AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ವಾಹನಗಳ ಹರಾಜಿಗೆ ಸಿದ್ಧತೆ: GBA ಮತ್ತು ಪೊಲೀಸರಿಂದ ಭರ್ಜರಿ ಜಂಟಿ ಕಾರ್ಯಾಚರಣೆ!

ರಸ್ತೆ ಬದಿಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು GBA ಮತ್ತು ಪೊಲೀಸ್ ಇಲಾಖೆ ಚುರುಕುಗೊಳಿಸಿದೆ. ಜುಲೈ 10 ರಿಂದ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಇದುವರೆಗೆ 6,544 ವಾಹನಗಳು ಪತ್ತೆಯಾಗಿವೆ. ನೋಟಿಸ್ ಸ್ಟಿಕ್ಕರ್ ಹಾಕಿದ 7 ದಿನಗಳಲ್ಲಿ ವಾಹನ ತೆರವು ಮಾಡದಿದ್ದರೆ ಟೋಯಿಂಗ್ ಮಾಡಲಾಗುವುದು ಹಾಗೂ 15 ದಿನಗಳಲ್ಲಿ ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳದಿದ್ದರೆ ಅಂತಹ ವಾಹನಗಳನ್ನು ಹರಾಜು ಮಾಡಲಾಗುತ್ತದೆ.

ರಸ್ತೆ ಬದಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ವಾಹನಗಳ ಹರಾಜಿಗೆ ಸಿದ್ಧತೆ: GBA ಮತ್ತು ಪೊಲೀಸರಿಂದ ಭರ್ಜರಿ ಜಂಟಿ ಕಾರ್ಯಾಚರಣೆ!
ಸಾಂದರ್ಭಿಕ ಚಿತ್ರImage Credit source: The Hindu
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 08, 2026 | 10:45 AM

Share

ಮುಖ್ಯಾಂಶಗಳು

  • ರಸ್ತೆ ಬದಿ ನಿಂತಿದ್ದ 6,544 ಬೀಡಾಡಿ ವಾಹನಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
  • ಸ್ಟಿಕ್ಕರ್ ಅಂಟಿಸಿದ 7 ದಿನಗಳಲ್ಲಿ ವಾಹನ ತೆರವುಗೊಳಿಸದಿದ್ದರೆ ಟೋಯಿಂಗ್ ಕಡ್ಡಾಯ.
  • 15 ದಿನಗಳಲ್ಲಿ ಮಾಲೀಕರು ಬಾರದಿದ್ದರೆ ವಾಹನಗಳನ್ನು ಹರಾಜು ಹಾಕಲಾಗುವುದು.

ಬೆಂಗಳೂರು, ಆಗಸ್ಟ್ 08: ರಸ್ತೆ ಬದಿಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಪರಿತ್ಯಕ್ತ ವಾಹನಗಳ ವಿರುದ್ಧ ಜಿಬಿಎ (GBA) ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಭರ್ಜರಿ ತೆರವು ಕಾರ್ಯಾಚರಣೆ ಆರಂಭಿಸಿವೆ. ಕಳೆದ ಜುಲೈ 10 ರಿಂದ ಶುರುವಾದ ಈ ವಿಶೇಷ ಆಪರೇಷನ್ ತೀವ್ರಗತಿಯಲ್ಲಿ ಸಾಗುತ್ತಿದ್ದು, ಇನ್ನು ಮುಂದೆ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ.

6,500ಕ್ಕೂ ಹೆಚ್ಚು ವಾಹನಗಳ ಪತ್ತೆ!

ಕಾರ್ಯಾಚರಣೆ ಆರಂಭವಾದ ದಿನದಿಂದ ಇಂದಿನವರೆಗೆ ಒಟ್ಟು 6,544 ವಾಹನಗಳು ವರದಿಯಾಗಿವೆ. ಇದರಲ್ಲಿ ಸಾರ್ವಜನಿಕರೇ ಜವಾಬ್ದಾರಿಯಿಂದ ಮುಂದೆ ಬಂದು 4,108 ಅಬಾಂಡೆಂಟ್ ವಾಹನಗಳನ್ನು ಪತ್ತೆ ಹಚ್ಚಿ ಮಾಹಿತಿ ನೀಡಿದ್ದಾರೆ. ಇನ್ನುಳಿದ 2,436 ವಾಹನಗಳನ್ನು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಿಪೋರ್ಟ್ ಮಾಡಿದ್ದಾರೆ. ಈ ಪೈಕಿ ಒಟ್ಟು 3,100 ವಾಹನಗಳು ಕಂಪ್ಲೀಟ್ ಆಗಿ ರಸ್ತೆ ಬದಿಯಲ್ಲೇ ಬಿದ್ದಿರುವುದು ದಾಖಲಾಗಿದೆ.

7 ದಿನಗಳ ಗಡುವು

ರಸ್ತೆ ಬದಿ ಬಿದ್ದಿರುವ ವಾಹನಗಳನ್ನು ಜಪ್ತಿ ಮಾಡುವ ಮುನ್ನ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ GBA ಅಧಿಕಾರಿಗಳು ಒಟ್ಟು 1,780 ವಾಹನಗಳಿಗೆ ನೋಟಿಸ್ ಸ್ಟಿಕ್ಕರ್ ಅಂಟಿಸಿದ್ದಾರೆ. ಸದ್ಯ ಪ್ರತಿದಿನ 50 ರಿಂದ 100 ವಾಹನಗಳಿಗೆ ಸ್ಟಿಕ್ಕರ್ ಹಾಕುವ ಕೆಲಸ ನಡೆಯುತ್ತಿದೆ. ನಿಯಮಗಳ ಪ್ರಕಾರ, ಸ್ಟಿಕ್ಕರ್ ಅಂಟಿಸಿದ 7 ದಿನಗಳ ಒಳಗೆ ಮಾಲೀಕರು ವಾಹನವನ್ನು ತೆರವುಗೊಳಿಸದಿದ್ದರೆ ಆ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತದೆ. ಈಗಾಗಲೇ ಇಂತಹ 352 ವಾಹನಗಳನ್ನು ಯಶಸ್ವಿಯಾಗಿ ಟೋಯಿಂಗ್ ಮಾಡಿ ಸುರಕ್ಷಿತವಾಗಿ ಜಪ್ತಿ ಮಾಡಲಾಗಿದೆ.

ಹರಾಜು ಪ್ರಕ್ರಿಯೆ

ಟೋಯಿಂಗ್ ಮಾಡಿದ ಎಲ್ಲಾ ವಾಹನಗಳಿಗೆ ವೀಲ್ ಕ್ಯಾಪ್ ಅಳವಡಿಸಿ ನಿಗದಿತ ಯಾರ್ಡ್ ಅಥವಾ ಸ್ಥಳಗಳಲ್ಲಿ ಜಾಗರೂಕತೆಯಿಂದ ನಿಲ್ಲಿಸಲಾಗಿದೆ. ಜಪ್ತಿಯಾದ ವಾಹನಗಳನ್ನು ಬಿಡಿಸಿಕೊಳ್ಳಲು ಮಾಲೀಕರಿಗೆ 15 ದಿನಗಳ ಗಡುವು ನೀಡಲಾಗುತ್ತದೆ. ಈ ಅವಧಿಯಲ್ಲಿ ಮಾಲೀಕರು ಬರದೇ ಇದ್ದರೆ, GBA ಅಧಿಕಾರಿಗಳು ಆ ವಾಹನಗಳನ್ನು ಕಾನೂನುಬದ್ಧವಾಗಿ ಹರಾಜು ಹಾಕಲಿದ್ದಾರೆ. ಈಗಾಗಲೇ 600 ವಾಹನ ಮಾಲೀಕರು ನೋ ಪಾರ್ಕಿಂಗ್ ಶುಲ್ಕ ಪಾವತಿಸಿ ತಮ್ಮ ವಾಹನಗಳನ್ನು ಬಿಡಿಸಿಕೊಂಡಿದ್ದಾರೆ.

ದಂಡ ಮತ್ತು ಟೋಯಿಂಗ್ ಶುಲ್ಕದ ವಿವರ

  • ದ್ವಿಚಕ್ರ ವಾಹನಗಳು (Two Wheelers): ನೋ ಪಾರ್ಕಿಂಗ್ ಶುಲ್ಕ 500 ರೂ. + ಟೋಯಿಂಗ್ ಚಾರ್ಜ್ 650 ರೂ. (ಒಟ್ಟು ರೂ.1,150)
  • ನಾಲ್ಕು ಚಕ್ರದ ವಾಹನಗಳು (Four Wheelers): ಟೋಯಿಂಗ್ ಚಾರ್ಜ್ 1,000 ರೂ. (ಜೊತೆಗೆ ಅನ್ವಯಿಸುವ ನೋ ಪಾರ್ಕಿಂಗ್ ದಂಡ)

ರಸ್ತೆಗಳನ್ನು ಸ್ವಚ್ಛವಾಗಿಡಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಕಾರ್ಯಾಚರಣೆ ಮುಂದುವರಿಯಲಿದ್ದು, ಸಾರ್ವಜನಿಕರು ರಸ್ತೆ ಬದಿಗಳಲ್ಲಿ ವಾಹನಗಳನ್ನು ಅನಾಥವಾಗಿ ಬಿಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ