AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ

ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಆನ್‌ಲೈನ್ ಬೆಟ್ಟಿಂಗ್‌ಗೆ ಹಣಕ್ಕಾಗಿ ಗ್ರಾಹಕರ ಅಡವಿಟ್ಟ ಚಿನ್ನಾಭರಣವನ್ನು ಕದ್ದು ಮಾರಾಟ ಮಾಡಿದ್ದಾನೆ. ಕೃತ್ಯ ಬಯಲಾದ ನಂತರ ಪೊಲೀಸರು ಆತನನ್ನು ಬಂಧಿಸಿ, 700 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಉಳಿದ ಚಿನ್ನ ಪತ್ತೆಗೆ ತನಿಖೆ ಮುಂದುವರಿದಿದೆ.

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ!  ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ
ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ!
ಭಾವನಾ ಹೆಗಡೆ
|

Updated on:Feb 14, 2026 | 12:28 PM

Share

ಬೆಂಗಳೂರು, ಫೆಬ್ರವರಿ 14: ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಭಾರೀ ಚಿನ್ನ ಕಳ್ಳತನದ (Gold robbery) ಘಟನೆ ನಡೆದಿದ್ದು, ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕ್‌ನಲ್ಲಿ ಅಡ ಇಟ್ಟಿದ್ದ ಗ್ರಾಹಕರ ಚಿನ್ನಾಭರಣವನ್ನು ಕದ್ದು ಬೆಟ್ಟಿಂಗ್ ಗೇಮ್ ಆಡುವ ಚಟಕ್ಕಿಳಿದಿದ್ದ ಈತ, ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆಂದು ಆರೋಪಿಸಲಾಗಿದೆ.

ಆನ್‌ಲೈನ್ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ಮ್ಯಾನೇಜರ್

ಕಿರಣ್ ಕುಮಾರ್ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಿದ್ದು, ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹತ್ತಿರ ಇದ್ದ ಕಾರಣ, ಮ್ಯಾನೇಜರ್ ಅವರ ಅನುಪಸ್ಥಿತಿಯಲ್ಲಿ ಸ್ವಲ್ಪಸ್ವಲ್ಪ ಚಿನ್ನ ಕದಿಯುತ್ತಿದ್ದ . ಜನವರಿ 2ರಂದು ಗ್ರಾಹಕರು ತಮ್ಮ ಅಡವಿಟ್ಟ ಚಿನ್ನ ಪಡೆಯಲು ಬಂದಾಗ ಲಾಕರ್ ಪರಿಶೀಲನೆ ನಡೆಸಿದ ವೇಳೆ ಕೆಲವು ಚಿನ್ನಾಭರಣಗಳ ನಾಪತ್ತೆ ಪತ್ತೆಯಾಗಿತ್ತು. ಬಳಿಕ ಇತರೆ ಪ್ಯಾಕೇಟ್ ಪರಿಶೀಲಿಸಿದ ಮ್ಯಾನೇಜರ್ 21 ಪ್ಯಾಕೇಟ್‌ಗಳಲ್ಲಿ ಕೆಲವು ಹಾಗೂ 3 ಪ್ಯಾಕೇಟ್‌ಗಳಲ್ಲಿ ಸಂಪೂರ್ಣ ಚಿನ್ನ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಸುಮಾರು 4 ಕೋಟಿ ರೂ. ಮೌಲ್ಯದ 2,783 ಗ್ರಾಂ ಚಿನ್ನ ಕಾಣೆಯಾಗಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್

ಆಂತರಿಕ ವಿಚಾರಣೆ ವೇಳೆ ಕೃತ್ಯ ತಪ್ಪೊಪ್ಪಿಕೊಂಡಿದ್ದ ಕಿರಣ್, ಕದ್ದ ಚಿನ್ನವನ್ನು ಬೇರೆ ಬೇರೆ ಅಂಗಡಿಯಲ್ಲಿ ಗಿರವಿ ಹಾಕಿ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಬಳಸಿದ್ದನು ಎನ್ನಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ನಂತರ ಕಿರಣ್ ಕುಮಾರ್ ಬಂಧಿತರಾಗಿದ್ದಾರೆ. ಈಗಾಗಲೇ 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಉಳಿದ ಚಿನ್ನ ಮತ್ತು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 am, Sat, 14 February 26

Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ