AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಇತಿಹಾಸದಲ್ಲೇ ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ: ಏಕೆ, ಏನಿದು?

Bengaluru building demolition: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಕಾರ್ಯಕ್ಕೆ ಕೈ ಹಾಕಿದೆ. 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಿರುವ 18 ಮಹಡಿಗಳಿರುವ ಬೆಂಗಳೂರಿನಲ್ಲಿ ಅತೀ ಎತ್ತರದ ಅಪಾರ್ಟ್​ಮೆಂಟ್​ ತೆರವಿಗೆ ಮುಂದಾಗಿದೆ. ಅಷ್ಟಕ್ಕೂ ಅತ್ಯಂತ ಎತ್ತರದ ಈ ಅಪಾರ್ಟ್​ಮೆಂಟ್ ತೆರವಿಗೆ ಕಾರಣ ಏನು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಇತಿಹಾಸದಲ್ಲೇ ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ: ಏಕೆ, ಏನಿದು?
ಅಪಾರ್ಟ್​ಮೆಂಟ್​Image Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Jul 23, 2026 | 10:17 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಅತೀ ಎತ್ತರದ ಅಪಾರ್ಟ್​ಮೆಂಟ್​ ತೆರವಿಗೆ ಸಿದ್ಧತೆ
  • 18 ಮಹಡಿಯ ಕಟ್ಟಡ ತೆರವಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ
  • 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬಹುಮಹಡಿ ಕಟ್ಟಡ

ಬೆಂಗಳೂರು, ಜುಲೈ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗಾಗಲೇ ನಗರದಲ್ಲಿ ಫುಟ್‌ಪಾತ್‌ಗಳ ಒತ್ತುವರಿ ತೆರವು ಮಾಡುತ್ತಿದೆ. ಇನ್ನು ಇತ್ತೀಚೆಗೆ ಅಕ್ರಮ ಕಟ್ಟಡಗಳ ವಿರುದ್ಧ ಸಮರ ಸಾರುವ ಮೂಲಕ ತೆರವುಗೊಳಿಸಲಾಗಿತ್ತು. ಇದೀಗ ಬಿಜಿಎ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಬೆಂಗಳೂರಿನ ಇತಿಹಾಸದಲ್ಲೇ ಅತ್ಯಂತ ಎತ್ತರದ ಬಹುಮಹಡಿ ಕಟ್ಟಡವೊಂದನ್ನು ನೆಲಸಮಗೊಳಿಸಲು ತೀರ್ಮಾನಿಸಲಾಗಿದ್ದು, ಅಪಾಯಕಾರಿ ಹಂತ ತಲುಪಿರುವ 18 ಮಹಡಿಗಳ ಬೃಹತ್ ಅಪಾರ್ಟ್‌ಮೆಂಟ್ ಕಟ್ಟಡವನ್ನು ತೆರವುಗೊಳಿಸಲು ಅಧಿಕಾರಿಗಳು ಸಂಪೂರ್ಣ ಸಿದ್ಧತೆ ನಡೆಸಿದ್ದಾರೆ.

200 ಕೋಟಿ ರೂ ವೆಚ್ಚದ ಕಟ್ಟಡ ವಾಲಿದ್ದೇಗೆ?

ಎಸ್​​ಎನ್​​ಎನ್​ ರಾಜ್ ಕಾರ್ಪ್ ಸಂಸ್ಥೆಯ ಒಡೆತನದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ 18 ಅಂತಸ್ತಿನ ಕಟ್ಟಡವನ್ನು ನಿರ್ಮಿಸಲಾಗಿತ್ತು. ಒಟ್ಟು 49 ಐಷಾರಾಮಿ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಈ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕಟ್ಟಡದಲ್ಲಿ ತೀವ್ರ ಸ್ವರೂಪದ ರಚನಾತ್ಮಕ ಹಾನಿ (ಸ್ಟ್ರಕ್ಚರಲ್ ಡ್ಯಾಮೇಜ್) ಕಂಡುಬಂದಿದೆ. ಪ್ರಸ್ತುತ ಈ ಕಟ್ಟಡವು ಒಂದು ಬದಿಗೆ ವಾಲಿದ್ದು, ಭವಿಷ್ಯದಲ್ಲಿ ಭಾರೀ ದುರಂತ ಸಂಭವಿಸುವ ಭೀತಿ ಎದುರಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಉದ್ಘಾಟನೆ ಸಮಯದಲ್ಲೇ ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್

ಇನ್ನು ಕಟ್ಟಡದ ಭದ್ರತೆ ಹಾಗೂ ಸಾರ್ವಜನಿಕರ ಜೀವ ರಕ್ಷಣೆಯ ಹಿತದೃಷ್ಟಿಯಿಂದ ಜಿಬಿಎ ಮುಖ್ಯ ಆಯುಕ್ತರು ಹಾಗೂ ಎಸ್​​ಎನ್​​ಎನ್​ ರಾಜ್ ಕಾರ್ಪ್ ಸಂಸ್ಥೆ ಮಾಲೀಕರ ನಡುವೆ ಇಂದು ಉನ್ನತ ಮಟ್ಟದ ಸಭೆ ನಡೆಯಿತು.

ಕಟ್ಟಡ ಡೆಮಾಲಿಷನ್​ಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ಸೂಚನೆ 

ಸಭೆಯಲ್ಲಿ ಕಟ್ಟಡವನ್ನು ತಕ್ಷಣವೇ ಡೆಮಾಲಿಷನ್ ಮಾಡುವಂತೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್​ ಸೂಚಿಸಿದರು. ಇನ್ನು ಪ್ರಾಧಿಕಾರದ ನಿರ್ಧಾರಕ್ಕೆ ಸಂಪೂರ್ಣವಾಗಿ ಒಪ್ಪಿಕೊಂಡಿರುವ ಎಸ್​​ಎನ್​​ಎನ್ ರಾಜ್ ಕಾರ್ಪ್ ಆಡಳಿತ ಮಂಡಳಿಯು, ಇಡೀ ಡೆಮಾಲಿಷನ್ ಕಾರ್ಯಾಚರಣೆಗೆ ತಗುಲುವ ಸಂಪೂರ್ಣ ಖರ್ಚು-ವೆಚ್ಚವನ್ನು ತಾವೇ ಭರಿಸುವುದಾಗಿ ಒಪ್ಪಿಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:23 pm, Thu, 23 July 26

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ