AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೂವಿಜ್ಞಾನ ಸರ್ವೇಕ್ಷಣೆ ಅತ್ಯಾಧುನಿಕ ಪ್ರಯೋಗಾಲಯ ಅಸ್ತಿತ್ವಕ್ಕೆ: ಕಲ್ಲಿದ್ದಲು ಸಚಿವ ಪ್ರಲ್ಹಾದ್‌ ಜೋಶಿ ಉದ್ಘಾಟನೆ

ಭೂವಿಜ್ಞಾನ ಸರ್ವೇಕ್ಷಣೆ ಅತ್ಯಾಧುನಿಕ ಪ್ರಯೋಗಾಲಯ: ಇದು ಸದ್ಯ ಬೆಂಗಳೂರಿನಲ್ಲಿ ಭಾರತದ ಅಗತ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವ ಅತ್ಯಾಧುನಿಕ ಪ್ರಯೋಗಾಲಯವಾಗಿದ್ದು, ಸಂಶೋಧನೆ, ವಿಶ್ಲೇಷಣೆಗಳಿಗೆ ಸಂಬಂಧಿಸಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿದೆ. ಇದು ದೇಶದ ಭೂ ವೈಜ್ಞಾನಿಕ ಸಂಶೋಧನೆಗಳಿಗೆ ಹೆಚ್ಚಿನ ರೀತಿಯಲ್ಲಿ ನೆರವಾಗಲಿದೆ.

ಬೆಂಗಳೂರಿನಲ್ಲಿ ಭೂವಿಜ್ಞಾನ ಸರ್ವೇಕ್ಷಣೆ ಅತ್ಯಾಧುನಿಕ ಪ್ರಯೋಗಾಲಯ ಅಸ್ತಿತ್ವಕ್ಕೆ: ಕಲ್ಲಿದ್ದಲು ಸಚಿವ ಪ್ರಲ್ಹಾದ್‌ ಜೋಶಿ ಉದ್ಘಾಟನೆ
ಬೆಂಗಳೂರಿನಲ್ಲಿ ಭೂವಿಜ್ಞಾನ ಸರ್ವೇಕ್ಷಣೆ ಅತ್ಯಾಧುನಿಕ ಪ್ರಯೋಗಾಲಯ ಅಸ್ತಿತ್ವಕ್ಕೆ
TV9 Web
| Updated By: ಸಾಧು ಶ್ರೀನಾಥ್​|

Updated on: Jul 01, 2022 | 1:50 PM

Share

ಬೆಂಗಳೂರು: ಭಾರತೀಯ ಭೂವಿಜ್ಞಾನ ಸರ್ವೇಕ್ಷಣೆಗೆ (Geological Survey of India Laboratory -ಜಿಎಸ್‌ಐ) ಸೇರಿದ ಅತ್ಯಾಧುನಿಕ ಪ್ರಯೋಗಾಲಯವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಈ ಪ್ರಯೋಗಾಲಯವನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ (ಕರ್ನಾಟಕ ಸರ್ಕಾರ) ಸಚಿವರಾದ ಹಾಲಪ್ಪ ಆಚಾರ್, ಸಂಸದ ತೇಜಸ್ವಿ ಸೂರ್ಯ ಮತ್ತು ಗಣಿ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಪ್ರಯೋಗಾಲಯವು ಭೂವಿಜ್ಞಾನ ಸರ್ವೇಕ್ಷಣೆ ಸೇರಿದಂತೆ ದೇಶಾದ್ಯಂತ ಭೂವೈಜ್ಞಾನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಇಲಾಖೆಗಳಿಗೆ ಸಹಕಾರಿಯಾಗಲಿದೆ.

ಭೂವಿಜ್ಞಾನ ಸರ್ವೇಕ್ಷಣೆ ಪ್ರಯೋಗಾಲಯದ ವೈಶಿಷ್ಟ್ಯತೆ ಏನೇನು?

ಭೂವಿಜ್ಞಾನ ಸರ್ವೇಕ್ಷಣ ಇಲಾಖೆ ಭಾರತದ ಅತಿ ಹಳೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು 1851ರಲ್ಲಿ ಆರಂಭವಾಗಿತ್ತು. ಗಣಿ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ ಭೂ ಸರ್ವೇಕ್ಷಣೆ ಸೇರಿದಂತೆ ಭೂಮಿಯ ಕುರಿತ ವಿವಿಧ ಅಧ್ಯಯನಗಳನ್ನು ನಡೆಸುತ್ತದೆ. ಇದು ಸರ್ಕಾರಕ್ಕೆ ಭೂವಿಜ್ಞಾನದ ಕುರಿತ ಮಾಹಿತಿ ಕೊಡುವ ಪ್ರಮುಖ ಸಂಸ್ಥೆ. ಜೊತೆಗೆ ಉಕ್ಕು, ಕಲ್ಲಿದ್ದಲು, ವಿವಿಧ ರೀತಿಯ ಖನಿಜಗಳ ಗಣಿಗಾರಿಕೆ ಸಂಬಂಧಿತ, ವಿದ್ಯುತ್‌ ಕೈಗಾರಿಕೆಗಳಿಗೆ, ಅಂತಾರಾಷ್ಟ್ರೀಯ ಭೂವೈಜ್ಞಾನಿಕ ವೇದಿಕೆಗಳಿಗೆ ಮಾಹಿತಿಯನ್ನು ನೀಡುತ್ತದೆ.

ಸದ್ಯ ಬೆಂಗಳೂರಿನಲ್ಲಿ ಭಾರತದ ಅಗತ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವ ಅತ್ಯಾಧುನಿಕ ಪ್ರಯೋಗಾಲಯವಾಗಿದ್ದು, ಸಂಶೋಧನೆ, ವಿಶ್ಲೇಷಣೆಗಳಿಗೆ ಸಂಬಂಧಿಸಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿದೆ. ಇದು ದೇಶದ ಭೂ ವೈಜ್ಞಾನಿಕ ಸಂಶೋಧನೆಗಳಿಗೆ ಹೆಚ್ಚಿನ ರೀತಿಯಲ್ಲಿ ನೆರವಾಗಲಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ