎಲ್ಲವೂ ಒಳ್ಳೆಯದೇ ಆಗಲಿದೆ; ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್
ಗವಿ ಗಂಗಾಧರೇಶ್ವರ ದೇವಸ್ಥಾನದ ಅರ್ಚಕ ಸೋಮಸುಂದರ್ ದೀಕ್ಷಿತ್
TV9 Web
| Edited By: |

Updated on: Jan 14, 2022 | 6:51 PM

Share

ಬೆಂಗಳೂರು: ಬಸವನಗುಡಿಯ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸೂರ್ಯ ರಶ್ಮಿ ಶಿವ ಲಿಂಗವನ್ನು ಸ್ಪರ್ಶಿಸಿದೆ. ಈ ವೇಳೆ ಮಾತನಾಡಿರುವ ಗವಿಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್, ಕಳೆದ ಬಾರಿ ಮೋಡ ಮುಸುಕಿದ್ದರಿಂದ ಮಕರ ಸಂಕ್ರಾಂತಿಯಂದು ಸಂಪೂರ್ಣವಾಗಿ ಸೂರ್ಯನ ರಶ್ಮಿ ಶಿವ ಲಿಂಗವನ್ನು ಸ್ಪರ್ಶಿಸಿರಲಿಲ್ಲ. ಕಳೆದ ವರ್ಷವಿಡೀ ನಾವು ಕೊರೊನಾದಿಂದಾಗಿ ಸಾಕಷ್ಟು ಅನಾಹುತಗಳನ್ನು, ಸಾವು-ನೋವುಗಳನ್ನು ನೋಡಬೇಕಾಯಿತು. ಆದರೆ, ಇಂದು ಪೂರ್ಣ ಪ್ರಮಾಣದಲ್ಲಿ ಸೂರ್ಯ ಶಿವಲಿಂಗವನ್ನು ಸ್ಪರ್ಶ ಮಾಡಿರುವುದರಿಂದ ಎಲ್ಲವೂ ತುಂಬ ಒಳ್ಳೆಯದಾಗುತ್ತದೆ. ಸೂರ್ಯ ಕಳೆದ ಬಾರಿ ಮುನಿಸಿಕೊಂಡಿದ್ದ. ಈ ಬಾರಿ ಕಳೆದ‌ ಬಾರಿಯ ಬೇಸರವನ್ನು ತೊಳೆದಿದ್ದಾನೆ ಎಂದಿದ್ದಾರೆ.

ಇವತ್ತು ಬಹಳ ವಿಶೇಷವಾದ ದಿನ. ಮಾಧ್ಯಮ ಮಿತ್ರರ ಸಹಕಾರದಿಂದ ನಾನು ಮನೆಯಲ್ಲೇ ಕುಳಿತು ಕೌತುಕವನ್ನು ಕಣ್ಣು ತುಂಬಿಕೊಂಡಿದ್ದೀರ. ಸೂರ್ಯ ದೇವನು ಶಿವನಿಗೆ ಪೂಜೆ ಮಾಡಿ ಹೋಗಿದ್ದಾನೆ. ಶಿವ ಹಾಗೂ ಪಾರ್ವತಿ ಒಂದೇ ಪೀಠದಲ್ಲಿವೆ. ಯಾರನ್ನೇ ದರ್ಶನ ಮಾಡಿದ್ರೂ ಪಾದ ಮುಟ್ಟಿ ನಮಸ್ಕಾರ ಮಾಡುತ್ತೇವೆ. ಅದೇ ರೀತಿ ಸೂರ್ಯನು ಶಿವನ ಪಾದವನ್ನು ಮೊದಲು ಸ್ಪರ್ಶ ಮಾಡಿದ್ದಾನೆ.

13 ನಿಮಿಷಗಳ ಕಾಲ ಶಿವಲಿಂಗದ ಮೇಲೆ ಸೂರ್ಯನ ಸ್ಪರ್ಶವಾಗಿದೆ. ಧಾರ್ಮಿಕವಾಗಿ ಶಿವಪೂಜೆ‌ ನಿರಾತಂಕವಾಗಿ ನಡೆದಿದೆ. ಪೂರ್ಣ ಪ್ರಮಾಣದಲ್ಲಿ ಸೂರ್ಯನು ಶಿವಲಿಂಗವನ್ನು ಸ್ಪರ್ಶ ಮಾಡಿರೋದ್ರಿಂದ ತುಂಬಾ ಒಳ್ಳೇಯದಾಗುತ್ತದೆ. ಸೂರ್ಯ ಕಳೆದ ಬಾರಿ ಮುನಿಸಿಕೊಂಡಿದ್ದ. ಕಳೆದ ಬಾರಿ ಸೂರ್ಯನ ದರ್ಶನ ಆಗಿರಲಿಲ್ಲ. ಈ ಬಾರಿ ಕೊರೊನಾ ಮೂರನೇ ಅಲೆ ಅಲೆಯಾಗೇ ಹೋಗಲಿ. ಶಿವನ ಪಾದದಿಂದ 2 ನಿಮಿಷ ತಲೆಯನ್ನು ಸ್ಪರ್ಶ ಮಾಡಿದ್ದಾನೆ. 13 ಸೆಕೆಂಡ್ ಶಿವ ಶಿರದ ಮೇಲೆ ಸೂರ್ಯಸ್ಪರ್ಶವಾಗಿದೆ ಎಂದು ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ.

ಬೆಂಗಳೂರು ನಗರದ ಗವಿಪುರಂನಲ್ಲಿರುವ ಐತಿಹಾಸಿಕ ದೇವಾಲಯವಾದ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿನ ಶಿವಲಿಂಗದ ಮೇಲೆ ಸೂರ್ಯ ರಶ್ಮಿಯ ದರ್ಶನವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಸೂರ್ಯ ಗವಿಗಂಗಾಧರೇಶ್ವರನಿಗೆ ನಮಿಸಿದ್ದಾನೆ. ಲಿಂಗದ ಮುಂದಿರುವ ನಂದಿಕೊಂಬಿನಿಂದ ಹಾದು ಶಿವನ ಸ್ಪರ್ಶ ಮಾಡಿದೆ. ಸೂರ್ಯರಶ್ಮಿ ಸ್ಪರ್ಶದ ಹಿನ್ನೆಲೆ ಶಿವನಿಗೆ ವಿಶೇಷ ಅಭಿಷೇಕ ಮಾಡಲಾಯಿತು. ಕೊವಿಡ್ ಹಿನ್ನೆಲೆಯಲ್ಲಿ ಗವಿ ಗಂಗಾಧರೇಶ್ವರ ದೇವರ ದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಭಕ್ತರು ಮನೆಯಲ್ಲೇ ಕುಳಿತು ಟಿವಿಯಲ್ಲಿ ಪ್ರಕೃತಿ ವಿಸ್ಮಯವನ್ನು ಕಣ್ತುಂಬಿಕೊಂಡರು. ಸೂರ್ಯ ರಶ್ಮಿ ಗವಿಗಂಗಾಧರನ ಸ್ಪರ್ಶಿಸುವ ಕ್ಷಣಕ್ಕೆ ಕೆಲವೇ ಜನರು ದೇವಸ್ಥಾನದಲ್ಲಿ ಸಾಕ್ಷಿಯಾದರು.

ಇದನ್ನೂ ಓದಿ: ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವ ಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಈ ಬಾರಿಯಾದರೂ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಭಾಸ್ಕರನ ಕಿರಣಗಳು ಶಿವಲಿಂಗವನ್ನು ಸ್ಪರ್ಶಿಸಲಿದೆಯೇ?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?