AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಪಾಠಿ ಯುವತಿಗೆ ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ ಹುಡುಗನ ಮೇಲೆ ಬಿತ್ತು ಕೇಸ್! ಹೈಕೋರ್ಟ್ ಹೇಳಿದ್ದೇನು ಗೊತ್ತಾ?

ಇನ್‌ಸ್ಟಾಗ್ರಾಂನಲ್ಲಿ ಸಹಪಾಠಿಗೆ 'Pretty' ಎಂದು ಸಂದೇಶ ಕಳುಹಿಸಿದ್ದ ಯುವಕನ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಯುವಜನರು ಬಳಸುವ ಇಂತಹ 'Gen Z' ಭಾಷೆಯನ್ನು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ದಾಖಲೆಗಳ ಪ್ರಕಾರ, ವಿದ್ಯಾರ್ಥಿ ಕಳುಹಿಸಿದ್ದ ಡಿಎಂಗೆ ಯುವತಿ ಕೂಡ ಧನ್ಯವಾದ ಎಂದು ಉತ್ತರಿಸಿದ್ದರು. ಆದರೆ ವಿದ್ಯಾರ್ಥಿ ಕಳುಹಿಸಿದ್ದ ಇನ್‌ಸ್ಟಾಗ್ರಾಂ ಸಂದೇಶವನ್ನು ಯುವತಿ ತನ್ನ ತಂದೆಗೆ ತೋರಿಸಿದ ಬಳಿಕ ಈ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ಸಹಪಾಠಿ ಯುವತಿಗೆ ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ ಹುಡುಗನ ಮೇಲೆ ಬಿತ್ತು ಕೇಸ್! ಹೈಕೋರ್ಟ್ ಹೇಳಿದ್ದೇನು ಗೊತ್ತಾ?
ಹೈಕೋರ್ಟ್​​ ಆದೇಶ
ಪ್ರಸನ್ನ ಹೆಗಡೆ
|

Updated on:Jul 22, 2026 | 1:44 PM

Share

ಮುಖ್ಯಾಂಶಗಳು

  • ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ್ದಕ್ಕೆ ಕೇಸ್​​
  • ಸಹಪಾಠಿ ಯುವತಿ ದಾಖಲಿಸಿದ್ದ ಕೇಸ್​​ ರದ್ದುಪಡಿಸಿದ ಕೋರ್ಟ್​​
  • Gen Z ಭಾಷೆಯನ್ನು ಅಪರಾಧ ಎನ್ನಲಾಗಲ್ಲ- ಹೈಕೋರ್ಟ್​​

ಬೆಂಗಳೂರು, ಜುಲೈ 22: ಸಯಪಾಠಿ ವಿದ್ಯಾರ್ಥಿನಿಗೆ ​​”Pretty” (ನೀವು ತುಂಬಾ ಸುಂದರ) ಎಂದು ಇನ್‌ಸ್ಟಾಗ್ರಾಂನಲ್ಲಿ ಡೈರೆಕ್ಟ್ ಮೆಸೇಜ್ (DM) ಕಳುಹಿಸಿದ್ದ ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಸುಮಾರು 2 ವರ್ಷಗಳ ಹಿಂದೆ ಘನತೆಗೆ ಚ್ಯುತಿ ಸೇರಿ ಕೆಲ ಆರೋಪಗಳಡಿ 20 ವರ್ಷದ ವಿದ್ಯಾರ್ಥಿಯ ವಿರುದ್ಧ ಐಪಿಎಸ್​ ಅಧಿಕಾರಿಯೋರ್ವರ ಪುತ್ರಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಯುವಕನ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಇದು ಇಬ್ಬರು ಸಹಪಾಠಿಗಳ ನಡುವಿನ ಖಾಸಗಿ ಸಂಭಾಷಣೆ. ಇದು ಸಾರ್ವಜನಿಕವಾಗಿ ಪ್ರಕಟವಾದ ಸಂದೇಶವಲ್ಲ. ಇಂದಿನ ಯುವಜನರು ಬಳಸುವ ‘ಜನರೇಷನ್ Z’ (Gen Z) ಭಾಷೆಯನ್ನು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಪ್ರಕರಣದ ತನಿಖೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟರು. ಪ್ರಕರಣ ಸಂಬಂಧ ಮುಂದಿನ ಕ್ರಮಕ್ಕೆ ಈ ಹಿಂದೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು ಎನ್ನುವುದೂ ಇಲ್ಲಿ ಗಮನಾರ್ಹ.

ವಿದ್ಯಾರ್ಥಿ ಪರ ವಕೀಲರ ವಾದವೇನು?

ನ್ಯಾಯಾಲಯಕ್ಕೆ ಸಲ್ಲಿಸಲಾದ ದಾಖಲೆಗಳ ಪ್ರಕಾರ, ವಿದ್ಯಾರ್ಥಿ ಕಳುಹಿಸಿದ್ದ ಡಿಎಂಗೆ ಯುವತಿ ಕೂಡ ಧನ್ಯವಾದ ಎಂದು ಉತ್ತರಿಸಿದ್ದರು. ಆದರೆ ವಿದ್ಯಾರ್ಥಿ ಕಳುಹಿಸಿದ್ದ ಇನ್‌ಸ್ಟಾಗ್ರಾಂ ಸಂದೇಶವನ್ನು ಯುವತಿ ತನ್ನ ತಂದೆಗೆ ತೋರಿಸಿದ ಬಳಿಕ ಈ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. ವಿದ್ಯಾರ್ಥಿಯ ಪರ ವಾದ ಮಂಡಿಸಿದ ವಕೀಲರು, ಯುವಕ ಪ್ರತಿಭಾವಂತ ಕ್ರಿಕೆಟಿಗನಾಗಿದ್ದು, ತಮಿಳುನಾಡು ತಂಡವನ್ನು ಪ್ರತಿನಿಧಿಸುವ ಕನಸು ಹೊಂದಿದ್ದಾನೆ. ಈ ಕ್ರಿಮಿನಲ್ ಪ್ರಕರಣದಿಂದ ಆತನ ಕ್ರೀಡಾ ಬದುಕಿಗೆ ಗಂಭೀರ ಹಾನಿಯಾಗಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು.

ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ; ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್

ನ್ಯಾಯಾಲಯ ಹೇಳಿದ್ದೇನು?

ತನಿಖೆಯ ವೇಳೆ ಪೊಲೀಸರು ವಿದ್ಯಾರ್ಥಿಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದರು. ಆದರೆ ಕಾನೂನಿನಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ವಿಧಾನವನ್ನು ಪಾಲಿಸದೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಕೀಲರು ಆಕ್ಷೇಪಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ, ಈ ಪ್ರಕರಣದಲ್ಲಿ ಹಿಂಬಾಲಿಸುವುದು (Stalking), ವಾಯರಿಸಂ (Voyeurism) ಅಥವಾ ಮಹಿಳೆಯ ಘನತೆಗೆ ಧಕ್ಕೆ ತರುವ ಯಾವುದೇ ಕೃತ್ಯ ನಡೆದಿರುವುದು ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟು, ವಿದ್ಯಾರ್ಥಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:00 pm, Wed, 22 July 26

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ