AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾನ ಪ್ರಿಯರೇ ಗಮನಿಸಿ: ಜುಲೈ 18ರಂದು ಜಿಬಿಎ ವತಿಯಿಂದ ‘ಸೆಕೆಂಡ್ ಇನ್ನಿಂಗ್ಸ್’ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ

ಜುಲೈ 18ರಂದು ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್‌ನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವತಿಯಿಂದ 'ಸೆಕೆಂಡ್ ಇನ್ನಿಂಗ್ಸ್' ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯವಂತ ದೇಸಿ ತಳಿ ನಾಯಿಗಳನ್ನು ದತ್ತು ಪಡೆಯುವ ಮೂಲಕ ಅವುಗಳಿಗೆ ಹೊಸ ಜೀವನ ನೀಡಿ ಎಂದು ಜಿಬಿಎ ಕರೆ ನೀಡಿದ್ದು, ದತ್ತು ಪಡೆಯಲು ಲಭ್ಯವಿರುವ ನಾಯಿಗಳ ಬಗ್ಗೆ ಮಾಹಿತಿ ತಿಳಿಯೋದು ಹೇಗೆಂಬ ಬಗ್ಗೆಯೂ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ಶ್ವಾನ ಪ್ರಿಯರೇ ಗಮನಿಸಿ: ಜುಲೈ 18ರಂದು ಜಿಬಿಎ ವತಿಯಿಂದ 'ಸೆಕೆಂಡ್ ಇನ್ನಿಂಗ್ಸ್' ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
| Edited By: |

Updated on:Jul 08, 2026 | 5:30 PM

Share

ಮುಖ್ಯಾಂಶಗಳು

  • ಜುಲೈ 18ರಂದು ಜಿಬಿಎ ವತಿಯಿಂದ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ
  • ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್ ನಲ್ಲಿ "ಸೆಕೆಂಡ್ ಇನ್ನಿಂಗ್ಸ್"
  • ದೇಸಿ ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಕರೆ

ಬೆಂಗಳೂರು, ಜುಲೈ 08: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಜುಲೈ 18 (ಶನಿವಾರ) ಮಧ್ಯಾಹ್ನ 3 ಗಂಟೆಗೆ ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್ ನಲ್ಲಿ “ಸೆಕೆಂಡ್ ಇನ್ನಿಂಗ್ಸ್” ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಅಪಘಾತ ಅಥವಾ ಕ್ರೌರ್ಯಕ್ಕೆ ಬಲಿಯಾದ, ತಾಯಿ ಇಲ್ಲದ, ಆರೈಕೆ ಮತ್ತು ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಆರೋಗ್ಯವಂತ ದೇಸಿ ತಳಿ ನಾಯಿಗಳನ್ನು ದತ್ತು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಯಿಗಳ ಮಾಹಿತಿ ತಿಳಿಯೋದು ಹೇಗೆ?

https://drive.google.com/drive/folders/1qljNy3UQAv4Zi32cQ7DN1proDf-ZUDha ಲಿಂಕ್​​ಗೆ ಭೇಟಿ ನೀಡಿ ದತ್ತುಗೆ ಲಭ್ಯವಿರುವ ದೇಸಿ ನಾಯಿಗಳ ವಿವರಗಳನ್ನು ತಿಳಿಯಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯವಂತ ದೇಸಿ ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಬೀದಿ ನಾಯಿಗಳು ಕಚ್ಚಿದ್ರೆ ಸರ್ಕಾರವೇ ಪರಿಹಾರ ನೀಡಬೇಕು; ಸುಪ್ರೀಂ

 ನಟ ಮಾಸ್ಟರ್ ಆನಂದ್ ಮನವಿ

ಶಾಶ್ವತ ಪ್ರೀತಿಯ ಮನೆಯ ನಿರೀಕ್ಷೆಯಲ್ಲಿರುವ ಸ್ಥಳೀಯ (ದೇಸಿ) ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಖ್ಯಾತ ಕನ್ನಡ ನಟ ಮಾಸ್ಟರ್ ಆನಂದ್ ಅವರು ಕೂಡ ಶ್ವಾನ ಪ್ರಿಯರಿಗೆ ಕರೆ ನೀಡಿದ್ದಾರೆ. ಈ ದತ್ತು ಸ್ವೀಕಾರ ಅಭಿಯಾನದಲ್ಲಿ ಭಾಗವಹಿಸಿ, ಆರೋಗ್ಯವಂತ ದೇಸಿ ನಾಯಿಯನ್ನು ದತ್ತು ಪಡೆಯುವ ಮೂಲಕ ಅವುಗಳ ಬದುಕಿಗೆ ಹೊಸ ಭರವಸೆ ಮತ್ತು ಪ್ರೀತಿಯ ನೆಲೆ ನೀಡೋಣ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:24 pm, Wed, 8 July 26

Follow Us
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು