AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಆಸ್ತಿ ಮಾಲೀಕರಿಗೆ ಜಿಬಿಎ ಗುಡ್​ನ್ಯೂಸ್: ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್‌ಲೈನ್ ಇ-ಖಾತಾ ಜಾರಿ

ಬೃಹತ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಮಾಲೀಕರಿಗೆ ಇ-ಖಾತಾ ನೋಂದಣಿ ಸಮಸ್ಯೆಗಳನ್ನು ನಿವಾರಿಸಲು ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದ್ದು, ದಾಖಲೆ ಪರಿಶೀಲನೆ ಸುಲಭವಾಗಲಿದೆ. ಆಸ್ತಿ ಮಾಲೀಕರು ಸುಲಭವಾಗಿ ಮತ್ತು ತ್ವರಿತವಾಗಿ ಇ-ಖಾತಾ ಪಡೆಯಲು ಇದು ಸಹಾಯಕವಾಗಲಿದೆ.

ಬೆಂಗಳೂರು ಆಸ್ತಿ ಮಾಲೀಕರಿಗೆ ಜಿಬಿಎ ಗುಡ್​ನ್ಯೂಸ್: ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್, ಆನ್‌ಲೈನ್ ಇ-ಖಾತಾ ಜಾರಿ
ಪ್ರಾತಿನಿಧಿಕ ಚಿತ್ರ
ಶಾಂತಮೂರ್ತಿ
| Edited By: |

Updated on:Nov 12, 2025 | 9:25 PM

Share

ಬೆಂಗಳೂರು, ನವೆಂಬರ್​ 12: ರಾಜಧಾನಿ ಬೆಂಗಳೂರಿನ ಆಸ್ತಿಮಾಲೀಕರಿಗೆ ಇ-ಖಾತಾ (E-Khata) ನೋಂದಣಿಯಲ್ಲಿ ಆಗುತ್ತಿದ್ದ ಸಮಸ್ಯೆಗಳಿಗೆ ಕೊನೆಗೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಪರಿಹಾರ ನೀಡುವುದಕ್ಕೆ ಹೊರಟಿದೆ. ಇಷ್ಟು ದಿನ ಜಿಬಿಎ ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿದ್ದ ಆಸ್ತಿ ಮಾಲೀಕರಿಗೆ ಕೊನೆಗೂ ಗುಡ್ ನ್ಯೂಸ್ ನೀಡಿರುವ ಜಿಬಿಎ, ಫೇಸ್‌ಲೆಸ್, ಕಾಂಟ್ಯಾಕ್ಟ್ ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಮಾಡುವ ಮೂಲಕ ಕೊಂಚ ರಿಲೀಫ್ ನೀಡಿದೆ.

ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ನೋಂದಣಿಯಲ್ಲಿ ಆಗ್ತಿದ್ದ ಸಮಸ್ಯೆಗಳನ್ನ ಬಗೆಹರಿಸೋಕೆ ಹೊರಟಿರೋ ಜಿಬಿಎ, ಇದೀಗ ಫೇಸ್‌ಲೆಸ್, ಕಾಂಟ್ಯಾಕ್ಟ್-ಲೆಸ್ ಮತ್ತು ಆನ್‌ಲೈನ್ ಇ-ಖಾತಾ ಜಾರಿ ಮಾಡಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಅಂತಿಮ ಇ-ಖಾತಾ ಅಥವಾ ಹೊಸ ಖಾತಾ ಅನುಮೋದಿಸಲು ಎಆರ್‌ಒ ಅಥವಾ ಕೇಸ್ ವರ್ಕರ್ ಆಸ್ತಿ ದಾಖಲೆಗಳನ್ನ ಮಾತ್ರ ಪರಿಶೀಲಿಸಬೇಕಾಗುತ್ತೆ. ಸದ್ಯ ದಾಖಲೆಗಳು ಆನ್‌ಲೈನ್‌ನಲ್ಲಿ ಲಭ್ಯವಿರುವುದರಿಂದ ನಾಗರಿಕರು ಅವರನ್ನ ಭೇಟಿ ಮಾಡುವ ಅಗತ್ಯವಿಲ್ಲದಿರುವುದರಿಂದ ಮಧ್ಯವರ್ತಿಗಳ ಹಾವಳಿ ಹಾಗೂ ಭ್ರಷ್ಟಾಚಾರಕ್ಕೆ ಬ್ರೇಕ್ ಬೀಳಲಿದೆ.

ಇದನ್ನೂ ಓದಿ: ಇಂದಿನಿಂದ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ

ಇನ್ನು ಇಷ್ಟು ದಿನ ಇ-ಖಾತಾ ನೋಂದಣಿಗೆ ಅಂತಾ ಕಾದು ಸುಸ್ತಾಗಿದ್ದ ಆಸ್ತಿ ಮಾಲೀಕರು, ಸರ್ವರ್ ಸಮಸ್ಯೆ, ಅಧಿಕಾರಿಗಳು ಸಿಗದೇ ಇರೋದರ ಜೊತೆಗೆ ಜಾತಿ ಸಮೀಕ್ಷೆಗೆ ಸಿಬ್ಬಂದಿ ನೇಮಿಸಿದ್ದರಿಂದ ಬೇಸತ್ತು ಹೋಗಿದ್ದರು. ಇದೀಗ ಫೇಸ್‌ಲೆಸ್, ಕಾಂಟ್ಯಾಕ್ಟ್ – ಲೆಸ್ ಮತ್ತು ಆನ್‌ಲೈನ್ ಇ-ಖಾತಾ ವ್ಯವಸ್ಥೆಯಿಂದ ಆಸ್ತಿ ಮಾಲೀಕರು ಮಧ್ಯವರ್ತಿಗಳ ಸಹಾಯ ಇಲ್ಲದೇ ಇ-ಖಾತಾ ಪಡೆಯೋಕೆ ಸಹಕಾರಿಯಾಗಲಿದೆ.

ಫೇಸ್ ಲೆಸ್ ಇ-ಖಾತಾ ಪ್ರಯೋಜನಗಳೇನು?

  • 25 ಲಕ್ಷ ಇ-ಖಾತಾಗಳು ಆನ್‌ಲೈನ್‌ನಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಯದಲ್ಲಿ ಲಭ್ಯ.
  • ಕಾವೇರಿ ಮತ್ತು ಸ್ವಯಂಚಾಲಿತ ತಿದ್ದುಪಡಿಗಳೊಂದಿಗೆ ಏಕೀಕರಣ.
  • ಇ-ಖಾತಾ ಬದಲಾವಣೆಗಳ ಪ್ರಕಾರ ಆಸ್ತಿ ತೆರಿಗೆ ದಾಖಲೆಗಳು ಮತ್ತು ಬೆಸ್ಕಾಂ ಮಾಲೀಕತ್ವದಲ್ಲಿ ಸ್ವಯಂಚಾಲಿತ ಬದಲಾವಣೆ.
  • ಮಧ್ಯವರ್ತಿಗಳಿಗೆ ಬ್ರೇಕ್: ಭ್ರಷ್ಟಾಚಾರವನ್ನ ಕಡಿಮೆ ಮಾಡುತ್ತದೆ ಮತ್ತು ಏಜೆಂಟರು ಅಥವಾ ಮಧ್ಯವರ್ತಿಗಳಿಂದ ಶೋಷಣೆಗೆ ಬ್ರೇಕ್ ಬೀಳಲಿದೆ.
  • ಕೆಲಸದ ಹೊರೆ ಕಡಿಮೆ ಮಾಡುವ ಜೊತೆಗೆ ಲಭ್ಯವಿರುವ ಎಲ್ಲಾ ಅಧಿಕಾರಿಗಳಿಗೆ ಅರ್ಜಿಗಳ ಏಕರೂಪದ ವಿತರಣೆಯನ್ನ ಖಚಿತಪಡಿಸುತ್ತೆ.
  • ಪ್ರತಿಯೊಬ್ಬ ಆಸ್ತಿದಾರರು ಅಂತಿಮ ಇ ಖಾತಾ ಅರ್ಜಿಯನ್ನ 7 ದಿನಗಳಲ್ಲಿ ಮತ್ತು ಹೊಸ ಖಾತಾ ಸಂದರ್ಭದಲ್ಲಿ 60 ದಿನಗಳಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ: ಬೆಂಗಳೂರು: ಇ ಖಾತಾ ಮಾಹಿತಿ ನೀಡಲು ಬರಲಿದೆ ಮೊಬೈಲ್ ಆ್ಯಪ್!

ಇತ್ತೀಚೆಗಷ್ಟೇ ಎ ಖಾತಾ ಬಿ ಖಾತಾ ಬದಲಾವಣೆಗೆ ಅವಕಾಶ ನೀಡಿದ್ದ ಜಿಬಿಎ, ಇದೀಗ ಐಟಿಸಿಟಿಯ ಆಸ್ತಿ ಮಾಲೀಕರು ತಮ್ಮ ಆಸ್ತಿಗಳನ್ನ ಇ-ಖಾತಾ ನೋಂದಣಿ ಮಾಡುವುದಕ್ಕೆ ಸಹಾಯವಾಗುವಂತೆ ಜಿಬಿಎ ವ್ಯವಸ್ಥೆ ಮಾಡಿದೆ. ಸದ್ಯ ಸರ್ಕಾರದ ಸೂಚನೆ ಬೆನ್ನಲ್ಲೆ ಶೀಘ್ರವಾಗಿ ಇ-ಖಾತಾ ತಲುಪಿಸೋಕೆ ಹೊಸ ಪ್ರಯೋಗ ಮಾಡೋಕೆ ಹೊರಟಿರೋ ಜಿಬಿಎ ನಡೆಯಿಂದ ಇನ್ನಾದರೂ ಖಾತಾ ಸಮಸ್ಯೆಗಳು ಬಗೆಹರಿಯುತ್ತ ಅನ್ನೋದನ್ನ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 pm, Wed, 12 November 25

Follow Us
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?