AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್

ಬೆಂಗಳೂರಿನಲ್ಲಿ ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ತಾಣ ಎಂದರೆ ಅದು ಇಂದಿರಾ ಕ್ಯಾಂಟೀನ್. ತಿಂಡಿ, ಊಟ ಕೊಡುವ ಸಮಯ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಇಂದಿರಾ ಕ್ಯಾಂಟೀನ್ ಖಾಲಿ ಹೊಡೆಯುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್​ಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕೊಡೋಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿಂತನೆ ನಡೆಸಿದೆ.

Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್
ಇಂದಿರಾ ಕ್ಯಾಂಟೀನ್​ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Dec 12, 2025 | 7:37 AM

Share

ಬೆಂಗಳೂರು, ಡಿಸೆಂಬರ್ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ (Indira Canteen). ಇದು ಬಡವರಿಗೆ ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ ಹಿತಾಸಕ್ತಿ ಕೊರತೆಯಿಂದಾಗಿ ನಗರದಲ್ಲಿ ಈ ಕ್ಯಾಂಟೀನ್​ಗಳ ಸಮರ್ಪಕ ನಿರ್ವಹಣೆ ಅಷ್ಟಕಷ್ಟೇ ಎಂಬಂತಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಊಟ ನೀಡುವ ಒಂದೊಂದು ಗಂಟೆ ಮಾತ್ರ ಇಂದಿರಾ ಕ್ಯಾಂಟೀನ್​ಗಳಲ್ಲಿ ಜನರಿಗೆ ಎಂಟ್ರಿ ಇರುತ್ತದೆ. ಹೀಗಾಗಿ ಉಳಿದ ವೇಳೆಯಲ್ಲಿ ಮುಚ್ಚುವ ಬದಲು ಅನ್ಯ ಉದ್ದೇಶಕ್ಕೂ ಬಳಕೆಗೂ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚಿಂತನೆ ನಡೆಸಿದೆ.

ಈ ವಿಚಾರವಾಗಿ ಮಾತನಾಡಿರುವ ಜಿಬಿಎ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್, ನಗರದ ಬಹತೇಕ ವಾರ್ಡ್​​ಗಳಲ್ಲಿ ಸುಸಜ್ಜಿತ ರೀತಿಯಲ್ಲಿ ಇಂದಿರಾ ಕ್ಯಾಂಟೀನ್​ಗಳ ನಿರ್ಮಾಣ ಆಗಿದೆ. ಊಟ, ತಿಂಡಿ ಕೊಡಲು ಇಂತಿಷ್ಟು ಸಮಯ ನಿಗದಿಯಾಗಿದೆ. ಉಳಿದ ವೇಳೆ ಅಮೂಲ್ಯವಾದ ಜಾಗವನ್ನು ಖಾಲಿ ಬಿಡುವುದಕ್ಕಿಂತ ಕೆಎಂಎಫ್​ ನಂದಿನಿಯ ಹಾಲು, ಮೊಸರು ಸೇರಿ ಇತರ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಜಿಬಿಎ ಪ್ರಸ್ತಾವನೆ ಕೆಎಂಎಫ್ ಬೆಳವಣಿಗೆಗೆ ಪೂರಕವಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ಒಟ್ಟಾರೆಯಾಗಿ, ನಗರದ ಇಂದಿರಾ ಕ್ಯಾಂಟೀನ್​​ಗಳಲ್ಲಿ ಮುಂದಿನ ದಿನಗಳಲ್ಲಿ ಊಟ ತಿಂಡಿ ಮಾತ್ರವಲ್ಲದೆ ಹಾಲು, ಮೊಸರು, ಮಜ್ಜಿಗೆ ಸೇರಿ ನಂದಿನಿಯ ತರಹೇವಾರಿ ಉತ್ಪನ್ನಗಳು ಜನರಿಗೆ ಸಿಗುವ ಸಾಧ್ಯತೆ ಇದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್